Winter Session: ಡಿಸೆಂಬರ್ 7ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಪ್ರಲ್ಹಾದ್ ಜೋಶಿ ಡಿ.29ರವರೆಗೆ ಒಟ್ಟು 17 ದಿನಗಳ ಕಾಲ ಸಂಸತ್ತಿನ ಕಲಾಪ ನಡೆಯಲಿದೆ ಅಂತಾ ಹೇಳಿದ್ದಾರೆ.

Written by - Puttaraj K Alur | Last Updated : Nov 19, 2022, 10:46 AM IST
  • ಡಿಸೆಂಬರ್ 7ರಿಂದ ಡಿ.29ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದೆ
  • ಒಟ್ಟು 23 ದಿನಗಳ ಅವಧಿಯಲ್ಲಿ 17 ದಿನಗಳ ಕಾಲ ಅಧಿವೇಶನ ನಡೆಯಲಿದೆ
  • ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ಹಿನ್ನೆಲೆ ಮೊದಲ ದಿನದ ಅಧಿವೇಶನ ಮುಂದೂಡಿಕೆ ಸಾಧ್ಯತೆ
Winter Session: ಡಿಸೆಂಬರ್ 7ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ  title=
ಡಿ.7ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ

ನವದೆಹಲಿ: ಡಿಸೆಂಬರ್ 7ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು, ಡಿ.29ರವರೆಗೆ ಒಟ್ಟು 17 ದಿನಗಳ ಕಾಲ ಸಂಸತ್ತಿನ ಕಲಾಪ ನಡೆಯಲಿದೆ ಅಂತಾ ಹೇಳಿದ್ದಾರೆ.

'2022ರ ಸಂಸತ್ತಿನ ಚಳಿಗಾಲದ ಅಧಿವೇಶನವು ಡಿ.7ರಿಂದ ಪ್ರಾರಂಭವಾಗಿ ಡಿ.29 ರವರೆಗೆ ನಡೆಯಲಿದೆ. ಒಟ್ಟು 23 ದಿನಗಳ ಅವಧಿಯಲ್ಲಿ 17 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಅಮೃತ್ ಕಾಲದ ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರ, ಇತರ ವಿಷಯಗಳು ಮತ್ತು ರಚನಾತ್ಮಕ ಚರ್ಚೆಗಾಗಿ ಎದುರು ನೋಡಲಾಗುತ್ತಿದೆ’ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: Shraddha Murder Case: “ಮೋದಿ ಸರ್ಕಾರದಿಂದಾಗಿ ಶ್ರದ್ಧಾ ಪ್ರಕರಣದಂತೆ ಅನೇಕ ಘಟನೆಗಳು ಸಂಭವಿಸಿವೆ”

ಇತ್ತೀಚೆಗಷ್ಟೇ ಮೃತಪಟ್ಟ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂಸಿಂಗ್ ಯಾದವ್ ಸೇರಿ ಗಣ್ಯರ ನಿಧನಕ್ಕೆ ಸಂಸತ್ ಸದಸ್ಯರು ಗೌರವ ಸಂತಾಪ ಸಲ್ಲಿಸಲಿದ್ದಾರೆ. ಹೀಗಾಗಿ ಅಧಿವೇಶನದ ಮೊದಲ ದಿನವನ್ನು ಮುಂದೂಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೊರೊನಾ ಸೋಂಕಿನ ಸಂಖ್ಯೆಗಳು ಗಣನೀಯವಾಗಿ ಇಳಿಕೆಯಾಗಿರುವುದರಿಂದ, ಲೋಕಸಭೆ-ರಾಜ್ಯಸಭಾ ಸಚಿವಾಲಯದ ಸದಸ್ಯರು ಮತ್ತು ಸಿಬ್ಬಂದಿ ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡಿರುವರಿಂದ ಯಾವುದೇ ನಿರ್ಬಂಧಗಳಿಲ್ಲದೆ ಅಧಿವೇಶನ ನಡೆಯುವ ಸಾಧ‍್ಯತೆ ಇದೆ ಎಂದು ವರದಿಯಾಗಿದೆ.

ರಾಜ್ಯಸಭೆಯ ಅಧ್ಯಕ್ಷರಾಗಿರುವ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅಧಿಕಾರ ವಹಿಸಿಕೊಂಡ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಮುಂಬರುವ ಅಧಿವೇಶನದಲ್ಲಿ ಅಂಗೀಕರಿಸಬೇಕಾದ ಮಸೂದೆಗಳ ಪಟ್ಟಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ. ಪ್ರತಿಪಕ್ಷಗಳು ಸಹ ಕೆಲವು ಪ್ರಮುಖ ವಿಷಯಗಳ ಬಗ್ಗೆ ಸಂಸತ್ತಿನಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ ನಡೆಸಿವೆ.

ಇದನ್ನೂ ಓದಿ: Viral Post: ಅಣೆಕಟ್ಟಿನ ಬಗ್ಗೆ ಕೇಳಿದ ಪ್ರಶ್ನೆಗೆ ವಿದ್ಯಾರ್ಥಿ ಕೊಟ್ಟ ಉತ್ತರ ನೋಡಿ ತಲೆಕೆರೆದುಕೊಂಡ ಶಿಕ್ಷಕ!

ದಾಳಿಗೆ ಜೋಶಿ ಖಂಡನೆ

ಬಿಜೆಪಿಯ ‘ಸಂಸತ್ ಪ್ರವಾಸ ಯೋಜನೆ’ ಅಂಗವಾಗಿ ತೆಲಂಗಾಣಕ್ಕೆ ಬಂದಿದ್ದ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಸಂಸದ ಧರ್ಮಪುರಿ ಅರವಿಂದ್ ನಿವಾಸದ ಮೇಲೆ ನಡೆದ ದಾಳಿಯನ್ನು ಖಂಡಿಸಿದ್ದಾರೆ. ‘ಟಿಆರ್‌ಎಸ್‌ನ ಈ ಧೋರಣೆ ಮತ್ತು ಅದರ ಗೂಂಡಾಗಿರಿ, ಜನಪ್ರತಿನಿಧಿಗಳಿಗೆ ಮತ್ತು ಬಿಜೆಪಿಯನ್ನು ಬೆಂಬಲಿಸುವವರಿಗೆ ಬೆದರಿಕೆ ಹಾಕುವುದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಈ ಹಿಂದೆ ತೆಲಂಗಾಣ ಹೆಚ್ಚುವರಿ ರಾಜ್ಯವಾಗಿತ್ತು, ಆದರೆ ಈಗ ಸಾಲದ ಸುಳಿಯಲ್ಲಿ ಸಿಲುಕಿರುವ ರಾಜ್ಯವಾಗಿದೆ’ ಎಂದು ಜೋಶಿ ಆರೋಪಿಸಿದರು.

‘ಕೆಸಿಆರ್, ಕೆಟಿಆರ್ ಅವರಂತಹ ಕೆಲವು ಜನರು, ಅವರ ಕುಟುಂಬಗಳು ಮತ್ತು ಕೆಲವು ಸಚಿವರು ಶ್ರೀಮಂತರಾಗಿದ್ದಾರೆ. ಆದರೆ ರಾಜ್ಯ ಮತ್ತು ಅದರ ಜನರು ದಿನದಿಂದ ದಿನಕ್ಕೆ ಬಡವಾಗುತ್ತಿದ್ದಾರೆ’ ಎಂದು ಅವರು ಟೀಕಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News