Karnataka Assembly election: ಹಸ್ತದ ಗುರುತು ಹೇರ್ ಕಟಿಂಗ್ ಮಾಡಿಸಿಕೊಂಡ ಕೈ ಅಭಿಮಾನಿ

Karnataka Assembly election: ಚುನಾವಣೆ ಮುಗಿದರೂ ಕಾವು ಇನ್ನೂ ಕೂಡ ಬಿಸಿಲಿನ ಬೇಗೆಗಿಂತ ಹೆಚ್ಚು ರಾಜಕೀಯದ ತಾಪವಿದ್ದು ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಜಯಶಾಲಿಯಾಗಿದ್ದಕ್ಕೆ ಕೈ ಅಭಿಮಾನಿ ಹಸ್ತದ ಗುರುತಿನ ಹೇರ್ ಕಟಿಂಗ್ ಮಾಡಿಸಿಕೊಂಡಿದ್ದಾರೆ.

Written by - Zee Kannada News Desk | Last Updated : May 14, 2023, 07:46 PM IST
  • ಕೈ ಅಭಿಮಾನಿ ಹಸ್ತದ ಗುರುತಿನ ಹೇರ್ ಕಟಿಂಗ್
  • ಕಾಂಗ್ರೆಸ್ ನ ಕಟ್ಟಾ ಬೆಂಬಲಿಗ ವಿಚಿತ್ರ ಅಭಿಮಾನ
  • ಹಸ್ತದ ಗುರುತಿನ ಹೇರ್ ಕಟಿಂಗ್ ಗಮನ ಸೆಳೆಯುತ್ತಿದೆ
Karnataka Assembly election: ಹಸ್ತದ ಗುರುತು ಹೇರ್ ಕಟಿಂಗ್ ಮಾಡಿಸಿಕೊಂಡ ಕೈ ಅಭಿಮಾನಿ title=

ಚಾಮರಾಜನಗರ : ಚುನಾವಣೆ ಮುಗಿದರೂ ಕಾವು ಇನ್ನೂ ಕೂಡ ಬಿಸಿಲಿನ ಬೇಗೆಗಿಂತ ಹೆಚ್ಚು ರಾಜಕೀಯದ ತಾಪವಿದ್ದು ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಜಯಶಾಲಿಯಾಗಿದ್ದಕ್ಕೆ ಕೈ ಅಭಿಮಾನಿ ಹಸ್ತದ ಗುರುತಿನ ಹೇರ್ ಕಟಿಂಗ್ ಮಾಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮೋದಿ ರೋಡ್ ಶೋ ಮಾಡಿದ ರಸ್ತೆಯನ್ನು ಸಗಣಿ ಗಂಜಲದಿಂದ ಶುದ್ಧಿ !

ಗುಂಡ್ಲುಪೇಟೆ ತಾಲೂಕಿನ ಅರೇಪುರ ಗ್ರಾಮದ ಜಿ.ಮೂರ್ತಿ ಎಂಬವರು ಗಣೇಶ್ ಪ್ರಸಾದ್ ಅಭಿಮಾನಿಯಾಗಿದ್ದು ಕಾಂಗ್ರೆಸ್ ನ ಕಟ್ಟಾ ಬೆಂಬಲಿಗರಾಗಿದ್ದಾರೆ. ಮೊದಲ ಸ್ಪರ್ಧೆಯಲ್ಲೇ ಗಣೇಶ್ ಪ್ರಸಾದ್ ಗೆಲುವು ಕಂಡ ಹಿನ್ನೆಲೆಯಲ್ಲಿ ಹರ್ಷಗೊಂಡಿರುವ ಮೂರ್ತಿ ಹಸ್ತದ ಗುರುತಿನ ಹೇರ್ ಕಟಿಂಗ್ ಮಾಡಿಸಿಕೊಂಡು ವಿಶೇಷ ಅಭಿಮಾನ ಮೆರೆದಿದ್ದಾರೆ.

ಗ್ರಾಮದಲ್ಲಿ ಹಾಗೂ ಅವರು ಹೋದಡೆಯಲ್ಲೆಲ್ಲಾ ಹಸ್ತದ ಗುರುತಿನ ಹೇರ್ ಕಟಿಂಗ್ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ದ್ವೇಷ, ಧರ್ಮಾಂಧತೆಯನ್ನು ಒದ್ದೋಡಿಸಿದ ಕರುನಾಡಿಗೆ ಧನ್ಯವಾದ -  ಪ್ರಕಾಶ್​ ರೈ!

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಭಾರಿಸಿದೆ. ಕಾಂಗ್ರೆಸ್​ ಮ್ಯಾಜಿಕ್ ನಂಬರ್ ದಾಟಿದ್ದು, ಬಹುಮತದ ಸರ್ಕಾರ ರಚಿಸುವುದು ಖಚಿತವಾಗಿದೆ. ಸದ್ಯದ ಮಾಹಿತಿ ಪ್ರಕಾರ ಕಾಂಗ್ರೆಸ್ 136 ಕ್ಷೇತ್ರಗಳಲ್ಲಿ ಅಭೂತಪೂರ್ವ ಮುನ್ನಡೆ ಸಾಧಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News