Yogi Adityanath : ಯೋಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭ : ಪಿಎಂ ಮೋದಿ, ನಟ ಅಕ್ಷಯ್ ಕುಮಾರ್ ಭಾಗಿ

ಇಂದು ಸಂಜೆ 4 ಗಂಟೆಗೆ ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ(Atal Bihari Vajpayee) ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಮಾರಂಭ ನಡೆಯಲಿದೆ. ಸುಮಾರು 50,000 ಜನ ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕಾಗಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.

Written by - Channabasava A Kashinakunti | Last Updated : Mar 25, 2022, 01:18 PM IST
  • ಇಂದು ನಡೆಯಲಿರುವ ಯೋಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭ
  • ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸೇರಿದಂತೆ ಹಲವಾರು ಭಾಗಿ
  • ಸಮಾರಂಭದಲ್ಲಿ ಪಾಲ್ಗೊಳ್ಳುವ ಕೇಂದ್ರ ಸಚಿವರು
Yogi Adityanath : ಯೋಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭ : ಪಿಎಂ ಮೋದಿ, ನಟ ಅಕ್ಷಯ್ ಕುಮಾರ್ ಭಾಗಿ title=

ನವದೆಹಲಿ : ಇಂದು ನಡೆಯಲಿರುವ ಉತ್ತರ ಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು, ಕೈಗಾರಿಕೋದ್ಯಮಿಗಳು ಮತ್ತು ಬಾಲಿವುಡ್ ತಾರೆಯರು ಭಾಗವಹಿಸಲಿದ್ದಾರೆ.

ಇಂದು ಸಂಜೆ 4 ಗಂಟೆಗೆ ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ(Atal Bihari Vajpayee) ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಮಾರಂಭ ನಡೆಯಲಿದೆ. ಸುಮಾರು 50,000 ಜನ ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕಾಗಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.

ಇದನ್ನೂ ಓದಿ : ಕರೋನಾ ಹೊಸ ರೂಪಾಂತರ ಡೆಲ್ಟಾಕ್ರಾನ್ ಎಷ್ಟು ಅಪಾಯಕಾರಿ ಮತ್ತು ಅದರ ಲಕ್ಷಣಗಳೇನು ?

ಯುಪಿ ಮಾಜಿ ಸಿಎಂಗಳಿಗೆ ಯೋಗಿ ಆಹ್ವಾನ

ಯೋಗಿ ಆದಿತ್ಯನಾಥ್ ಅವರು ಯುಪಿ ಮಾಜಿ ಮುಖ್ಯಮಂತ್ರಿಗಳಾದ ಮುಲಾಯಂ ಸಿಂಗ್ ಯಾದವ್, ಅಖಿಲೇಶ್ ಯಾದವ್ ಮತ್ತು ಮಾಯಾವತಿ ಅವರಿಗೆ ಖುದ್ದಾಗಿ ಕರೆ ಮಾಡಿ ಆಹ್ವಾನಿಸಿದ್ದಾರೆ.

ಬಾಲಿವುಡ್ ತಾರೆಯರು

ಬಾಲಿವುಡ್ ತಾರೆಯರಾದ ಅಕ್ಷಯ್ ಕುಮಾರ್(Akshay Kumar), ಕಂಗನಾ ರಣಾವತ್ ಅವರಿಗೂ ಆಹ್ವಾನ ನೀಡಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸುವ ಇತರ ಪ್ರಮುಖ ವ್ಯಕ್ತಿಗಳೆಂದರೆ "ದಿ ಕಾಶ್ಮೀರ್ ಫೈಲ್ಸ್" ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮತ್ತು ನಟ ಅನುಪಮ್ ಖೇರ್.

ವ್ಯಾಪಾರ ಉದ್ಯಮಿಗಳು

ವರದಿಗಳ ಪ್ರಕಾರ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಇತರ 60 ಉದ್ಯಮಿಗಳನ್ನು ಆಹ್ವಾನಿಸಲಾಗಿದೆ.

ಪ್ರಮುಖ ಸಂತರು

ಆದಿತ್ಯನಾಥ್(Yogi Adityanath) ಅವರು ಅಯೋಧ್ಯೆ, ಮಥುರಾ ಮತ್ತು ವಾರಣಾಸಿ ಸೇರಿದಂತೆ 50 ಕ್ಕೂ ಹೆಚ್ಚು ದಾರ್ಶನಿಕರಿಗೆ ವೈಯಕ್ತಿಕವಾಗಿ ಆಹ್ವಾನ ಕಳುಹಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : 'ಚಲನಚಿತ್ರಗಳ ಪೋಸ್ಟರ್‌ಗಳನ್ನು ಹಾಕಲು ನೀವು ರಾಜಕೀಯಕ್ಕೆ ಬಂದಿದ್ದೀರಾ?'

ಸಮಾರಂಭದಲ್ಲಿ ಪಾಲ್ಗೊಳ್ಳುವ ಕೇಂದ್ರ ಸಚಿವರು

- ಅಮಿತ್ ಶಾ

- ರಾಜನಾಥ್ ಸಿಂಗ್

- ಅನುರಾಗ್ ಠಾಕೂರ್

- ಮುಖ್ತಾರ್ ಅಬ್ಬಾಸ್ ನಖ್ವಿ

- ನರೇಂದ್ರ ಸಿಂಗ್ ತೋಮರ್

- ಧರ್ಮೇಂದ್ರ ಪ್ರಧಾನ್

- ನಿತಿನ್ ಗಡ್ಕರಿ

- ಪಿಯೂಷ್ ಗೋಯಲ್

- ಭೂಪೇಂದ್ರ ಯಾದವ್

- ಮಹೇಂದ್ರ ನಾಥ್ ಪಾಂಡೆ

- ಸ್ಮೃತಿ ಇರಾನಿ

- ಹರ್ದೀಪ್ ಸಿಂಗ್ ಪುರಿ

- ಅನ್ನಪೂರ್ಣ ಯಾದವ್

- ಶೋಭಾ ಕರಂಜಾಲೆ

ಸಮಾರಂಭದಲ್ಲಿ ವೃತ್ತಿಪರರು, ಯೋಗ ಗುರು ಬಾಬಾ ರಾಮ್‌ದೇವ್(Baba Ramdev), ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನಾಯಕರು, ನಿವೃತ್ತ ಸರ್ಕಾರಿ ಅಧಿಕಾರಿಗಳು ಮತ್ತು ಬಿಜೆಪಿ ಆಡಳಿತದ ರಾಜ್ಯಗಳ ಸಿಎಂಗಳು ಸಹ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : Big Breaking: ದೇಶದ ಈ ರಾಜ್ಯದಲ್ಲಿ ಜಾರಿಯಾಗಲಿದೆ Uniform Civil Code, ಧಾಮಿ ಸರ್ಕಾರದ ಮಹತ್ವದ ನಿರ್ಧಾರ

ಇತ್ತೀಚೆಗೆ ನಡೆದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ 403 ಸ್ಥಾನಗಳಲ್ಲಿ 273 ಸ್ಥಾನಗಳನ್ನು ಗೆದ್ದಿತ್ತು. ಪ್ರಮುಖ ವಿರೋಧ ಪಕ್ಷವಾದ ಸಮಾಜವಾದಿ ಪಕ್ಷ (ಎಸ್‌ಪಿ) ನೇತೃತ್ವದ ಮೈತ್ರಿಕೂಟ 125 ಸ್ಥಾನಗಳನ್ನು ಗಳಿಸಿತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News