ಸುನಂದಾ ಪುಷ್ಕರ್ ಸಾವು ಪ್ರಕರಣ: ಕಾಂಗ್ರೆಸ್ ನಾಯಕ ಶಶಿ ತರೂರ್ ಖುಲಾಸೆ..!

ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಶಶಿ ತರೂರ್ ಖುಲಾಸೆಗೊಂಡಿದ್ದಾರೆ.

Written by - Zee Kannada News Desk | Last Updated : Aug 18, 2021, 12:31 PM IST
  • ದೆಹಲಿಯ ಪಂಚತಾರಾ ಹೋಟೆಲ್​​ನ ಕೋಣೆಯಲ್ಲಿ 2014ರ ಜನವರಿ 17ರಂದು ಸುನಂದಾ ಪುಷ್ಕರ್ ಶವವಾಗಿ ಪತ್ತೆಯಾಗಿದ್ದರು
  • ಸುನಂದಾ ಪುಷ್ಕರ್​ ಆತ್ಮಹತ್ಯೆಗೆ ತರೂರ್ ಕುಮ್ಮಕ್ಕು ನೀಡಿದ್ದಾರೆಂಬ ಆರೋಪದಡಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು
  • ಆರೋಪ ಮುಕ್ತರಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟ ಶಶಿ ತರೂರ್ ದೆಹಲಿ ನ್ಯಾಯಾಲಯಕ್ಕೆ ಧನ್ಯವಾದ ಸಲ್ಲಿಸಿದ್ದಾರೆ
ಸುನಂದಾ ಪುಷ್ಕರ್ ಸಾವು ಪ್ರಕರಣ: ಕಾಂಗ್ರೆಸ್ ನಾಯಕ ಶಶಿ ತರೂರ್ ಖುಲಾಸೆ..! title=
ಆರೋಪ ಮುಕ್ತರಾದ ಕಾಂಗ್ರೆಸ್ ನಾಯಕ ಶಶಿ ತರೂರ್

ನವದೆಹಲಿ: ದೇಶದಲ್ಲಿ ಸಖತ್ ಸದ್ದು ಮಾಡಿದ್ದ ಸುನಂದಾ ಪುಷ್ಕರ್ ಸಾವಿನ ಪ್ರಕರಣ(Sunanda Pushkar death case)ಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಶಶಿ ತರೂರ್ ಗೆ ಬಿಗ್ ರಿಲೀಫ್ ದೊರೆತಿದೆ. ದೆಹಲಿ ಹೈಕೋರ್ಟ್ ಬುಧವಾರ ಮಹತ್ವದ ಆದೇಶ ಹೊರಡಿಸಿದ್ದು, ಪ್ರಕರಣದಲ್ಲಿ ಶಶಿ ತರೂರ್ ಅವರನ್ನು ಖುಲಾಸೆಗೊಳಿಸಿದೆ.

ದೆಹಲಿಯ ಪಂಚತಾರಾ ಹೋಟೆಲ್​​ನ ಕೋಣೆಯೊಂದರಲ್ಲಿ 2014ರ ಜನವರಿ 17ರಂದು ಮಹಿಳಾ ಉದ್ಯಮಿ, ಕಾಂಗ್ರೆಸ್ ನಾಯಕ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್(Sunanda Pushkar)​​ ಶವವಾಗಿ ಪತ್ತೆಯಾಗಿದ್ದರು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಿರುವ ವಿವಿಧ ತಜ್ಞರು ಸುನಂದಾ ಸಾವಿಗೆ ಕಾರಣವೇನೆಂದು ನಿಖರ ಅಭಿಪ್ರಾಯ ನೀಡಿಲ್ಲ. ಹೀಗಾಗಿ ತಮ್ಮ ವಿರುದ್ಧದ ಆರೋಪ ಕೈಬಿಡುವಂತೆ ತರೂರ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯಿತು. ತರೂರ್ ಮನವಿ ಪುರಸ್ಕರಿಸಿದ ದೆಹಲಿ ಹೈಕೋರ್ಟ್ ಅವರ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಸೂಚಿಸಿದೆ. ಈ ಮೂಲಕ ತರೂರ್(Shashi Tharoor) ಆರೋಪಮುಕ್ತರಾಗಿದ್ದು, ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದ ಕುಲಗಾಮ್ ನಲ್ಲಿ ಭಯೋತ್ಪಾದಕ ದಾಳಿ ; ಬಿಜೆಪಿ ನಾಯಕ ಜಾವೇದ್ ಅಹಮ್ಮದ್ ದಾರ್ ಹತ್ಯೆ

7 ವರ್ಷಗಳ ಹಿಂಸೆ ಕೊನೆಗೂಂಡಿದೆ

ಸುನಂದಾ ಪುಷ್ಕರ್​ ಆತ್ಮಹತ್ಯೆಗೆ ತರೂರ್​ ಕುಮ್ಮಕ್ಕು ನೀಡಿದ್ದಾರೆಂಬ ಆರೋಪದಡಿ ದೆಹಲಿ ಪೊಲೀಸರು ಅವರ ವಿರುದ್ಧ ಸೆಕ್ಷನ್​ 498 A (ಮಹಿಳೆಯು ತನ್ನ ಪತಿ ಅಥವಾ ಪತಿಯ ಸಂಬಂಧಿಗಳಿಂದ ಕ್ರೌರ್ಯಕ್ಕೆ ಒಳಗಾಗುವುದು), ಸೆಕ್ಷನ್​ 306 (ಆತ್ಮಹತ್ಯೆಗೆ ಕುಮ್ಮಕ್ಕು ನೀಡುವುದು) ಸೇರಿ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಿಸಿದ್ದರು. ಜಾಮೀನಿನ ಆಧಾರದ ಮೇಲೆ ತರೂರ್ ಜೈಲಿನಿಂದ ಹೊರಗಿದ್ದರು. ಈ ಪ್ರಕರಣ ಸಂಬಂಧ ದೆಹಲಿ ಹೈಕೋರ್ಟ್​​ನಲ್ಲಿ ವಿಚಾರಣೆ ನಡೆಯುತ್ತಿತ್ತು. ಕೊನೆಗೂ ಕಾಂಗ್ರೆಸ್ ನಾಯಕ ಆರೋಪಮುಕ್ತರಾಗಿದ್ದು, ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಬರೋಬ್ಬರಿ 7 ವರ್ಷಗಳ ಬಳಿಕ ನನಗೆ ನೀಡುತ್ತಿದ್ದ ಹಿಂಸೆ ಕೊನೆಗೊಂಡಿದೆ ಅಂತಾ ತರೂರ್ ಹೇಳಿದ್ದು, ದೆಹಲಿ ನ್ಯಾಯಾಲಯ(Delhi HighCourt)ಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಈ ಬ್ಯಾಂಕ್ ಗ್ರಾಹಕರಿಗೆ ನೀಡುತ್ತಿದೆ 2 ಲಕ್ಷ ರೂ. ಗಳ ಲಾಭ, ಬಳಸಿಕೊಳ್ಳುವುದು ಹೇಗೆ ತಿಳಿಯಿರಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News