/kannada/photo-gallery/shikanji-buttermilk-is-helpful-in-dissolving-stubborn-obesity-around-the-waist-249358 ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! 249358

ಮೋದಿ ಮುಕ್ತ ಭಾರತಕ್ಕೆ ರಾಜ್ ಠಾಕ್ರೆ ಕರೆ

ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಮೋದಿ ಮುಕ್ತ ಭಾರತಕ್ಕೆ ಕರೆ ನೀಡಿದ್ದಾರೆ. 

Last Updated : Mar 19, 2018, 11:51 AM IST
ಮೋದಿ ಮುಕ್ತ ಭಾರತಕ್ಕೆ ರಾಜ್ ಠಾಕ್ರೆ ಕರೆ title=

ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಮೋದಿ ಮುಕ್ತ ಭಾರತಕ್ಕೆ ಕರೆ ನೀಡಿದ್ದಾರೆ. 

ಇಲ್ಲಿನ ಶಿವಸೇನಾ ಉದ್ಯಾನವನದಲ್ಲಿ ನಡೆದ ಗುಡಿ ಪಡ್ವಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದು ನಾವೆಲ್ಲಾ ಮೂರನೇ ಸ್ವಾತಂತ್ರ್ಯಕ್ಕಾಗಿ ಹೋರಾಡಬೇಕಿದೆ. ಮೋದಿ ಮುಕ್ತ ಭಾರತಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳೂ ಒಂದಾಗಬೇಕಿದೆ ಎಂದರು. 

ಸುಮಾರು ಒಂದು ಗಂಟೆ ಅವಧಿಯ ಭಾಷಣದಲ್ಲಿ. ಭವಿಷ್ಯದಲ್ಲಿ ರಾಷ್ಟ್ರವ್ಯಾಪಿ ಗಲಭೆಗಳನ್ನು ಉಂಟುಮಾಡುವ ಕೆಲವೊಂದು ಅಂಶಗಳ ಬಗ್ಗೆ ಅವರು ಎಚ್ಚರಿಸಿದರಲ್ಲದೆ, ಉತ್ತರ ಪ್ರದೇಶ ಉಪಚುನಾವಣೆಯಲ್ಲಿ ಬಿಜೆಪಿ ಎರಡು ಸ್ಥಾನಗಳನ್ನು ಕಳೆದುಕೊಂಡ ನಂತರ ಮತ್ತಷ್ಟು ವಿರೋಧ ವ್ಯಕ್ತವಾಗಿದೆ ಎಂದರು. 

ಮುಂದುವರೆದು ಮಾತನಾಡಿದ ಅವರು, 2019ರ ಲೋಕಸಭೆ ಚುನಾವಣೆಯಲ್ಲಿ ಮೋದಿ ನೇತೃತ್ವದ ಸರ್ಕಾರವನ್ನು ಸೋಲಿಸಲು ಇತರ ಪಕ್ಷಗಳು ಒಗ್ಗೂಡುವುದೊಂದೇ ಮಾರ್ಗ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದಾಗಿ ಅವರು ಹೇಳಿದ್ದಾರೆ.