ಕೊರೋನಾ ಪೀಡಿತರ ಸಂಖ್ಯೆ, 23,077ಕ್ಕೆ, ಮೃತಪಟ್ಟವರ ಸಂಖ್ಯೆ‌ 718ಕ್ಕೆ ಏರಿಕೆ

ಕೊರೋನಾ ನಿಯಂತ್ರಿಸಲು ಮೊದಲಿಗೆ ಮಾರ್ಚ್ 25ರಿಂದ ಏಪ್ರಿಲ್ 14ರವರೆಗೆ ಲಾಕ್​ಡೌನ್ ಜಾರಿಗೊಳಿಸಲಾಗಿತ್ತು. ಆದರೂ ಕೊರೋನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಏಪ್ರಿಲ್ 15ರಿಂದ ಮೇ 3ರವರೆಗೆ ಎರಡನೇ ಹಂತದ ಲಾಕ್​ಡೌನ್ ಜಾರಿಗೊಳಿಸಲಾಗಿತ್ತು.  

Last Updated : Apr 24, 2020, 09:43 AM IST
ಕೊರೋನಾ ಪೀಡಿತರ ಸಂಖ್ಯೆ, 23,077ಕ್ಕೆ, ಮೃತಪಟ್ಟವರ ಸಂಖ್ಯೆ‌ 718ಕ್ಕೆ ಏರಿಕೆ title=

ನವದೆಹಲಿ: ಲಾಕ್​ಡೌನ್ ನಂಥ ಪರಿಣಾಮಕಾರಿ ಕ್ರಮ ಕೈಗೊಂಡ ಬಳಿಕವೂ, ಪರೀಕ್ಷೆಗಳನ್ನು ತೀವ್ರಗೊಳಿಸುತ್ತಿರುವ ನಡುವೆಯೂ ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ 23,077ಕ್ಕೆ ಏರಿಕೆಯಾಗಿದೆ.  ಅಲ್ಲದೆ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ‌ 718ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಗಳ ಪ್ರಕಾರ ದೇಶದಲ್ಲಿ ಮೊದಲ ಬಾರಿಗೆ  ಲಾಕ್ ಡೌನ್ (Lockdown)  ಘೋಷಣೆ ಮಾಡುವ ಮುನ್ನ ಏಪ್ರಿಲ್ 19ರಂದು ಇಡೀ ದೇಶದಲ್ಲಿ ಇದ್ದ ಕೊರೋನಾ ಪೀಡಿತರ ಸಂಖ್ಯೆ ಕೇವಲ 166. ಆದರೀಗ ಆ ಸಂಖ್ಯೆ 23,077ಕ್ಕೆ ಏರಿಕೆಯಾಗಿದೆ. ಕೊರೋನಾದಿಂದ ಗುಣಮುಖರಾದವರು 4,748ಜನ ಮಾತ್ರ.

ಬೆಳಗಾವಿಯಲ್ಲಿ ಕೋವಿಡ್-19 ವಾರ್ ರೂಮ್ ಗೆ ಚಾಲನೆ

ಕೊರೋನಾ ಕೋವಿಡ್-19 (Covid-19) ನಿಯಂತ್ರಿಸಲು ಮೊದಲಿಗೆ ಮಾರ್ಚ್ 25ರಿಂದ ಏಪ್ರಿಲ್ 14ರವರೆಗೆ ಲಾಕ್​ಡೌನ್ ಜಾರಿಗೊಳಿಸಲಾಗಿತ್ತು. ಆದರೂ ಕರೋನಾವೈರಸ್ (Coronavirus) ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಏಪ್ರಿಲ್ 15ರಿಂದ ಮೇ 3ರವರೆಗೆ ಎರಡನೇ ಹಂತದ ಲಾಕ್​ಡೌನ್ ಜಾರಿಗೊಳಿಸಲಾಗಿತ್ತು. ಈ ನಡುವೆ ದೇಶದ ಆರ್ಥಿಕತೆ ಮತ್ತು ಉತ್ಪಾದನೆಗೆ ಧಕ್ಕೆ ಆಗಬಾರದೆಂದು ಮತ್ತು ದೇಶದ ಜನ ಜೀವನ ಅಸ್ತವ್ಯಸ್ತ ಆಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 20ರಿಂದ ಲಾಕ್​ಡೌನ್ ನಿಯಮಗಳನ್ನು ಸಡಿಲಗೊಳಿಸಲಾಗಿತ್ತು.

ಈ ನಡುಯ ಮೇ 3ರ ಬಳಿಕ‌ ಲಾಕ್​ಡೌನ್ ಅನ್ನು ತೆರವುಗೊಳೊಸಬೇಕೋ ಅಥವಾ ಮುಂದುವರೆಸಬೇಕೋ ಎಂಬ ಗೊಂದಲ ಕೇಂದ್ರ ಸರ್ಕಾರವನ್ನು ಕಾಡುತ್ತಿದೆ. ಲಾಕ್​ಡೌನ್  ತೆರೆವುಗೊಳಿಸಿದರೆ ಕೊರೋನಾ ಸೋಂಕು ಹರಡುವಿಕೆ ತೀವ್ರಗೊಳ್ಳಬಹುದು, ಲಾಕ್​ಡೌನ್  ಮುಂದುವರೆಸಿದರೆ  ದೇಶದ ಆರ್ಥಿಕತೆ ಕುಸಿಯಲಿವೆ ಎಂಬ ಆತಂಕ ಇದೆ. ಈ ಹಿನ್ನೆಲೆಯಲ್ಲಿ ಯಾವ ತೀರ್ಮಾನ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರ ಗೊಂದಲಕ್ಕೆ ಸಿಲುಕಿದೆ.

Lockdown: ಮನೆ ತಲುಪಲು 1000 KM ದೋಣಿಯಲ್ಲಿ ಸಾಗಿದ ಕಾರ್ಮಿಕರು, ಮುಂದೆ...!

ಏಪ್ರಿಲ್ 27ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸಲಿದ್ದಾರೆ. ಸಭೆಯ ಬಳಿಕ ಮೇ 3ರ ಬಳಿಕವೂ ಲಾಕ್​ಡೌನ್ ಮುಂದುವರೆಸಬೇಕೊ ಬೇಡವೋ ಎಂಬ ಬಗ್ಗೆ ಕೇಂದ್ರ ಸರ್ಕಾರ ಅಂತಿಮ‌ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

Trending News