ಪರಿಕ್ಕರ್ ಪುತ್ರನಿಗೆ ಬಿಜೆಪಿ ಟಿಕೆಟ್ ನಿರಾಕರಣೆ, ಕೇಜ್ರಿವಾಲ್ ರಿಂದ ಆಪ್ ಗೆ ವೆಲ್ ಕಮ್ ಆಫರ್...!

ಗುರುವಾರದಂದು ಬಿಜೆಪಿ ಗೋವಾದ 34 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ ಮತ್ತು ಮಾಜಿ ಸಿಎಂ ಮತ್ತು ಜನಪ್ರಿಯ ಬಿಜೆಪಿ ನಾಯಕ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿರುವುದರಿಂದಾಗಿ ಈಗ ಅವರಿಗೆ ಕೇಜ್ರಿವಾಲ್ ಅವರು ತಮ್ಮ ಪಕ್ಷದಿಂದ ಸ್ಪರ್ಧಿಸಲು ಆಹ್ವಾನ ನೀಡಿದ್ದಾರೆ.

Written by - Zee Kannada News Desk | Last Updated : Jan 20, 2022, 04:38 PM IST
  • ಗುರುವಾರದಂದು ಬಿಜೆಪಿ ಗೋವಾದ 34 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ ಮತ್ತು ಮಾಜಿ ಸಿಎಂ ಮತ್ತು ಜನಪ್ರಿಯ ಬಿಜೆಪಿ ನಾಯಕ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿರುವುದರಿಂದಾಗಿ ಈಗ ಅವರಿಗೆ ಕೇಜ್ರಿವಾಲ್ ಅವರು ತಮ್ಮ ಪಕ್ಷದಿಂದ ಸ್ಪರ್ಧಿಸಲು ಆಹ್ವಾನ ನೀಡಿದ್ದಾರೆ.
ಪರಿಕ್ಕರ್ ಪುತ್ರನಿಗೆ ಬಿಜೆಪಿ ಟಿಕೆಟ್ ನಿರಾಕರಣೆ, ಕೇಜ್ರಿವಾಲ್ ರಿಂದ ಆಪ್ ಗೆ ವೆಲ್ ಕಮ್ ಆಫರ್...! title=

ಪಣಜಿ: ಗುರುವಾರದಂದು ಬಿಜೆಪಿ ಗೋವಾದ 34 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ ಮತ್ತು ಮಾಜಿ ಸಿಎಂ ಮತ್ತು ಜನಪ್ರಿಯ ಬಿಜೆಪಿ ನಾಯಕ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿರುವುದರಿಂದಾಗಿ ಈಗ ಅವರಿಗೆ ಕೇಜ್ರಿವಾಲ್ ಅವರು ತಮ್ಮ ಪಕ್ಷದಿಂದ ಸ್ಪರ್ಧಿಸಲು ಆಹ್ವಾನ ನೀಡಿದ್ದಾರೆ.

ಇದನ್ನೂ ಓದಿ: ಸಿಎಂ ಯೋಗಿ ಭದ್ರಕೋಟೆ ಗೋರಖ್ ಪುರ್ ಗೆ ಲಗ್ಗೆ ಇಡಲಿರುವ ಅಭ್ಯರ್ಥಿ ಯಾರು ಗೊತ್ತೇ?

ಈ ಸುದ್ದಿಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, 'ಪರಿಕ್ಕರ್ ಕುಟುಂಬದೊಂದಿಗೆ ಬಿಜೆಪಿ ಯೂಸ್ ಅಂಡ್ ಥ್ರೋ ನೀತಿಯನ್ನು ಅಳವಡಿಸಿಕೊಂಡಿರುವುದಕ್ಕೆ ಗೋವಾ ಜನರು ದುಃಖಿತರಾಗಿದ್ದಾರೆ.ನಾನು ಯಾವಾಗಲೂ ಮನೋಹರ್ ಪರಿಕ್ಕರ್ ಅವರನ್ನು ಗೌರವಿಸುತ್ತೇನೆ ಆಪ್ ಟಿಕೆಟ್‌ ಮೂಲಕ ಚುನಾವಣೆಗೆ ಸ್ಪರ್ಧಿಸಲು ಉತ್ಪಲ್ ಜಿ ಅವರಿಗೆ ಸ್ವಾಗತ ಎಂದು ಹೇಳಿದ್ದಾರೆ.

ಇದನ್ನೂ ಓದಿ: Budget 2022 : ಕೇಂದ್ರ ಬಜೆಟ್ 2022 ರಲ್ಲಿ ಸಂಬಳ ಪಡೆಯುವ ವೃತ್ತಿಪರರಿಗೆ ಭರ್ಜರಿ ಸಿಹಿ ಸುದ್ದಿ! 

ಮನೋಹರ್ ಪರಿಕ್ಕರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರುವಾಗಲೇ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್‌ನಿಂದ ನಿಧನರಾದರು.ಸುಮಾರು 25 ವರ್ಷಗಳಿಂದ ಮನೋಹರ್ ಪರಿಕ್ಕರ್ ಅವರ ಕ್ಷೇತ್ರವಾಗಿದ್ದ ಪಂಜಿಂನಿಂದ ಬಾಬುಷ್ ಮಾನ್ಸೆರೇಟ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಪಂಜಿಮ್‌ನಿಂದ ಉತ್ಪಾಲ್ ಅವರನ್ನು ಕಣಕ್ಕಿಳಿಸದಿರುವ ನಿರ್ಧಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿಜೆಪಿ ಗೋವಾ ರಾಜ್ಯ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವಿಸ್, "ನಮ್ಮ ಪಕ್ಷಕ್ಕೆ, ಪರಿಕ್ಕರ್ ಕುಟುಂಬ ಯಾವಾಗಲೂ ನಮ್ಮ ಕುಟುಂಬ, ಆದರೆ ಉತ್ಪಾಲ್ ಸ್ಪರ್ಧಿಸಲು ಬಯಸಿದ ಸ್ಥಾನದಿಂದ ನಾವು ಈಗಾಗಲೇ ಸ್ಪರ್ಧಿಸಿದ್ದೇವೆ.ಹಾಲಿ ಶಾಸಕರಿದ್ದಾರೆ ಮತ್ತು ಹಾಲಿ ಶಾಸಕರನ್ನು ಕೈಬಿಡುವುದು ಸರಿಯಲ್ಲ, ಆದರೆ, ನಾವು ಅವರಿಗೆ ಇನ್ನೆರಡು ಸ್ಥಾನಗಳಿಂದ ಸ್ಪರ್ಧಿಸುವ ಆಯ್ಕೆಯನ್ನು ನೀಡಿದ್ದೇವೆ ಮತ್ತು ಆ ದಿಕ್ಕಿನಲ್ಲಿ ಮಾತುಕತೆ ನಡೆಯುತ್ತಿದೆ" ಎಂದು ಹೇಳಿದರು.

ಇದನ್ನೂ ಓದಿ: ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಹೊಸ ಆವೃತ್ತಿಯ ಯಶಸ್ವಿ ಪರೀಕ್ಷೆ 

ಈ ಬೆಳವಣಿಗೆಗಳ ಬಗ್ಗೆ ತಿಳಿದಿರುವ ಪರಿಕ್ಕರ್ ಕುಟುಂಬದ ಆಪ್ತ ಮೂಲಗಳು ಎಎನ್‌ಐಗೆ ತಿಳಿಸಿದ್ದು, ಉತ್ಪಲ್ ಪರಿಕ್ಕರ್ ಅವರ ದಿವಂಗತ ತಂದೆ ಶಾಸಕರಾಗಿದ್ದ ಸ್ಥಾನದಿಂದ ಸ್ಪರ್ಧಿಸುವುದು ಭಾವನಾತ್ಮಕ ವಿಷಯವಾಗಿದೆ.ಕುಟುಂಬದಿಂದ ಕೆಲವು ಸದಸ್ಯರು ಉತ್ಪಲ್ ಅವರಿಗೆ ಬಿಜೆಪಿ ನೀಡುತ್ತಿರುವ ಬೇರೆ ಕ್ಷೇತ್ರದಿಂದ ಸ್ಪರ್ಧಿಸಲು ಮನವೊಲಿಸಿದರೂ, ಉತ್ಪಲ್ ಮಣಿಯುವುದಿಲ್ಲ ಎಂಬುದು ಖಚಿತವಾಗಿದೆ.

ಕಳೆದ ಒಂದು ತಿಂಗಳಿನಿಂದ ಬಿಜೆಪಿಯ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ, ದೇವೇಂದ್ರ ಫಡ್ನವಿಸ್ ಸೇರಿದಂತೆ ಹಲವು ಉನ್ನತ ನಾಯಕರು ಸಂಪರ್ಕವನ್ನು ಸ್ಥಾಪಿಸಿದ್ದಾರೆ ಮತ್ತು ಉತ್ಪಲ್ ಅವರನ್ನು ಮನವೊಲಿಸಲು ಮಾತನಾಡಿದ್ದಾರೆ ಎಂದು ಎಎನ್‌ಐಗೆ ವಿಶ್ವಾಸಾರ್ಹ ಮೂಲಗಳು ತಿಳಿಸಿವೆ. ಆದರೆ ಅವರ ಪ್ರತಿಕ್ರಿಯೆಯು ಸಕರಾತ್ಮಕವಾಗಿಲ್ಲ ಎಂದು ತಿಳಿದುಬಂದಿದೆ.

ಗೋವಾ ವಿಧಾನಸಭೆಗೆ ಫೆಬ್ರವರಿ 14 ರಂದು ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News