Ration Card Rules: ಈ ತಪ್ಪು ಮಾಡಿದರೆ ನಿಮ್ಮ ರೇಷನ್ ಕಾರ್ಡ್ ಸಹ ರದ್ದಾಗಬಹುದು!

ಕರೋನಾ ಸಾಂಕ್ರಾಮಿಕ ಸಮಯದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಆಹಾರದ ಕೊರತೆಯಾಗದಂತೆ ನೋಡಿಕೊಳ್ಳಲು ಮೋದಿ ಸರ್ಕಾರವು 'ಒನ್ ನೇಷನ್ ಒನ್ ರೇಷನ್ ಕಾರ್ಡ್' ಯೋಜನೆಯನ್ನು ಜಾರಿಗೆ ತಂದಿತು.

Written by - Yashaswini V | Last Updated : Dec 14, 2020, 02:20 PM IST
  • 2013 ರಿಂದೀಚೆಗೆ ಒಟ್ಟು 4.39 ಕೋಟಿ ಪಡಿತರ ಚೀಟಿಗಳನ್ನು ರದ್ದುಪದಿಸಿದವ್ ಕೇಂದ್ರ ಸರ್ಕಾರ
  • ಈಗ ಆಧಾರ್‌ಗೆ ರೇಷನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ
  • ಪಡಿತರ ಚೀಟಿ ಹೊಂದಿರುವವರ ಡಿಜಿಟಲ್ ದತ್ತಾಂಶವನ್ನೂ ಸಿದ್ಧಪಡಿಸಲಾಗುತ್ತಿದೆ
Ration Card Rules: ಈ ತಪ್ಪು ಮಾಡಿದರೆ ನಿಮ್ಮ ರೇಷನ್ ಕಾರ್ಡ್ ಸಹ ರದ್ದಾಗಬಹುದು! title=
File Image

ನವದೆಹಲಿ: ವರ್ಷಗಳ ಹಿಂದೆ ಭಾರತದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಜನರಿಗಾಗಿ ಭಾರತ ಸರ್ಕಾರ ಪಡಿತರ ಚೀಟಿ ಯೋಜನೆಯನ್ನು ತಂದಿತು. ಇತ್ತೀಚಿಗೆ ಕರೋನಾ ಸಾಂಕ್ರಾಮಿಕ ಸಮಯದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಆಹಾರದ ಕೊರತೆಯಾಗದಂತೆ ನೋಡಿಕೊಳ್ಳಲು ಮೋದಿ ಸರ್ಕಾರವು 'ಒನ್ ನೇಷನ್ ಒನ್ ರೇಷನ್ ಕಾರ್ಡ್' ಯೋಜನೆಯನ್ನು ಜಾರಿಗೊಳಿಸಿತು.

ಅದರ ಅಡಿಯಲ್ಲಿ ಪಡಿತರ ಚೀಟಿ (Ration Card) ಹೊಂದಿರುವವರು ದೇಶದ ಯಾವುದೇ ರಾಜ್ಯದಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಮೂಲಕ ಅಗತ್ಯವಿರುವವರಿಗೆ ಆಹಾರ ಧಾನ್ಯಗಳು ಮತ್ತು ಆಹಾರ ಪದಾರ್ಥಗಳನ್ನು ಒದಗಿಸಲಾಗುತ್ತದೆ. ಆದರೆ ಭಾರತ ಸರ್ಕಾರ ಕಾಲಕಾಲಕ್ಕೆ ಪಡಿತರ ಚೀಟಿ ನಿಯಮಗಳನ್ನು ಬದಲಾಯಿಸುತ್ತದೆ. ಹೊಸ ನಿಯಮದ ಪ್ರಕಾರ ಒಬ್ಬ ವ್ಯಕ್ತಿಯು ಪಡಿತರ ಚೀಟಿಯಲ್ಲಿ 3 ತಿಂಗಳವರೆಗೆ ಪಡಿತರವನ್ನು ತೆಗೆದುಕೊಳ್ಳದಿದ್ದರೆ, ಆ ವ್ಯಕ್ತಿಯು ಈಗ ಸಮರ್ಥನೆಂದು ಭಾವಿಸಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಅವನಿಗೆ ಪಡಿತರ ಅಗತ್ಯವಿಲ್ಲ ಎಂದು ಭಾವಿಸಿ ಅವರ ಪಡಿತರ ಕಾರ್ಡ್ ರದ್ದುಗೊಳಿಸಲಾಗುತ್ತದೆ.

ಕರೋನಾ ಸಾಂಕ್ರಾಮಿಕ ಸಮಯದಲ್ಲಿ ಇತರ ರಾಜ್ಯಗಳಲ್ಲಿ ಸಿಲುಕಿರುವ ಜನರಿಗೂ ತಮ್ಮ ಪಡಿತರ ಚೀಟಿ ಬಳಸಿ ಅಗತ್ಯವಿರುವ ಧಾನ್ಯವನ್ನು ಪಡೆಯಲು ಅನುಕೂಲವಾಗುವಂತೆ  ಭಾರತ ಸರ್ಕಾರವು 'ಒನ್ ನೇಷನ್ ಒನ್ ರೇಷನ್ ಕಾರ್ಡ್' (One Nation One Ration Card) ಯೋಜನೆಯನ್ನು ಪರಿಚಯಿಸಿತು. ಈ ಯೋಜನೆಯ ಮಾರ್ಗಸೂಚಿಗಳ ಪ್ರಕಾರ, ಯಾವುದೇ ಒಬ್ಬ ವ್ಯಕ್ತಿಯು 3 ತಿಂಗಳವರೆಗೆ ಪಡಿತರವನ್ನು ಪಡೆಯದಿದ್ದರೆ, ಅವನ ಪಡಿತರವನ್ನು ರದ್ದುಗೊಳಿಸಲಾಗುತ್ತದೆ ಮತ್ತು ವ್ಯಕ್ತಿಯು ಸಮರ್ಥನೆಂದು ಭಾವಿಸಲಾಗುತ್ತದೆ. ದೇಶದ ಅನೇಕ ರಾಜ್ಯಗಳು ಸಹ ಇದನ್ನು ಕಾರ್ಯಗತಗೊಳಿಸಲು ಪ್ರಾರಂಭಿಸಿವೆ.

ನಿಮ್ಮ Aadhaar Card ಗೆ ಸಂಬಂಧಿಸಿದ ಈ ಕೆಲಸ ಮಾಡಲು ಇಂದೇ ಕೊನೆಯ ದಿನ, ಇಲ್ಲದಿದ್ದರೆ ನಿಮಗೆ ಪಡಿತರ ಸಿಗುವುದಿಲ್ಲ

ಗಮನಿಸಬೇಕಾದ ಸಂಗತಿಯೆಂದರೆ 2013 ರಿಂದೀಚೆಗೆ ಒಟ್ಟು 4.39 ಕೋಟಿ ಪಡಿತರ ಚೀಟಿಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಯ ಫಲಾನುಭವಿಗಳ ಸಂಖ್ಯೆಯನ್ನು ಅಂದಾಜು ಮಾಡಲು ಭಾರತ ಸರ್ಕಾರ ಈ ಕ್ರಮ ಕೈಗೊಂಡಿದೆ. ಅದೇ ಸಮಯದಲ್ಲಿ ಪಡಿತರ ಚೀಟಿ ಹೊಂದಿರುವವರ ಡಿಜಿಟಲ್ ದತ್ತಾಂಶವನ್ನೂ ಸಿದ್ಧಪಡಿಸಲಾಗುತ್ತಿದ್ದು, ನಕಲಿ ಕಾರ್ಡ್ ಹೊಂದಿರುವವರನ್ನು ಪತ್ತೆಹಚ್ಚಲು ಈಗ ಆಧಾರ್‌ಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ.

ನಿಮಿಷಗಳಲ್ಲಿ ಆಧಾರ್‌ಗೆ ಒನ್ ನೇಷನ್-ಒನ್ ರೇಷನ್ ಕಾರ್ಡ್ ಲಿಂಕ್ ಮಾಡಲು ಇಲ್ಲಿದೆ ಪ್ರಕ್ರಿಯೆ

Trending News