Punjab Politics Latest Update: ಪಂಜಾಬ್ ಕಾಂಗ್ರೆಸ್ ಗೆ ಬಿಗ್ ಶಾಕ್!, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ

Punjab Politics Latest Update: ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಭಾರೀ ಹಿನ್ನಡೆ ಅನುಭವಿಸಿದೆ. ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Written by - Nitin Tabib | Last Updated : Sep 28, 2021, 05:32 PM IST
  • ಪಂಜಾಬ್ ಕಾಂಗ್ರೆಸ್ ಗೆ ಶಾಕ್ ನೀಡಿದ ಸಿಧು.
  • ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಧು
  • ಯಾವುದೇ ಓರ್ವ ವ್ಯಕ್ತಿಯ ಚರಿತ್ರೆಯಲ್ಲಿನ ಕುಸಿತ ರಾಜಿಯಿಂದ ಆರಂಭವಾಗುತ್ತದೆ ಎಂದ ಸಿಧು.
Punjab Politics Latest Update: ಪಂಜಾಬ್ ಕಾಂಗ್ರೆಸ್ ಗೆ ಬಿಗ್ ಶಾಕ್!, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ title=
Punjab Politics Latest Update (File Photo)

Punjab Politics Latest Update: ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಭಾರೀ ಹಿನ್ನಡೆ ಅನುಭವಿಸಿದೆ. ಪಂಜಾಬ್ ಕಾಂಗ್ರೆಸ್ ಸಮಿತಿ (Punjab State Congress Committee) ಅಧ್ಯಕ್ಷ ನವಜೋತ್ ಸಿಂಗ್ ಸಿಧು (Navajot Singh Sidhu) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ತಾವು ಪಕ್ಷದಲ್ಲಿಯೇ ಉಳಿಯುವುದಾಗಿ ಸಿಧು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಕುರಿತು ಸಿದ್ದು ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.

ಈ ಕುರಿತು ತಮ್ಮ ಪತ್ರದಲ್ಲಿ ಉಲ್ಲೇಖಿಸಿರುವ ಸಿಧು "ಯಾವುದೇ ಓರ್ವ ವ್ಯಕ್ತಿಯ ಚರಿತ್ರೆಯಲ್ಲಿನ ಕುಸಿತ ರಾಜಿ ಮಾಡಿಕೊಳ್ಳುವುದರಿಂದ ಆರಂಭವಾಗುತ್ತದೆ. ಪಂಜಾಬ್ ನ ಭವಿಷ್ಯ ಹಾಗೂ ಪಂಜಾಬ್ ಕಲ್ಯಾಣದ ಕುರಿತು ಎಂದಿಗೂ ಕೂಡ ರಾಜಿ ಮಾಡಿಕೊಳ್ಳುವುದಿಲ್ಲ. ಹೀಗಾಗಿ ನಾನು ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಆದರೆ, ಕಾಂಗ್ರೆಸ್ ನಲ್ಲಿ ನನ್ನ ಸೇವೆಯನ್ನು ಮುಂದುವರೆಸಲಿದ್ದೇನೆ" ಎಂದು ಹೇಳಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಅವರು ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ (Captain Amarinder Singh) ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದರು. ನಂತರ ನಡೆದ ಬೆಳವಣಿಗೆಗಳಲ್ಲಿ  ಕ್ಯಾಪ್ಟನ್ ಅಮರಿಂದರ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ನಂತರ ಕಾಂಗ್ರೆಸ್ ಚರಣ್ಜಿತ್ ಸಿಂಗ್ ಚನ್ನಿಯನ್ನು (Charanjit Singh Chenni) ಪಂಜಾಬ್ ನ ಸಿಎಂ ಆಗಿ ನೇಮಕ ಮಾಡಿತ್ತು. ಇದರ ನಂತರ, ಪಂಜಾಬ್ ನಲ್ಲಿ ಕಾಂಗ್ರೆಸ್ ಎಲ್ಲವನ್ನೂ ಸರಿದಾರಿಗೆ ತಂದಿದೆ ಎಂದು ಭಾವಿಸಲಾಗಿತ್ತು. ಆದರೆ, ಇದೀಗ ಸಿದ್ದು ರಾಜೀನಾಮೆ ನೀಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ.

ಮೂಲಗಳ ಪ್ರಕಾರ, ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ ನಂತರ, ನವಜೋತ್ ಸಿಂಗ್ ಸಿಧು ಸ್ವತಃ ಸಿಎಂ ಆಗಲು ಬಯಸಿದ್ದರು, ಆದರೆ ಪಕ್ಷವು ಬೇರೆ ರೀತಿಯಲ್ಲಿ ಆಲೋಚಿಸಿದೆ. ಆ ಸಮಯದಲ್ಲಿ ಪಕ್ಷದ ಈ ನಿರ್ಧಾರವನ್ನು ಸಿದ್ದು ಒಪ್ಪಿಕೊಂಡರು. ಆದರೆ, ಇದೀಗ ರಾಜೀನಾಮೆ ನೀಡಿದ ನಂತರ,  ತಮ್ಮನ್ನು ಸಿಎಂ ಮಾಡದೆ ಇದ್ದುದಕ್ಕೆ ಸಿಧು ಅಸಮಾಧಾನಗೊಂಡಿದ್ದಾರೆ ಎಂಬುದು ದೃಢಪಟ್ಟಿದಂತಾಗಿದೆ.

ಇಂದೇ ಖಾತೆ ಹಂಚಿಕೆ ಮಾಡಿದ ಚೆನ್ನಿ, ಉಪಮುಖ್ಯಮಂತ್ರಿ ರಂಧಾವಾಗೆ ಗೃಹ ಖಾತೆ
ಪಂಜಾಬ್ ನೂತನ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ, ಹೊಸ ಮಂತ್ರಿಗಳಿಗೆ ಖಾತೆಗಳನ್ನು ಹಂಚುವಾಗ ಒಟ್ಟು 14 ಖಾತೆಗಳನ್ನು ತನ್ನ ಬಳಿ ಇಟ್ಟುಕೊಂಡಿದ್ದರು ಮತ್ತು ಗೃಹ ಇಲಾಖೆಯ ಉಸ್ತುವಾರಿಯನ್ನು ಉಪ ಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧವಾ ಮತ್ತು ಆರೋಗ್ಯ ಇಲಾಖೆಯ ಜವಾಬ್ದಾರಿಯನ್ನು ಉಪಮುಖ್ಯಮಂತ್ರಿ ಒಪಿ ಸೋನಿಗೆ ವಹಿಸಿದ್ದರು. ಅವರು ಸ್ಥಳೀಯ ಆಡಳಿತ ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯ ಜವಾಬ್ದಾರಿಯನ್ನು ಹಿರಿಯ ನಾಯಕ ಬ್ರಹ್ಮ ಮಹೀಂದ್ರ ಅವರಿಗೆ ವಹಿಸಿದ್ದಾರೆ. ಮುಖ್ಯಮಂತ್ರಿಯವರು ನಿರ್ವಹಿಸಲಿರುವ ಪ್ರಮುಖ ಪೋರ್ಟ್‌ಫೋಲಿಯೊಗಳಲ್ಲಿ ವಿದ್ಯುತ್, ಅಬಕಾರಿ, ಗಣಿಗಾರಿಕೆ ಮತ್ತು ಭೂವಿಜ್ಞಾನ, ಪರಿಸರ ಮತ್ತು ನಾಗರಿಕ ವಿಮಾನಯಾನ ಸೇರಿವೆ. ರಾಂಧವ ಅವರಿಗೆ ಸಹಕಾರ ಇಲಾಖೆ ಮತ್ತು ಕಾರಾಗೃಹ ಇಲಾಖೆಯ ಉಸ್ತುವಾರಿಯನ್ನು ನೀಡಲಾಗಿದೆ. ಸೋನಿ ರಕ್ಷಣಾ ಸೇವೆಗಳ ಕಲ್ಯಾಣ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಮತ್ತೊಬ್ಬ ಹಿರಿಯ ಸಚಿವ ಮನ್ ಪ್ರೀತ್ ಸಿಂಗ್ ಬಾದಲ್ ಅವರಿಗೆ ಹಣಕಾಸು ಖಾತೆ ನೀಡಲಾಗಿದೆ.

ಇದನ್ನೂ ಓದಿ-Punjab Congressನಲ್ಲಿ ಬಿರುಕು! ಸಿಧು ವಿರುದ್ಧ ಅಭ್ಯರ್ಥಿ ಕಣಕ್ಕಿಳಿಸುವುದಾಗಿ ಘೋಷಿಸಿದ ಕ್ಯಾಪ್ಟನ್

ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ನೇತೃತ್ವದ ಕ್ಯಾಬಿನೆಟ್‌ನಲ್ಲಿದ್ದ ಬಾದಲ್ ಸೇರಿದಂತೆ ಅನೇಕ ಮಂತ್ರಿಗಳಿಂದ ಅವರ ಹಳೆ ಖಾತೆ ವಾಪಸ್ ಪಡೆಯಲಾಗಿಲ್ಲ. ತ್ರಿಪ್ತ್ ರಾಜಿಂದರ್ ಸಿಂಗ್ ಬಾಜ್ವಾ ಗ್ರಾಮೀಣ ಮತ್ತು ಪಂಚಾಯತ್ ಮತ್ತು ಪಶು ಸಂಗೋಪನೆ, ಮೀನುಗಾರಿಕೆ ಮತ್ತು ಡೈರಿ ಅಭಿವೃದ್ಧಿ ಸಚಿವರಾಗಿರುತ್ತಾರೆ. ಅರುಣಾ ಚೌಧರಿಗೆ ಕಂದಾಯ, ಸುಖಬಿಂದರ್ ಸಿಂಗ್ ಸರ್ಕಾರಿಯಾ ಜಲ ಸಂಪನ್ಮೂಲ ಖಾತೆ, ರಜಿಯಾ ಸುಲ್ತಾನ ನೀರು ಸರಬರಾಜು ಮತ್ತು ನೈರ್ಮಲ್ಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಭರತ್ ಭೂಷಣ್ ಅಶು ಅವರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಖಾತೆಗಳನ್ನು ನೀಡಲಾಗಿದೆ. ವಿಜಯ್ ಇಂದರ್ ಸಿಂಗ್ಲಾ ಅವರು ಲೋಕೋಪಯೋಗಿ ಇಲಾಖೆಯನ್ನು ನಿಭಾಯಿಸಲಿದ್ದಾರೆ. ಆದರೆ ಈ ಹಿಂದೆ ಅವರ ಜೊತೆಗಿದ್ದ ಶಾಲಾ ಶಿಕ್ಷಣ ಇಲಾಖೆಯನ್ನು ಹೊಸ ಸಚಿವ ಪರ್ಗತ್ ಸಿಂಗ್ ಅವರಿಗೆ ನೀಡಲಾಗಿದ್ದು, ಅವರು ಹೊಸ ಕ್ರೀಡಾ ಸಚಿವರಾಗಲಿದ್ದಾರೆ.

ಇದನ್ನೂ ಓದಿ-Punjab New Chief Minister: ಪಂಜಾಬ್ CM ಆಫರ್ ತಿರಸ್ಕರಿಸಿದ Ambika Soni, ಶಾಸಕಾಂಗ ಪಕ್ಷದ ಸಭೆಯೂ ರದ್ದು

ಹೊಸ ಮಂತ್ರಿಗಳಲ್ಲಿ ರಣದೀಪ್ ಸಿಂಗ್ ನಭಾ, ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ, ರಾಣಾ ಗುರ್ಜಿತ್ ಸಿಂಗ್ ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ತರಬೇತಿ ಮತ್ತು ತೋಟಗಾರಿಕೆ ಇಲಾಖೆ, ರಾಜ್ ಕುಮಾರ್ ವೆರ್ಕಾ ಅವರು ಸಾಮಾಜಿಕ ನ್ಯಾಯ, ಸಬಲೀಕರಣ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆ, ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಇಲಾಖೆಯನ್ನು ನಿರ್ವಹಿಸಲಿದ್ದಾರೆ. ಇನ್ನೊಬ್ಬ ಹೊಸಬ ಅಮರೀಂದರ್ ಸಿಂಗ್ ರಾಜಾ ವೇರಿಂಗ್ ಸಾರಿಗೆ ಸಚಿವರಾಗುತ್ತಾರೆ, ಸಂಗತ್ ಸಿಂಗ್ ಗಿಲ್ಜಿಯಾನ್ ಅರಣ್ಯ, ವನ್ಯಜೀವಿ ಮತ್ತು ಕಾರ್ಮಿಕ ಸಚಿವರಾಗಿದ್ದರೆ, ಗುರ್ಕೀರತ್ ಸಿಂಗ್ ಕೊಟ್ಲಿ ಕೈಗಾರಿಕೆಗಳು ಮತ್ತು ವಾಣಿಜ್ಯ ಖಾತೆಯನ್ನು ನಿರ್ವಹಿಸಲಿದ್ದಾರೆ. ಮುಖ್ಯಮಂತ್ರಿಗಳು ಸಿಬ್ಬಂದಿ, ಜಾಗರೂಕತೆ, ಸಾಮಾನ್ಯ ಆಡಳಿತ, ನ್ಯಾಯ, ಕಾನೂನು ಮತ್ತು ಶಾಸಕಾಂಗ ವ್ಯವಹಾರಗಳು, ಮಾಹಿತಿ ಮತ್ತು ಸಾರ್ವಜನಿಕ ಸಂಬಂಧಗಳು, ಹೂಡಿಕೆ ಪ್ರಚಾರ, ಆತಿಥ್ಯ, ವಿದ್ಯುತ್, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಇಲಾಖೆಗಳ ಉಸ್ತುವಾರಿ ವಹಿಸಲಿದ್ದಾರೆ.

ಇದನ್ನೂ ಓದಿ-ನಾನಕಾನಾ ಸಾಹೀಬ್ ಮೇಲೆ ಹಲ್ಲೆ, ಸಿದ್ಧು ಮೌನವನ್ನು ಪ್ರಶ್ನಿಸಿದ BJP

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News