ಚಂಡೀಗಢ: ಬ್ರಿಟನ್ ರಾಣಿ ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಬ್ರಿಟನ್ ಹೈಕಮಿಷನ್ ಆಹ್ವಾನವನ್ನು ಸ್ವೀಕರಿಸಲು ಪಂಜಾಬ್ ರಾಜ್ಯಪಾಲ ವಿ.ಪಿ.ಸಿಂಗ್ ಬದನೋರ್ ನಿರಾಕರಿಸಿದ್ದಾರೆ. ಏಪ್ರಿಲ್ 13ರಂದು ಜಲಿಯನ್ ವಾಲಾಬಾಗ್ ದುರಂತ ನಡೆದು 100 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಂಬಂಧ ಹುಟ್ಟುಹಬ್ಬದಲ್ಲಿ ಭಾಗಿಯಾಗಲು ನಿರಾಕರಿಸಿದ್ದಾರೆ.
ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಬಾದ್ನಾರ್ ಅವರನ್ನು ಆಹ್ವಾನಿಸಲಾಗಿತ್ತು. ಆದರೆ, ಆ ಸಮಾರಂಭದಲ್ಲಿ ಹಾಜರಾಗಲು ಆಗುವುದಿಲ್ಲ ಎಂದು ಬ್ರಿಟಿಷ್ ಡೆಪ್ಯೂಟಿ ಹೈ ಕಮಿಷನರ್ ಆಂಡ್ರ್ಯೂ ಐರೆಗೆ ಬುಧವಾರ ಸಂಜೆ ಪತ್ರದ ಮುಖೇನ ತಿಳಿಸಿದ್ದಾರೆ.
"ರಾಣಿಯವರ ಹುಟ್ಟುಹಬ್ಬದ ಆಚರಣೆಗೆ ವಿಶೇಷ ಅತಿಥಿಯಾಗಿ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಧನ್ಯವಾದಗಳು. ನಾನು ಅವರಿಗೆ ದೀರ್ಘಾಯುಷ್ಯ ಮತ್ತು ಒಳ್ಳೆಯ ಆರೋಗ್ಯವನ್ನು ನೀಡುವಂತೆ ಆ ದೇವರಲ್ಲಿ ಪ್ರಾರ್ಥಿಸುತ್ತೇನೆ" ಎಂದು ಪತ್ರದಲ್ಲಿ ತಿಳಿಸಿದ್ದಾರೆ.