ಗುಜರಾತ್ ಬಸ್ ದುರಂತ: ರಾಹುಲ್ ಗಾಂಧಿ ತೀವ್ರ ಸಂತಾಪ

ಅಂಬಾಜಿಯ ತ್ರಿಶೂಲಿಯಾ ಘಾಟ್ ಬಳಿ ಸುಮಾರು 70 ಪ್ರಯಾಣಿಕರನ್ನು ಹೊತ್ತ ಖಾಸಗಿ ಐಷಾರಾಮಿ ಬಸ್ ಪಲ್ಟಿಯಾದ ಕಾರಣ ಸೋಮವಾರ ಸಂಜೆ ಅಪಘಾತ ಸಂಭವಿಸಿದೆ.

Last Updated : Oct 1, 2019, 07:19 AM IST
ಗುಜರಾತ್ ಬಸ್ ದುರಂತ: ರಾಹುಲ್ ಗಾಂಧಿ ತೀವ್ರ ಸಂತಾಪ title=

ನವದೆಹಲಿ: ಗುಜರಾತ್‌ನ ಬನಸ್ಕಂತದಲ್ಲಿ ಸೋಮವಾರ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 21 ಜನ ಸಾವನ್ನಪ್ಪಿದ್ದು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, "ಗುಜರಾತಿನಲ್ಲಿ ನಡೆದ ಬಸ್ ಅಪಘಾತದಲ್ಲಿ ಭಕ್ತರು ಮೃತಪಟ್ಟಿದ್ದಾರೆ ಮತ್ತು ಗಾಯಗೊಂಡಿರುವ ಸುದ್ದಿ ಕೇಳಿ ನೋವಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ" ಎಂದಿದ್ದಾರೆ.

ಅಂಬಾಜಿಯ ತ್ರಿಶೂಲಿಯಾ ಘಾಟ್ ಬಳಿ ಸುಮಾರು 70 ಪ್ರಯಾಣಿಕರನ್ನು ಹೊತ್ತ ಖಾಸಗಿ ಐಷಾರಾಮಿ ಬಸ್ ಪಲ್ಟಿಯಾದ ಕಾರಣ ಈ ಅಪಘಾತ ಸಂಭವಿಸಿದ್ದು, ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಜಿತ್ ರಾಜಿಯನ್ ಹೇಳಿದ್ದಾರೆ.

Trending News