ಶಹಜಹಾನ್ಪುರದಲ್ಲಿ ಭೀಕರ ರಸ್ತೆ ಅಪಘಾತ; 16 ಸಾವು, ಹಲವರಿಗೆ ಗಂಭೀರ ಗಾಯ

ಪರಿಹಾರ ರಕ್ಷಣಾ ಕಾರ್ಯ ಇನ್ನೂ ನಡೆಯುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ.

Last Updated : Aug 27, 2019, 01:20 PM IST
ಶಹಜಹಾನ್ಪುರದಲ್ಲಿ ಭೀಕರ ರಸ್ತೆ ಅಪಘಾತ; 16 ಸಾವು, ಹಲವರಿಗೆ ಗಂಭೀರ ಗಾಯ title=

ಶಹಜಹಾನ್ಪುರ: ಶಹಜಹಾನ್ಪುರದಲ್ಲಿ ಮಂಗಳವಾರ (ಆಗಸ್ಟ್ 27) ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾಹಿತಿಯ ಪ್ರಕಾರ, ಎರಡು ಟೆಂಪೋಗಳ ಮೇಲೆ ಟ್ರಕ್ ಪಲ್ಟಿಯಾಗಿದೆ. ಈ ಅಪಘಾತದಲ್ಲಿ 16 ಜನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸತ್ತವರಲ್ಲಿ 12 ಪುರುಷರು, 3 ಮಕ್ಕಳು ಮತ್ತು 1 ಮಹಿಳೆ ಸೇರಿದ್ದಾರೆ.  ಐದು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.  

ರೋಜಾದ ಜಮುಕಾ ತಿರಹಾದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪ್ರಾದೇಶಿಕ ಪೊಲೀಸರು ಸ್ಥಳವನ್ನು ತಲುಪಿದ್ದಾರೆ. ಟ್ರಕ್ಕುಗಳು ಮತ್ತು ಟೆಂಪೋ ಅಡಿಯಲ್ಲಿ ಸಿಲುಕಿದ್ದವರನ್ನು ಗ್ರಾಮಸ್ಥರ ಸಹಾಯದಿಂದ ಹೊರತೆಗೆದಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ.

ಆಡಳಿತವು ಕ್ರೇನ್‌ನ ಸಹಾಯದಿಂದ ಟ್ರಕ್ ಅನ್ನು ತೆಗೆದುಹಾಕಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಘಟನೆಯ ನಂತರ, ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ತಲುಪಿ ಗಾಯಾಳುಗಳ ಸ್ಥಿತಿಯನ್ನು ಪರಿಶೀಲಿಸಿದರು. ಪ್ರಸ್ತುತ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಈ ರಸ್ತೆ ಅಪಘಾತದ ಸುದ್ದಿಯನ್ನು ಸ್ವೀಕರಿಸಿದ ಬಳಿಕ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಪಘಾತದಲ್ಲಿ ಸತ್ತವರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳ ಸಂಪೂರ್ಣ ಖರ್ಚನ್ನು ಸರ್ಕಾರ ನೋಡಿಕೊಳ್ಳುವುದಾಗಿ ಭರವಸೆ ನೀಡಿರುವ ಯೋಗಿ, ಪರಿಹಾರದ ಬಗ್ಗೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

Trending News