New Army Chief: ಲೆಫ್ಟನೆಂಟ್ ಜನರಲ್ ಮನೋಜ್ ಪಾಂಡೆ ಮುಂದಿನ ಸೇನಾ ಮುಖ್ಯಸ್ಥ, CDS ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆಯೇ ನರವಣೆ?

Army Chief: ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಲೇಫ್ಟನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ಮನೋಜ್ ಮುಕುಂದ್ ನರವಣೆ ಅವರು ಆ ಸ್ಥಾನವನ್ನು ಅಲಂಕರಿಸಿದ್ದಾರೆ ಮತ್ತು ಈ ತಿಂಗಳಾಂತ್ಯದಲ್ಲಿ ಅವರು ನಿವೃತ್ತಿಯನ್ನು ಹೊಂದಲಿದ್ದಾರೆ.  

Written by - Nitin Tabib | Last Updated : Apr 18, 2022, 07:41 PM IST
  • ಮನೋಜ್ ಪಾಂಡೆ ದೇಶದ ನೂತನ ಸೇನಾ ಮುಖ್ಯಸ್ಥ
  • ಈ ಹುದ್ದೆ ಅಲಂಕರಿಸುತ್ತಿರುವ ಮೊದಲ ಇಂಜಿನಿಯರ್ ಅಧಿಕಾರಿ
  • CDS ಆಗಿ ನೇಮಕಗೊಳ್ಳಲಿದ್ದಾರೆಯೇ ನರವಣೆ?
New Army Chief: ಲೆಫ್ಟನೆಂಟ್ ಜನರಲ್ ಮನೋಜ್ ಪಾಂಡೆ ಮುಂದಿನ ಸೇನಾ ಮುಖ್ಯಸ್ಥ, CDS ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆಯೇ  ನರವಣೆ? title=
New Army Chief

New Army Chief: ದೇಶದ ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ. ಏಪ್ರಿಲ್ 30 ರಂದು ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರಿಗೆ ಭಾರತೀಯ ಸೇನೆಯ ಕಮಾಂಡ್ ನೀಡಲಾಗುವುದು. ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಈ ಸ್ಥಾನಕ್ಕೆ ಬಂದ ಮೊದಲ ಇಂಜಿನಿಯರ್ ಅಧಿಕಾರಿಯಾಗಿದ್ದಾರೆ. 

ಪ್ರಸ್ತುತ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆ ಅವರು ಈ ತಿಂಗಳ ಕೊನೆಯಲ್ಲಿ ನಿವೃತ್ತರಾಗಲಿದ್ದಾರೆ . ಮನೋಜ್ ಮುಕುಂದ್ ನರವಣೆ ನಂತರ, ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರು ಸೇನೆಯ ಅತ್ಯಂತ ಹಿರಿಯ ಅಧಿಕಾರಿಯಾಗಿದ್ದಾರೆ.
ಮನೋಜ್ ಪಾಂಡೆ ಅವರ ವೃತ್ತಿಜೀವನವು ಅನೇಕ ಸಾಧನೆಗಳಿಂದ ಕೂಡಿದೆ

39 ವರ್ಷಗಳ ಕಾಲ ತಮ್ಮ ಮಿಲಿಟರಿ ವೃತ್ತಿಜೀವನದಲ್ಲಿ, ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರು ಪಶ್ಚಿಮ ರಂಗಮಂದಿರದಲ್ಲಿ ಇಂಜಿನಿಯರ್ ಬ್ರಿಗೇಡ್, LOC ಯಲ್ಲಿ ಪದಾತಿ ದಳ, ಲಡಾಖ್ ಸೆಕ್ಟರ್‌ನಲ್ಲಿ ಪರ್ವತ ವಿಭಾಗ ಮತ್ತು ಈಶಾನ್ಯದಲ್ಲಿ ಕಾರ್ಪ್ಸ್‌ಗೆ ಕಮಾಂಡ್ ಮಾಡಿದ್ದಾರೆ. ಈಸ್ಟರ್ನ್ ಕಮಾಂಡ್ ಆಗಿ ಅಧಿಕಾರ ವಹಿಸಿಕೊಳ್ಳುವ ಮೊದಲು, ಅವರು ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌ನ ಕಮಾಂಡರ್-ಇನ್-ಚೀಫ್ ಹುದ್ದೆಯನ್ನು ಅಲಂಕರಿಸಿದ್ದಾರೆ.

 

ಇದನ್ನೂ ಓದಿ-ಇನ್ಫಿ ನಾರಾಯಣ ಮೂರ್ತಿ ಅಳಿಯ ರಿಷಿ ಸುನಕ್ ಕುರಿತು ನಿಮಗೆ ಗೊತ್ತಿಲ್ಲದ ಮಾಹಿತಿ ಇಲ್ಲಿದೆ..

CDS ಆಗಿ ನರವಣೆ ನೇಮಕ!
ಪ್ರಸ್ತುತ ಸೇನೆಯ ಮುಖ್ಯಸ್ಥರಾಗಿರುವ ಜನರಲ್ ಎಂಎಂ ನರವಣೆ ಅವರನ್ನು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಹುದ್ದೆಗೆ ಅತ್ಯಂತ ಅರ್ಹ ಸ್ಪರ್ಧಿ ಎಂದು ಪರಿಗಣಿಸಲಾಗಿದೆ ಎಂಬುದು ಇಲ್ಲಿ ಗಮನಾರ್ಥ

ಇದನ್ನೂ ಓದಿ-ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಪುತ್ರನಿಗೆ ʼಸುಪ್ರೀಂʼ ಸಂಕಷ್ಟ

ಸಿಡಿಎಸ್ ಹುದ್ದೆ ಖಾಲಿ ಇದೆಯೇ?
ದೇಶದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದ ನಂತರ ಅವರ ಹುದ್ದೆ ಇನ್ನೂ ಖಾಲಿ ಇರುವುದು ಇಲ್ಲಿ ಉಲ್ಲೇಖನೀಯ. ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಮತ್ತು ಇತರ 12 ಸೇನಾ ಅಧಿಕಾರಿಗಳು 8 ಡಿಸೆಂಬರ್ 2021 ರಂದು ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದರು. ಇತ್ತೀಚೆಗೆ, ಜನರಲ್ ಬಿಪಿನ್ ರಾವತ್ ಅವರಿಗೆ ಮರಣೋತ್ತರವಾಗಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ಸಹ  ನೀಡಲಾಗಿದೆ. ಜನರಲ್ ರಾವತ್ ಅವರ ಪುತ್ರಿಯರು (ತಾರಿಣಿ ಮತ್ತು ಕೀರ್ತಿಕಾ) ಈ ಗೌರವವನ್ನು ಸ್ವೀಕರಿಸಿದ್ದಾರೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

Trending News