ಬಿಜೆಪಿಯ ಷಡ್ಯಂತ್ರಗಳಿಗೆ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ: ಸಿದ್ದರಾಮಯ್ಯ

Karnataka Assembly Election 2023: ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಯಾರಾಗಬೇಕೆಂದು ತೀರ್ಮಾನ ಮಾಡುವುದಿಲ್ಲ, ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Written by - Puttaraj K Alur | Last Updated : Apr 22, 2023, 09:39 PM IST
  • ಬಿಜೆಪಿಯವರು ನನ್ನ ಹೇಳಿಕೆಯ ವಿಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿದ್ದಾರೆ
  • ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ
  • ಚುನಾವಣಾ ಲಾಭ ಪಡೆಯುವ ಬಿಜೆಪಿ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ
ಬಿಜೆಪಿಯ ಷಡ್ಯಂತ್ರಗಳಿಗೆ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ: ಸಿದ್ದರಾಮಯ್ಯ  title=
ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಬಿಜೆಪಿಯವರು ನನ್ನ ಹೇಳಿಕೆಯ ವಿಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿಕೊಂಡು ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣಾ ಲಾಭ ಪಡೆಯುವ ಬಿಜೆಪಿಯ ಇಂತಹ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ ಎಂಬ ನಂಬಿಕೆ ನನಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ತಮ್ಮ ವಿಡಿಯೋ ತಿರುಚಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿರುವ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ, ಸಿಎಂ ಬೊಮ್ಮಾಯಿ ಒಬ್ಬ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಯೇ ಇಲ್ಲ. ಅದೆಲ್ಲ ಬಿಜೆಪಿ ಸೃಷ್ಟಿಸಿದ ಸುಳ್ಳುಗಳಷ್ಟೆ’ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ʼಮೋದಿ ನನ್ನ ದೇವರು..ʼ.! ಮಳೆಯಲ್ಲಿ ನೆನೆದಿದ್ದ ಪ್ರಧಾನಿ ಕಟೌಟ್‌ ಒರೆಸಿದ ʼನಮೋ ಅಭಿಮಾನಿʼ..

‘ವೀರೇಂದ್ರ ಪಾಟೀಲರು, ಎಸ್.ನಿಜಲಿಂಗಪ್ಪನವರು, ಜೆ.ಹೆಚ್.ಪಟೇಲರು, ಬಿ.ಡಿ/ಜತ್ತಿ, ಎಸ್.ಆರ್.ಕಂಠಿ ಇಂತಹ ಅನೇಕ ಪ್ರಾಮಾಣಿಕ ಮುಖ್ಯಮಂತ್ರಿಗಳನ್ನು ಲಿಂಗಾಯತ ಸಮುದಾಯ ಈ ನಾಡಿಗೆ ನೀಡಿದೆ. ಈ ಎಲ್ಲಾ ನಾಯಕರ ಬಗೆಗೆ ನನಗೆ ವಿಶೇಷ ಪ್ರೀತಿ, ಅಭಿಮಾನವಿದೆ. ವೀರಶೈವ - ಲಿಂಗಾಯತರ ಬಗ್ಗೆ ನಮಗೆ ಗೌರವ ಇರುವುದರಿಂದಲೇ ಹೆಚ್ಚು ಟಿಕೆಟ್‍ಗಳನ್ನು ಅವರಿಗೆ ನೀಡಿದ್ದೇವೆ. ಕಳೆದ ಬಾರಿ 47 ಲಿಂಗಾಯತ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್ ನೀಡಿದ್ದರೆ, ಈ ಬಾರಿ ಅದಕ್ಕಿಂತ ಹೆಚ್ಚು ಅಂದರೆ ಸುಮಾರು 52 - 53 ಕ್ಷೇತ್ರಗಳಲ್ಲಿ ಟಿಕೆಟ್ ನೀಡಿದ್ದೇವೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಯಾರಾಗಬೇಕೆಂದು ತೀರ್ಮಾನ ಮಾಡುವುದಿಲ್ಲ, ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ನಮ್ಮಲ್ಲಿ ನಡೆದುಕೊಂಡುಬಂದ ಪದ್ಧತಿ. ಬಿಜೆಪಿಯವರು ಜಾತಿ ಮೇಲೆ ಮಾಡಿದರೆ ಅದು ಅವರ ಪಕ್ಷದ ವಿಚಾರ. ಅದಕ್ಕೆ ನಮ್ಮ ತಕರಾರಿಲ್ಲ’ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Karnataka election 2023: 10 ಡಿಕೆಶಿ ಬಂದ್ರೂ ಲಿಂಗಾಯತರ ಡ್ಯಾಂ ಒಡೆಯಲ್ಲ- ಸಿಸಿ ಪಾಟೀಲ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News