ಪುಲ್ವಾಮಾ ದಾಳಿಯಲ್ಲಿ ಗುಪ್ತಚರ ಇಲಾಖೆ ವೈಫಲ್ಯವಿಲ್ಲ- ಕೇಂದ್ರ ಸರ್ಕಾರ

ಪುಲ್ವಾಮಾ ದಾಳಿಯಲ್ಲಿ ಗುಪ್ತಚರ ವೈಫಲ್ಯವಿಲ್ಲ ಎಂದು ಸರ್ಕಾರ ಬುಧವಾರ ಸಂಸತ್ತಿನಲ್ಲಿ ತಿಳಿಸಿದೆ. 

Last Updated : Jun 26, 2019, 05:31 PM IST
 ಪುಲ್ವಾಮಾ ದಾಳಿಯಲ್ಲಿ ಗುಪ್ತಚರ ಇಲಾಖೆ ವೈಫಲ್ಯವಿಲ್ಲ- ಕೇಂದ್ರ ಸರ್ಕಾರ       title=
file photo

ನವದೆಹಲಿ: ಪುಲ್ವಾಮಾ ದಾಳಿಯಲ್ಲಿ ಗುಪ್ತಚರ ವೈಫಲ್ಯವಿಲ್ಲ ಎಂದು ಸರ್ಕಾರ ಬುಧವಾರ ಸಂಸತ್ತಿನಲ್ಲಿ ತಿಳಿಸಿದೆ. 

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕಿರಿಯ ಗೃಹ ಸಚಿವ ಜಿ.ಕಿಶನ್ ರೆಡ್ಡಿ: “ಕಳೆದ ಮೂರು ದಶಕಗಳಿಂದ ಜಮ್ಮು ಮತ್ತು ಕಾಶ್ಮೀರವು ಭಯೋತ್ಪಾದನೆಯಿಂದ ಕೂಡಿದೆ ಮತ್ತು ಗಡಿಯುದ್ದಕ್ಕೂ ಅದಕ್ಕೆ ಬೆಂಬಲವಿದೆ . ಆದಾಗ್ಯೂ, ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆ ಮತ್ತು ಭದ್ರತಾ ಪಡೆಗಳಿಂದ ಭಯೋತ್ಪಾದಕರ ವಿರುದ್ಧ ನಿರಂತರ ಕ್ರಮ ಕೈಗೊಳ್ಳುವುದರಿಂದಾಗಿ, ಕಳೆದ ಕೆಲವು ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯ ಭಯೋತ್ಪಾದಕರನ್ನು ಸೆದೆಬಡೆಯಲಾಗಿದೆ. 'ಎಂದರು.

"ಎಲ್ಲಾ ಏಜೆನ್ಸಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ ಮತ್ತು ಗುಪ್ತಚರ ಒಳಹರಿವು ವಿವಿಧ ಏಜೆನ್ಸಿಗಳಲ್ಲಿ ನೈಜ-ಸಮಯದ ಆಧಾರದ ಮೇಲೆ ಹಂಚಿಕೊಳ್ಳಲ್ಪಡುತ್ತವೆ. ಪುಲ್ವಾಮಾ ದಾಳಿಯ ಬಗ್ಗೆ ಎನ್ಐಎ ನಡೆಸಿದ ತನಿಖೆಯು ಇಲ್ಲಿಯವರೆಗೆ ಸಂಚುಕೋರರು, ಆತ್ಮಹತ್ಯಾ ದಾಳಿಕೋರ ಮತ್ತು ವಾಹನ ಒದಗಿಸುವವರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ" ಎಂದು ಹೇಳಿದ್ದಾರೆ.

ಫೆಬ್ರವರಿ 14 ರಂದು ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ ಅವರ ಆತ್ಮಾಹುತಿ ಬಾಂಬರ್ ನಿಂದ ಸಿಆರ್ಪಿಎಫ್ ನ 40 ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದರು. 

Trending News