ಮತದಾನಕ್ಕೆ ಬಂದ ಮಹಿಳೆಗೆ ಲಾಠಿ ಏಟು ಆರೋಪ !ಮತಗಟ್ಟೆಯಲ್ಲೇ ವಾಗ್ವಾದ, ನೂಕಾಟ, ತಳ್ಳಾಟ

Karnataka Assembly Election :  ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಶೀರನಹಳ್ಳಿಯಲ್ಲಿ  ಮತಗಟ್ಟೆ ಸಂಖ್ಯೆ 216 ರಲ್ಲಿ ಮತದಾರರು ಮತ್ತು  ಸಿಪಿಐ ಸದಲಗಿ ನಡುವೆ ತೀವ್ರ ವಾಗ್ವಾದ ನಡೆದಿದೆ.

Written by - Ranjitha R K | Last Updated : May 10, 2023, 03:47 PM IST
  • ಶೀರನಹಳ್ಳಿಯಲ್ಲಿ ಮತದಾನ ಸ್ಥಗಿತಗೊಳಿಸಿದ ಮತದಾರರು
  • ಮತಗಟ್ಟೆಯಲ್ಲಿ ವಾಗ್ವಾದ, ನೂಕಾಟ, ತಳ್ಳಾಟ
  • ಮಹಿಳೆಯ ಕೈಗೆ ಲಾಠಿಯಿಂದ ಹೊಡೆದಿರುವ ಆರೋಪ
ಮತದಾನಕ್ಕೆ ಬಂದ ಮಹಿಳೆಗೆ ಲಾಠಿ ಏಟು ಆರೋಪ !ಮತಗಟ್ಟೆಯಲ್ಲೇ ವಾಗ್ವಾದ, ನೂಕಾಟ, ತಳ್ಳಾಟ title=

ಗದಗ : Karnataka Assembly Election : ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಶೀರನಹಳ್ಳಿಯಲ್ಲಿ ಮತದಾರರು ಮತದಾನ ಸ್ಥಗಿತ ಮಾಡಿದ್ದಾರೆ. ಮಹಿಳೆಯ ಕೈಗೆ ಲಾಠಿಯಿಂದ ಹೊಡೆಯಲಾಗಿದೆ ಎಂದು ಆರೋಪಿಸಿರುವ ಮತದಾರರು ಚುನಾವಣಾ ಅಧಿಕಾರಿಗಳ‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತಗಟ್ಟೆಯಲ್ಲಿ ವಾಗ್ವಾದ, ನೂಕಾಟ, ತಳ್ಳಾಟ ನಡೆದಿದೆ.  

ಮಹಿಳೆಯ ಕೈಗೆ ಲಾಠಿಯಿಂದ ಹೊಡೆದಿರುವ  ಆರೋಪ  :
 ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಶೀರನಹಳ್ಳಿಯಲ್ಲಿ ಮತಗಟ್ಟೆ ಸಂಖ್ಯೆ 216 ರಲ್ಲಿ ಮತದಾರರು ಮತ್ತು  ಸಿಪಿಐ ಸದಲಗಿ ನಡುವೆ ತೀವ್ರ ವಾಗ್ವಾದ ನಡೆದಿದೆ. ಮಹಿಳೆಯ ಕೈಗೆ ಲಾಠಿಯಿಂದ ಹೊಡೆಯಲಾಗಿದೆ ಎಂದು ಆರೋಪಿಸಿ ಮತದಾರರು ಕೆಲ ಸಮಯದವರೆಗೆ ಮತದಾನ ಸ್ಥಗಿತಗೊಳಿಸಿದ್ದಾರೆ.  ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಪೊಲೀಸ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮತದಾನ ಸ್ಥಗಿತ ಮಾಡಿ ಚುನಾವಣಾ ಅಧಿಕಾರಿಗಳ‌ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ : Karnataka Election 2023: ಕಾಂಗ್ರೆಸ್ 130-150 ಸ್ಥಾನ ಗೆಲ್ಲಲಿದೆ- ಸಿದ್ದರಾಮಯ್ಯ ವಿಶ್ವಾಸ

ಸ್ಥಳಕ್ಕೆ ತಹಶೀಲ್ದಾರ್ ಶ್ರುತಿ ಮಳ್ಳಪ್ಪಗೌಡ   ಭೇಟಿ :
ಮತಗಟ್ಟೆಯಲ್ಲಿ ಮತದಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು. ಈ ಸಂದರ್ಭದಲ್ಲಿ ನೂಕು ನುಗ್ಗಲು, ತಳ್ಳಾಟ ನಡೆದಿದೆ. ಈ ಸಂದರ್ಭದಲ್ಲಿ ಹುಲಗೇಮ್ಮ ಎನ್ನುವ ಮಹಿಳೆಯ ಕೈಗೆ ಲಾಠಿಯಿಂದ ಹೊಡೆಯಲಾಗಿದೆ ಎನ್ನುವ ಆರೋಪ ಸ್ಥಳೀಯರದ್ದು. ಲಾಠಿಯಿಂದ ಹೊಡೆದ ಸಿಬ್ಬಂದಿ ವಿರುದ್ದ ಕ್ರಮ ಕೈಗೊಳ್ಳವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಸ್ಥಳಕ್ಕೆ ತಹಶೀಲ್ದಾರ್ ಶ್ರುತಿ ಮಳ್ಳಪ್ಪಗೌಡ  ದೌಡಾಯಿಸಿದ್ದಾರೆ. 

ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮದ ಭರವಸೆ :
ಘಟನೆ ಬಗ್ಗೆ ಮಹಿಳೆಯಿಂದ  ಮಾಹಿತಿ ಪಡೆದುಕೊಂಡ ತಹಶೀಲ್ದಾರ್, ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ.  ನಟರ ಪರಿಸ್ಥಿತಿ ಶಾಂತವಾಗಿದೆ.  

ಇದನ್ನೂ ಓದಿ : Karnataka Assembly Election 2023 Latest Updates: 400ಕ್ಕೂ ಅಧಿಕ ಮತದಾರರ ಹೆಸರು ಡಿಲೀಟ್: ಮತಗಟ್ಟೆಗೆ ಬಂದವರಿಗೆ ಬಿಗ್ ಶಾಕ್

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News