ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯ ನಿವೃತ್ತಿ ಘೋಷಿಸಲು ಬಿಜೆಪಿಯ ಕಿರುಕುಳವೇ ಕಾರಣ: ಕಾಂಗ್ರೆಸ್

Karnataka assembly election 2023: ಬಿಜೆಪಿಯಲ್ಲಿದ್ದೂ ಬಿಜೆಪಿಗರಂತಿರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ರಾಜಕೀಯ ನಿವೃತ್ತಿ ಘೋಷಿಸಿರುವುದಕ್ಕೆ ಬಿಜೆಪಿಯ ಕಿರುಕುಳವೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.

Written by - Puttaraj K Alur | Last Updated : Apr 4, 2023, 04:39 PM IST
  • ಬಿಜೆಪಿಯಲ್ಲಿದ್ದೂ ಬಿಜೆಪಿಗರಂತಿರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯ ನಿವೃತ್ತಿ
  • ಶ್ರೀನಿವಾಸ ಶೆಟ್ಟಿಯವರ ರಾಜಕೀಯ ನಿವೃತ್ತಿ ಘೋಷಣೆಗೆ ಬಿಜೆಪಿಯ ಕಿರುಕುಳವೇ ಕಾರಣ
  • ನೋವಿನ ವಿದಾಯ ಹೇಳಿ ಬಿಜೆಪಿ ಸಜ್ಜನರ ಪಕ್ಷವಲ್ಲವೆಂದು ಸಂದೇಶ ನೀಡಿದ್ದಾರೆ
ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯ ನಿವೃತ್ತಿ ಘೋಷಿಸಲು ಬಿಜೆಪಿಯ ಕಿರುಕುಳವೇ ಕಾರಣ: ಕಾಂಗ್ರೆಸ್ title=
ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯ ನಿವೃತ್ತಿ!

ಬೆಂಗಳೂರು: ಬಿಜೆಪಿಯಲ್ಲಿದ್ದೂ ಬಿಜೆಪಿಗರಂತಿರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ರಾಜಕೀಯ ನಿವೃತ್ತಿ ಘೋಷಿಸಿರುವುದಕ್ಕೆ ಬಿಜೆಪಿಯ ಕಿರುಕುಳವೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸತತ 5 ಬಾರಿ ಶಾಸಕರಾಗಿ ಆಯ್ಕೆಯಾದ, ಬಂಟ ಸಮುದಾಯದ ಪ್ರಭಲ ನಾಯಕರಾಗಿದ್ದರೂ ಸಂಪುಟಕ್ಕೆ ಸೇರಿಸಿಕೊಳ್ಳದ ಬಿಜೆಪಿ ಶ್ರೀನಿವಾಸ ಶೆಟ್ಟರಿಗಷ್ಟೇ ಅಲ್ಲ ಇಡೀ ಬಂಟ ಸಮುದಾಯವನ್ನು ಅವಮಾನಿಸಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ.

ಇದನ್ನೂ ಓದಿ: ಎಪ್ರಿಲ್ 8 ಅಥವಾ 9 ರಂದು ಬಿಜೆಪಿ ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ-ಸಿಎಂ ಬೊಮ್ಮಾಯಿ

‘ಬಂಟ ಸಮುದಾಯದ ನಾಯಕ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರು ಬಿಜೆಪಿಯಿಂದ ಅವಮಾನಿತರಾಗಿ ರಾಜಕೀಯ ನಿವೃತ್ತಿಯ ಘೋಷಣೆ ಮಾಡಿದ್ದಾರೆ. ಬಿಜೆಪಿ ಹಾಲಾಡಿಯವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಿಲ್ಲ, ಪಕ್ಷದಲ್ಲಿ ಉನ್ನತ ಹುದ್ದೆಗಳನ್ನು ನೀಡಲಿಲ್ಲ, ಈಗ ನೋವಿನ ವಿದಾಯ ಹೇಳುವ ಮೂಲಕ ಬಿಜೆಪಿ ಸಜ್ಜನರ ಪಕ್ಷವಲ್ಲವೆಂದ ಸಂದೇಶ ನೀಡಿದ್ದಾರೆ’ ಎಂದು ಕಾಂಗ್ರೆಸ್ ಕುಟುಕಿದೆ.

ಬಿಜೆಪಿಯಲ್ಲಿ ಎಲ್ಲವೂ ಆಯೋಮಯ!

‘ಬಿಜೆಪಿ ಈಗ ಮುಳುಗುತ್ತಿರುವ ಹಡಗು, ಹಡಗು ಮುಳುಗುತ್ತಿರುವಾಗ ಬದುಕುಳಿಯುವ ಆಸೆಯಿಂದ ಎಲ್ಲರೂ ಹೊರ ಜಿಗಿಯುತ್ತಿದ್ದಾರೆ! ಪಕ್ಷದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬದಲು ಪ್ರಹ್ಲಾದ್ ಜೋಶಿ ಬಂಡಾಯದ ಮ್ಯಾನೇಜ್ಮೆಂಟಿಗೆ ಮುಂದಾಗಿದ್ದು ಏಕೆ? ಕಟೀಲ್ ಅಸಮರ್ಥ ಎಂದೇ ಅಥವಾ ಜೋಶಿಗೆ ಪಕ್ಷ ಹಿಡಿತಕ್ಕೆ ಪಡೆಯುವ ಆಸೆಯೇ! ಬಿಜೆಪಿಯಲ್ಲಿ ಎಲ್ಲವೂ ಆಯೋಮಯ!’ ಎಂದು ಕಾಂಗ್ರೆಸ್ ಟೀಕಿಸಿದೆ.

ಇದನ್ನೂ ಓದಿ: ದೇವರ ದುಡ್ಡಿಗೆ ಬಿಜೆಪಿ ಕನ್ನ ಆರೋಪ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

ವಿಜಯೇಂದ್ರೆ ಹೆಸರು ಬಂದಿದ್ದಕ್ಕಾ?

ತಾನೇ ಗುಜರಾತ್ ಮಾದರಿ ಅನುಸರಿಸಿ ಕ್ಷೇತ್ರ ಬದಲಾವಣೆ ಮಾಡೋದು, ತಾನೇ ಲಿಸ್ಟ್ ರಿಲೀಸ್ ಮಾಡೋದು, ಆಮೇಲೆ ಆಕಾಂಕ್ಷಿಗಳ, ಬೆಂಬಲಿಗರ ಪ್ರತಿಭಟನೆ ತಾಳಲಾರದೇ ತಾನೇ ಅದನ್ನು ಫೇಕ್ ಅಂತಾ ಕರೆಯೋದು! ಅಭ್ಯರ್ಥಿಗಳ ಮೊದಲ ಪಟ್ಟಿ ಹಿಂಪಡೆಸಿ “ಸಂತೋಷ” ಪಡುತ್ತಿರೋದು ಯಾರು? ಪಟ್ಟಿ ಹಿಂಪಡೆದಿದ್ದು ಶಿಕಾರಿಪುರದಲ್ಲಿ ವಿಜಯೇಂದ್ರ ಹೆಸರು ಬಂದಿದ್ದಕ್ಕಾ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News