ಮಹಾದಾಯಿ ವಿವಾದ: ಅಮಿತ್ ಷಾ ನೇತೃತ್ವದಲ್ಲಿ ಬಿಜೆಪಿ ನಾಯಕರ ಸಂಧಾನ ಸಭೆ

ದೆಹಲಿಯಲ್ಲಿ ನಡೆದ ಮಹಾದಾಯಿ ಸಂಧಾನ ಸಭೆ.  

Last Updated : Dec 20, 2017, 05:00 PM IST
ಮಹಾದಾಯಿ ವಿವಾದ: ಅಮಿತ್ ಷಾ ನೇತೃತ್ವದಲ್ಲಿ ಬಿಜೆಪಿ ನಾಯಕರ ಸಂಧಾನ ಸಭೆ title=

ನವ ದೆಹಲಿ: ಮಹಾದಾಯಿ ಜಲವಿವಾದವನ್ನು ಬಗೆಹರಿಸರು ಬಿಜೆಪಿ ನಾಯಕರು ಅಮಿತ್ ಷಾ ನೇತೃತ್ವದಲ್ಲಿ ದೆಹಲಿಯಲ್ಲಿಂದು ಸಂಧಾನ ಸಭೆ ನಡೆಸಿದ್ದಾರೆ. 

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದಿನ ಸಭೆ ನನಗೆ ಸಮಾಧಾನ ತಂದಿದೆ. ಮಹಾದಾಯಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕರ್ ತಮ್ಮ ಅಭಿಪ್ರಾಯವನ್ನು ನಾಳೆ ತಿಳಿಸುವ ಸಾಧ್ಯತೆ ಇದೆ. ಅದನ್ನು  ನಾಳೆ ನಡೆಯುವ ಪರಿವರ್ತನಾ ಯಾತ್ರೆ ಸಂದರ್ಭದಲ್ಲಿ ಅಧಿಕೃತವಾಗಿ ಘೋಷಿಸಲಾಗುವುದು ಎಂದು ತಿಳಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್, ರಾಜ್ಯ ಉಸ್ತುವಾರಿ ಸಚಿವ ಮುರುಳಿಧರ್ ರಾವ್, ಬಿ. ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ್ ಜೋಷಿ ಉಪಸ್ಥಿತರಿದ್ದರು.

ಈ ಹಿಂದೆ ಮಹಾದಾಯಿ ವಿವಾದವನ್ನು ಬಗೆಹರಿಸಲು ರಾಜ್ಯ ಬಿಜೆಪಿ ನಾಯಕರು ಪ್ರಯತ್ನಿಸಿದ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದರು.

Trending News