Mahanadi Tragedy: ಒಡಿಶಾದ ಮಹಾನದಿಯಲ್ಲಿ ಮುಳುಗಿದ 60 ಜನರಿದ್ದ ದೋಣಿ, 2 ಸಾವು.. ಹಲವರು ನಾಪತ್ತೆ

Mahanadi Tragedy: ಈ ಅಪಘಾತದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಉಳಿದವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಪಥರ್ ಸೇನಿ ದೇವಸ್ಥಾನದ ಬಳಿಯ ಮಹಾನದಿಯಲ್ಲಿ ದೋಣಿ ಪಲ್ಟಿಯಾಗಿದೆ. ದೋಣಿಯಲ್ಲಿ 50 ರಿಂದ 60 ಜನರಿದ್ದರು ಎಂದು ಹೇಳಲಾಗಿದೆ. ಕೆಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಮೃತರು ಮತ್ತು ಕಾಣೆಯಾದವರ ಗುರುತು ಪತ್ತೆ ಕಾರ್ಯ ಆರಂಭವಾಗಿದೆ.

Written by - Manjunath N | Last Updated : Apr 19, 2024, 11:15 PM IST
  • ಈ ಅಪಘಾತದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಉಳಿದವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ
  • ಪಥರ್ ಸೇನಿ ದೇವಸ್ಥಾನದ ಬಳಿಯ ಮಹಾನದಿಯಲ್ಲಿ ದೋಣಿ ಪಲ್ಟಿಯಾಗಿದೆ. ದೋಣಿಯಲ್ಲಿ 50 ರಿಂದ 60 ಜನರಿದ್ದರು ಎಂದು ಹೇಳಲಾಗಿದೆ
  • ಕೆಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ
Mahanadi Tragedy: ಒಡಿಶಾದ ಮಹಾನದಿಯಲ್ಲಿ ಮುಳುಗಿದ 60 ಜನರಿದ್ದ ದೋಣಿ, 2 ಸಾವು.. ಹಲವರು ನಾಪತ್ತೆ title=

ಭುವನೇಶ್ವರ:  ಒಡಿಶಾದ ಝಾರ್ಸುಗುಡ ಜಿಲ್ಲೆಯಲ್ಲಿ ಶುಕ್ರವಾರ ದಾರುಣ ಘಟನೆ ನಡೆದಿದೆ. ಪತ್ತಾರ್ ಸೈನಿ ದೇಗುಲಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದ ಭಕ್ತರಿಂದ ತುಂಬಿದ್ದ ದೋಣಿ ಮಹಾನದಿಯಲ್ಲಿ ಮಗುಚಿ ಬಿದ್ದಿದೆ.

ಈ ಅಪಘಾತದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಉಳಿದವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಪಥರ್ ಸೇನಿ ದೇವಸ್ಥಾನದ ಬಳಿಯ ಮಹಾನದಿಯಲ್ಲಿ ದೋಣಿ ಪಲ್ಟಿಯಾಗಿದೆ. ದೋಣಿಯಲ್ಲಿ 50 ರಿಂದ 60 ಜನರಿದ್ದರು ಎಂದು ಹೇಳಲಾಗಿದೆ. ಕೆಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಮೃತರು ಮತ್ತು ಕಾಣೆಯಾದವರ ಗುರುತು ಪತ್ತೆ ಕಾರ್ಯ ಆರಂಭವಾಗಿದೆ.

ಮತ್ತೊಂದೆಡೆ, ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.ಪೊಲೀಸ್ ತಂಡದೊಂದಿಗೆ ರಕ್ಷಣಾ ತಂಡ ಕೂಡ ಆಗಮಿಸಿದೆ.ಅಪಘಾತದ ಸಮಯದಲ್ಲಿ ಪಥರ್ಸೇನಿ ಕುಡಾದಿಂದ ಬರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ಹೋಗುತ್ತಿದ್ದ ದೋಣಿಯಲ್ಲಿ ಜನರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಜಾರ್ಸುಗುಡ ಜಿಲ್ಲೆಯ ರೆಂಗಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾರದಾ ಘಾಟ್‌ಗೆ ದೋಣಿ ತಲುಪಲು ಮುಂದಾದಾಗ ಈ ಅವಘಡ ಸಂಭವಿಸಿದೆ. ಸ್ಥಳೀಯ ಮೀನುಗಾರರು 35 ಮಂದಿಯನ್ನು ರಕ್ಷಿಸಿ ದಡಕ್ಕೆ ತಂದಿದ್ದಾರೆ ಎಂದು ತಿಳಿಸಿದರು.

ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಮತ್ತು ಐದು ಮುಳುಗುಗಾರರನ್ನು ಕೂಡ ಸ್ಥಳಕ್ಕೆ ಕಳುಹಿಸಲಾಗಿದೆ.

ಪ್ರಯಾಣಿಕರನ್ನು ಹೊತ್ತು ಮಹಾನದಿ ಮೂಲಕ ದೋಣಿ ಸಾಗುತ್ತಿದ್ದಾಗ ಲಖನ್‌ಪುರ ಬ್ಲಾಕ್‌ನ ಶಾರದ ಬಳಿ ಬೋಟ್ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಘಟನೆಯ ನಂತರ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ನದಿಯಲ್ಲಿ ಬಿದ್ದ ಜನ ಚೀರಾಡುತ್ತಿದ್ದರು. ಘಟನೆ ಗಮನಕ್ಕೆ ಬಂದ ತಕ್ಷಣ ಅಲ್ಲಿದ್ದ ಮೀನುಗಾರರು ಉಸ್ತುವಾರಿ ವಹಿಸಿ ದೋಣಿಗಳನ್ನು ನದಿಗೆ ಕೊಂಡೊಯ್ದು ಜನರನ್ನು ಒಬ್ಬೊಬ್ಬರಾಗಿ ಸ್ಥಳಾಂತರಿಸಲು ಆರಂಭಿಸಿದರು. ಮೀನುಗಾರರು ಎಲ್ಲ ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News