ಕರ್ತಾರ್‌ಪುರ ಕಾರಿಡಾರ್‌ನಲ್ಲಿ ಭಯೋತ್ಪಾದನೆ ಕರಿನೆರಳು!

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರೋವಾಲ್ ಜಿಲ್ಲೆಯಲ್ಲಿ ಭಯೋತ್ಪಾದಕ ತರಬೇತಿ ಚಟುವಟಿಕೆಗಳು ನಡೆಯುತ್ತಿವೆ ಎಂದು ಗುಪ್ತಚರ ಸಂಸ್ಥೆಗಳಿಂದ ಮಾಹಿತಿ ಸಿಕ್ಕಿದೆ.  

Last Updated : Nov 4, 2019, 12:45 PM IST
ಕರ್ತಾರ್‌ಪುರ ಕಾರಿಡಾರ್‌ನಲ್ಲಿ ಭಯೋತ್ಪಾದನೆ ಕರಿನೆರಳು! title=

ನವದೆಹಲಿ: ಸಿಖ್ ಧರ್ಮದ ಸಂಸ್ಥಾಪಕ ಗುರುನಾನಕ್ ದೇವ್ ಅವರ 550 ನೇ ಜನ್ಮ ದಿನಾಚರಣೆಯಂದು ಭಾರತದಿಂದ ಕರ್ತಾರ್‌ಪುರಕ್ಕೆ (ಕರ್ತಾರ್‌ಪುರ) ತೆರಳಲು ಭಕ್ತರು ಸಿದ್ಧರಾಗುತ್ತಿದ್ದಾರೆ. ಇನ್ನೊಂದೆಡೆ ಕರ್ತಾರ್‌ಪುರ ಕಾರಿಡಾರ್‌ನಲ್ಲಿ ಭಯೋತ್ಪಾದನೆ ನೆರಳಿನ ಭೀತಿ ಕಾಡತೊಡಗಿದೆ. ಕರ್ತಾರ್‌ಪುರ್ ಸಾಹಿಬ್ ಗುರುದ್ವಾರ ಸಹಾರ್ದಿ ಜಿಲ್ಲೆಯ ನರೋವಾಲ್‌ನಲ್ಲಿದೆ. ಏತನ್ಮಧ್ಯೆ, ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರೋವಾಲ್ ಜಿಲ್ಲೆಯಲ್ಲಿ ಭಯೋತ್ಪಾದಕ ತರಬೇತಿ ಚಟುವಟಿಕೆಗಳು ನಡೆಯುತ್ತಿವೆ ಎಂದು ಗುಪ್ತಚರ ಸಂಸ್ಥೆಗಳು ವರದಿ ಮಾಡಿವೆ. 

ಇಖ್ಲಾಸ್ಪುರ್ ಮತ್ತು ಶಕುರ್ಗಢದಲ್ಲಿ, ಭಯೋತ್ಪಾದಕರ ಚಲನವಲನದ ಬಗ್ಗೆ ಕಾಲಕಾಲಕ್ಕೆ ಮಾಹಿತಿ ಸ್ವೀಕರಿಸಲಾಗುತ್ತಿದ್ದು, ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುರಿಡ್ಕೆ, ಶಕರ್‌ಗಢ ಮತ್ತು ನರೋವಾಲ್‌ನಲ್ಲಿ ಭಯೋತ್ಪಾದಕ ತರಬೇತಿ ಶಿಬಿರಗಳಿವೆ ಎಂದು ಗುಪ್ತಚರ ಸಂಸ್ಥೆಗಳ ಮೂಲಗಳು ತಿಳಿಸಿವೆ. ಪುರುಷರು ಮತ್ತು ಮಹಿಳೆಯರು ಇಲ್ಲಿ ತರಬೇತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.

ಡೇರಾ ಬಾಬಾ ನಾನಕ್ ಸಾಹಿಬ್ ಅವರನ್ನು ಭಾರತದ ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯಲ್ಲಿರುವ ಕರ್ತಾರ್‌ಪುರ್ ಸಾಹಿಬ್ ಗುರುದ್ವಾರದೊಂದಿಗೆ ಸಂಪರ್ಕಿಸಲು ಕರ್ತಾರ್‌ಪುರ ಕಾರಿಡಾರ್ ಅನ್ನು ನವೆಂಬರ್ 9 ರಿಂದ ಉದ್ಘಾಟಿಸಲಾಗುವುದು.

ಕಾರಿಡಾರ್ ಮುಂಜಾನೆಯಿಂದ ಮುಸ್ಸಂಜೆಯವರೆಗೆ ತೆರೆದಿರುತ್ತದೆ ಮತ್ತು ಬೆಳಿಗ್ಗೆ ತೀರ್ಥಯಾತ್ರೆ ಮಾಡುವ ಯಾತ್ರಿಕರು ಅದೇ ದಿನ ಮರಳಬೇಕಾಗುತ್ತದೆ. ಅಧಿಸೂಚಿತ ದಿನಗಳನ್ನು ಹೊರತುಪಡಿಸಿ ಕಾರಿಡಾರ್ ವರ್ಷದುದ್ದಕ್ಕೂ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ.

ನವೆಂಬರ್ 9 ರಂದು ಇಮ್ರಾನ್ ಖಾನ್ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರೋವಾಲ್ ಜಿಲ್ಲೆಯಲ್ಲಿರುವ ಕರ್ತಾರ್ಪುರ್ ಕಾರಿಡಾರ್ ಅನ್ನು ಉದ್ಘಾಟಿಸಲಿದ್ದಾರೆ. ಭಾರತದ ಗಡಿಯ ಸಮೀಪದಲ್ಲಿರುವ ಕರ್ತಾರ್‌ಪುರ್ ಸಾಹಿಬ್ ಗುರುದ್ವಾರ ತನಕ ಭಕ್ತರು ಈ ಕಾರಿಡಾರ್ ಮೂಲಕ ಹೋಗಲು ಸಾಧ್ಯವಾಗುತ್ತದೆ.

ಅದೇ ಸಮಯದಲ್ಲಿ ಪಿಎಂ ನರೇಂದ್ರ ಮೋದಿ ಅವರು ನವೆಂಬರ್ 9 ರಂದು ಕರ್ತಾರ್ಪುರ್ ಕಾರಿಡಾರ್ ಅನ್ನು ಉದ್ಘಾಟಿಸಲಿದ್ದಾರೆ. 

ಗಮನಿಸಬೇಕಾದ ಸಂಗತಿಯೆಂದರೆ, ಕರ್ತಾರ್‌ಪುರ್ ಸಾಹಿಬ್ ಗುರುದ್ವಾರ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರೋವಾಲ್ ಜಿಲ್ಲೆಯಲ್ಲಿದೆ. ಇದು ಗಡಿಯಿಂದ 4.5 ಕಿಲೋಮೀಟರ್ ದೂರದಲ್ಲಿ ಡೇರಾ ಬಾಬಾ ನಾನಕ್ ಬಳಿ ಇದೆ. ಈ ಗುರುದ್ವಾರ ಸಿಖ್ಖರಿಗೆ ಸಾಕಷ್ಟು ಪವಿತ್ರವಾದುದು. ಏಕೆಂದರೆ ಗುರುನಾನಕ್ ದೇವ್ ತಮ್ಮ ಜೀವನದ ಕೊನೆಯ 18 ವರ್ಷಗಳನ್ನು ಇಲ್ಲಿಯೇ ಕಳೆದಿದ್ದರು ಎಂದು ನಂಬಲಾಗಿದೆ.

Trending News