ಬಿಜೆಪಿಯ ದೇಣಿಗೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ!; ಪಕ್ಷಕ್ಕೆ ಮೋದಿ ಮಾಡಿದ ದಾನ ಎಷ್ಟು..?

BJP Donation Campaign: ಪಕ್ಷಕ್ಕೆ ದೇಣಿಗೆ ನೀಡಲು ನನಗೆ ಸಂತೋಷವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮ ಪ್ರಯತ್ನಗಳನ್ನು ಬಲಪಡಿಸಿ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಎಲ್ಲರೂ ಸೇರಲು ಮತ್ತು ಕೊಡುಗೆ ನೀಡಲು ನಾನು ವಿನಂತಿಸುತ್ತೇನೆ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

Written by - Puttaraj K Alur | Last Updated : Mar 3, 2024, 06:36 PM IST
  • ಬಿಜೆಪಿಯ ದೇಣಿಗೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ
  • ಸ್ವತಃ ಪಕ್ಷಕ್ಕೆ 2 ಸಾವಿರ ರೂ. ದೇಣಿಗೆ ನೀಡಿರುವ ಪ್ರಧಾನಿ ಮೋದಿ
  • ಇತ್ತೀಚೆಗೆ ಎಲೆಕ್ಟೋರಲ್ ಬಾಂಡ್‌ಗಳನ್ನು ನಿಷೇಧಿಸಿರುವ ಸುಪ್ರೀಂಕೋರ್ಟ್
ಬಿಜೆಪಿಯ ದೇಣಿಗೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ!; ಪಕ್ಷಕ್ಕೆ ಮೋದಿ ಮಾಡಿದ ದಾನ ಎಷ್ಟು..? title=
ಬಿಜೆಪಿಯ ದೇಣಿಗೆ ಅಭಿಯಾನಕ್ಕೆ ಚಾಲನೆ

ಬಿಜೆಪಿಯ ದೇಣಿಗೆ ಅಭಿಯಾನಕ್ಕೆ ಚಾಲನೆ: ಇತ್ತೀಚೆಗೆ ಇಡೀ ದೇಶದಲ್ಲಿ ಚುನಾವಣಾ ಬಾಂಡ್‌ಗಳ ಬಗ್ಗೆ ಭಾರೀ ಚರ್ಚೆ ನಡೆದಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ಕೂಡ ರಾಜಕೀಯ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದೆ. ಏತನ್ಮಧ್ಯೆ ಪ್ರಧಾನಿ ಮೋದಿ ಮತ್ತೆ ತಮ್ಮ ಪಕ್ಷ ಬಿಜೆಪಿಗೆ ದೇಣಿಗೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸ್ವತಃ ಪ್ರಧಾನಿ ಮೋದಿ ಸಹ ತಮ್ಮ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ತಮ್ಮ ಪಕ್ಷದ ದೇಣಿಗೆ ಅಭಿಯಾನಕ್ಕೆ ಚಾಲನೆ ನೀಡಿದ ಅವರು, ʼನಮೋ ಆ್ಯಪ್‌ʼ ಮೂಲಕ ಬಿಜೆಪಿಗೆ ದೇಣಿಗೆ ನೀಡಿದ್ದಾರೆ.

ಈ ಅವಧಿಯಲ್ಲಿ ಪ್ರಧಾನಿ ಮೋದಿ 2 ಸಾವಿರ ರೂ. ದೇಣಿಗೆ ನೀಡಿದ್ದಾರೆ. ಅದರ ಸ್ಕ್ರೀನ್‌ಶಾಟ್ ಅನ್ನು ಸಹ ಪಿಎಂ ಹಂಚಿಕೊಂಡಿದ್ದಾರೆ. ʼಪಕ್ಷಕ್ಕೆ ಕೊಡುಗೆ ನೀಡಲು ನನಗೆ ಸಂತೋಷವಾಗಿದೆʼ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮ ಪ್ರಯತ್ನಗಳನ್ನು ಬಲಪಡಿಸಿ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಎಲ್ಲರೂ ಸೇರಲು ಮತ್ತು ಕೊಡುಗೆ ನೀಡಲು ನಾನು ವಿನಂತಿಸುತ್ತೇನೆʼ ಎಂದು ಅವರು ದೇಶದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. 

ಇದನ್ನೂ ಓದಿ: ಧರ್ಮಶಾಲಾ ಟೆಸ್ಟ್’ನಲ್ಲಿ ಈ ದಾಖಲೆ ಮುರಿಯಲು ಕಾಯುತ್ತಿದ್ದಾರೆ ಯಶಸ್ವಿ ಜೈಸ್ವಾಲ್!

ಪ್ರಧಾನಿ ಮೋದಿ ಅವರು ಹಂಚಿಕೊಂಡ ಸ್ಕ್ರೀನ್‌ಶಾಟ್‌ನಲ್ಲಿ, ದೇಣಿಗೆಯ ಮೊತ್ತ 2 ಸಾವಿರ ರೂ. ಎಂದು ಕಂಡುಬರುತ್ತದೆ. ಇದರ ಹೊರತಾಗಿ PM ಅವರು ಲಿಂಕ್ ಅನ್ನು ಸಹ ಹಂಚಿಕೊಂಡಿದ್ದಾರೆ. ಇದರಲ್ಲಿ ಯಾರಾದರೂ 2 ರಿಂದ 5 ಸಾವಿರ ರೂ.ವರೆಗೆ ದೇಣಿಗೆ ನೀಡಬಹುದು ಎಂದು ಹೇಳಲಾಗಿದೆ. 

ಎಲೆಕ್ಟೋರಲ್ ಬಾಂಡ್‌ಗಳ ಮೇಲೆ ನಿಷೇಧ..!

ಇತ್ತೀಚೆಗೆ ಸುಪ್ರೀಂಕೋರ್ಟ್ ಎಲೆಕ್ಟೋರಲ್ ಬಾಂಡ್‌ಗಳನ್ನು ನಿಷೇಧಿಸಿದೆ. ಇದೇ ಸಮಯದಲ್ಲಿ ಪ್ರಧಾನಿ ಮೋದಿಯವರು ಬಿಜೆಪಿ ದೇಣಿಗೆ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸುಪ್ರೀಂಕೋರ್ಟ್ ಚುನಾವಣಾ ಬಾಂಡ್‌ಗಳನ್ನು ಅಸಂವಿಧಾನಿಕ ಎಂದು ಘೋಷಿಸಿದ್ದು, ಈ ನೀತಿಯನ್ನು ರದ್ದುಗೊಳಿಸಿದೆ. ಚುನಾವಣಾ ಬಾಂಡ್ ಯೋಜನೆಯು ಮಾಹಿತಿ ಹಕ್ಕಿಗೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ. 

ಇಷ್ಟೇ ಅಲ್ಲ 2019ರಿಂದ ಇಲ್ಲಿಯವರೆಗೆ ಮಾಹಿತಿ ಕೇಳುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ. ಬಾಂಡ್‌ಗಳನ್ನು ವಿತರಿಸುವ ಎಸ್‌ಬಿಐ ಏಪ್ರಿಲ್ 2019ರಿಂದ ಇಲ್ಲಿಯವರೆಗೆ ಎಷ್ಟು ಜನರು ಎಷ್ಟು ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ್ದಾರೆ ಎಂಬ ಮಾಹಿತಿಯನ್ನು ಒದಗಿಸಬೇಕಾಗುತ್ತದೆ. ಎಸ್‌ಬಿಐ ಈ ಮಾಹಿತಿಯನ್ನು ನೀಡಲಿದೆ. ಬಳಿಕ ಚುನಾವಣಾ ಆಯೋಗ ಈ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಲಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮನೆಯಲ್ಲಿ ಇಲಿಗಳ ಕಾಟ ಇದೆಯೇ? ಹಾಗಾದ್ರೆ ಹೀಗೆ ಮಾಡಿ.. ಮತ್ತೆಂದೂ ಅತ್ತಕಡೆ ಬರಲ್ಲ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News