ಜಗದೀಶ್‌ ಶೆಟ್ಟರ್‌ಗೆ ಟಿಕೆಟ್ ತಪ್ಪಿಸುತ್ತಿರೋದು ನಾವಲ್ಲ..!

ಶೆಟ್ಟರ್ ಟಿಕೆಟ್‌ಗಾಗಿ ಬಹಳ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇವೆ. ಟಿಕೆಟ್ ಕೊಡಿಸಲು ಸರ್ವ ಪ್ರಯತ್ನ ಮಾಡುತ್ತಿದ್ದೇವೆ. ನಿನ್ನೆ ಧರ್ಮೇಂದ್ರ ಪ್ರಧಾನ ಬಳಿ ಚರ್ಚೆ ಮಾಡಿದ್ದೇನೆ.  ಅವರನ್ನು ಉಳಿಸಿಕೊಳ್ಳುವ ವಿಶ್ವಾಸ ಇದೆ. ಜಗದೀಶ್ ಶೆಟ್ಟರ್ ಮನವೊಲಿಕೆ ಪ್ರಯತ್ನ ಮಾಡಿದ್ದೇವೆ. ಇವತ್ತಿಗೂ ಪ್ರಯತ್ನ ನಡೀತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Written by - Zee Kannada News Desk | Edited by - Krishna N K | Last Updated : Apr 15, 2023, 12:52 PM IST
  • ಜಗದೀಶ್‌ ಶೆಟ್ಟರ್‌ಗೆ ಟಿಕೆಟ್ ತಪ್ಪಿಸುತ್ತಿರೋದು ನಾವಲ್ಲ.
  • ಅವರ ಬೆಂಬಲಿಗರ ಆರೋಪದಲ್ಲಿ ಹುರುಳಿಲ್ಲ.
  • ಯಾವುದೇ ಕಾರಣಕ್ಕೂ ಅವರಿಗೆ ಟಿಕೆಟ್‌ ತಪ್ಪಿಸೋ ಕೆಲಸ ಮಾಡಲ್ಲ.
ಜಗದೀಶ್‌ ಶೆಟ್ಟರ್‌ಗೆ ಟಿಕೆಟ್ ತಪ್ಪಿಸುತ್ತಿರೋದು ನಾವಲ್ಲ..! title=

ಹುಬ್ಬಳ್ಳಿ : ಜಗದೀಶ್‌ ಶೆಟ್ಟರ್‌ಗೆ ಟಿಕೆಟ್ ತಪ್ಪಿಸುತ್ತಿರೋದು ನಾವಲ್ಲ, ಅವರ ಬೆಂಬಲಿಗರ ಆರೋಪದಲ್ಲಿ ಹುರುಳಿಲ್ಲ. ನಾವು ಹಾಗೂ ಶೆಟ್ಟರ್‌ ಬಹಳ ಆತ್ಮೀಯರು ರಾಜಕೀಯಕ್ಕೆ ಬರುವ ಮುನ್ನವೇ ಬಹಳ ಆತ್ಮೀಯರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಶೆಟ್ಟರ್ ಅವರ ಬೆಂಬಲಿಗರು ನೂರಾರು ಆರೋಪ ಮಾಡ್ತಾರೆ. ಆದ್ರೆ, ಅವರ ಆರೋಪಗಳಲ್ಲಿ ಹುರುಳಿಲ್ಲ. ಎಲ್ಲಾ ಸುಳ್ಳು ವದಂತಿಗಳು. ಈವರೆಗೂ ನಾವು ಪಕ್ಷದ ವರಿಷ್ಟರ ಜೊತೆ ಸಂಪರ್ಕದಲ್ಲಿದ್ದೇವೆ. ನಾವು ಹಾಗೂ ಶೆಟ್ಟರ್ ಬಹಳ ಆತ್ಮೀಯರು.
ಚುನಾವಣಾ ರಾಜಕಾರಣಕ್ಕೆ ಬರುವ ಮುಂಚಿತವಾಗಿಯೇ ಸ್ನೇಹಿತರು. ಯಾವುದೇ ಕಾರಣಕ್ಕೂ ಟಿಕೇಟ್ ತಪ್ಪಿಸೋ ಕೆಲಸ ಮಾಡಲ್ಲ ಎಂದರು ತಿಳಿಸಿದರು.

ಇದನ್ನೂ ಓದಿ: Karnataka Assembly election 2023: 15 ದಿನದಲ್ಲಿ 150 ಕೋಟಿ ರೂ. ಮುಟ್ಟಿದ ಚುನಾವಣಾ ಅಕ್ರಮ!

ಅಲ್ಲದೆ, ಶೆಟ್ಟರ್ ಟಿಕೆಟ್‌ಗಾಗಿ ಬಹಳ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇವೆ. ಟಿಕೆಟ್ ಕೊಡಿಸಲು ಸರ್ವ ಪ್ರಯತ್ನ ಮಾಡುತ್ತಿದ್ದೇವೆ. ನಿನ್ನೆ ಧರ್ಮೇಂದ್ರ ಪ್ರಧಾನ ಬಳಿ ಚರ್ಚೆ ಮಾಡಿದ್ದೇನೆ. ಶೆಟ್ಟರ್ ಜನಸಂಘ ಕಾಲದ ಮನೆತನ. ಬಿಜೆಪಿಗೆ ಶೆಟ್ಟರ್ ಅತ್ಯಂತ ನಿಷ್ಠರರು. ಉತ್ತರ ಕರ್ನಾಟಕ ಭಾಗಕ್ಕೆ ಅತ್ಯಂತ ಅವಶ್ಯಕವಾಗಿದ್ದಾರೆ. ಅವರನ್ನು ಉಳಿಸಿಕೊಳ್ಳಬೇಕೆಂದು ಹೇಳಿದ್ದೇನೆ. ಅತ್ಯಂತ ಅವಶ್ಯ ಇರೋ ನಾಯಕ ಅವರು. ನಡ್ಡಾ ಅವರಿಗೂ ಈ ಬಗ್ಗೆ ತಿಳಿಸಿದ್ದೇನೆ. ಅವರನ್ನು ಉಳಿಸಿಕೊಳ್ಳುವ ವಿಶ್ವಾಸ ಇದೆ. ಜಗದೀಶ್ ಶೆಟ್ಟರ್ ಮನವೊಲಿಕೆ ಪ್ರಯತ್ನ ಮಾಡಿದ್ದೇವೆ. ಇವತ್ತಿಗೂ ಪ್ರಯತ್ನ ನಡೀತಿದೆ ಎಂದರು

ನೀರಾವರಿ ಯೋಜನೆಯಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ಆರೋಪ ಮಾಡಿರುವ ನೆಹರೂ ಓಲೇಕಾರ ಆರೋಪಕ್ಕೆ ಬೊಮ್ಮಾಯಿ ತಿರುಗೇಟು ನೀಡಿದರು. ಭ್ರಷ್ಟಾಚಾರ ಆರೋಪಕ್ಕೆ ದಾಖಲೆಗಳನ್ನ ನೀಡಲಿ. ಅದೇ ಹಗರಣದಲ್ಲಿ ನೆಹರೂ ಓಲೇಕಾರ್ ಗೆ ಶಿಕ್ಷೆಯೂ ಆಗಿದೆ ಎಂದರು. 

ಇದನ್ನೂ ಓದಿ:Road Accident: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಗೆ ಗಂಭೀರ ಗಾಯ!

63 ಪ್ರತಿಶತ ಕ್ಷೇತ್ರಗಳಲ್ಲಿ ಬಿಜೆಪಿಯಲ್ಲಿ ಗೊಂದಲವಿದೆ ಇದು. ಕಾಂಗ್ರೆಸ್‌ಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಹಾಗಾದ್ರೆ ಕಾಂಗ್ರೆಸ್ ನವರಿಗೆ ಸ್ವಂತ ಶಕ್ತಿ ಇಲ್ಲ ಅಂತಾ ಆಯ್ತು ಎಂದು ಕಿಡಿಕಾರಿದರು. ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ಶೀಘ್ರವೇ ಬಿಜೆಪಿಯಲ್ಲಿ ಎಲ್ಲವೂ ಸರಿಹೋಗುತ್ತೆ. ಇನ್ನೆರಡು ಮೂರು ದಿನಗಳಲ್ಲಿ ಎಲ್ಲವೂ ತಿಳಿಯಾಗುತ್ತೆ. ಚುನಾವಣೆ ಎಂದರೆ ಸವಾಲು. ನನ್ನ ಮೊದಲ ಚುನಾವಣೆಯಲ್ಲಿಯೂ ಸೋಲಾಗುತ್ತೆ ಅಂತ ಬರೆದಿದ್ದರು. ಆದ್ರೆ ಅವೆಲ್ಲವೂ ಸುಳ್ಳಾಗಿದೆ ನಾನು ಗೆದ್ದು ಬಂದಿದ್ದೇನೆ. ಇಂದು ಶಿಗ್ಗಾಂವಿಗರ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದೇನೆ. ಒಳ್ಳೆ ಮೂಹುರ್ತ ಇರೋ ಕಾರಣ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದರು ತಿಳಿಸಿದರು.

19 ರಂದು ಜನ ಸೇರಿಸಿ ನಾಮಪತ್ರ ಸಲ್ಲಿಸುತ್ತೇನೆ. ಇವತ್ತು ಇಡೀ ದಿನ ಕ್ಷೇತ್ರದಲ್ಲಿ ಇರ್ತೀನಿ. ರಾಜ್ಯದಲ್ಲಿ ಚುನಾಚಣೆ ಕಣ ಸಿದ್ದವಾಗಿದೆ. ನಮಗೆ ಆತ್ಮವಿಶ್ವಾಸ ಇದೆ, ಸಂಪೂರ್ಣ ಬಹುಮತ ಬರತ್ತೆ. ಉಳಿದ ಕ್ಷೇತ್ರಕ್ಕೆ ಇನ್ನೆರಡು ದಿನಗಳಲ್ಲಿ ತೀರ್ಮಾನ. 12 ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿದೆ. ಕೇಂದ್ರ ಚುನಾವಣೆ ಸಮಿತಿ ತೀರ್ಮಾನ ಮಾಡತ್ತೆ ಎಂದು ಹುಬ್ಬಳ್ಳಿಯಲ್ಲಿ ಬೊಮ್ಮಾಯಿ ಹೇಳಿಕೆ ನೀಡಿದರು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News