Karnataka Assembly Election Result 2023: ಸಿಎಂ ಆಯ್ಕೆ ಬಗ್ಗೆ ಸಿದ್ದರಾಯ್ಯ ಹೇಳಿದ್ದೇನು..?

Karnataka Assembly Election Result 2023: ರಾಜ್ಯದ ಜನರ ಹಿತದೃಷ್ಟಿ ಮತ್ತು ಅಭಿವೃದ್ಧಿ ದೃಷ್ಟಿಯಿಂದ ನಾವು ಆಡಳಿತ ನಡೆಸುತ್ತೇವೆ. ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟು ಮತ ನೀಡಿದ ರಾಜ್ಯದ ಎಲ್ಲಾ ಮತದಾರರಿಗೂ ನಾನು ಧನ್ಯವಾದ ಸಲ್ಲಿಸುತ್ತೇನೆಂದು ಸಿದ್ದರಾಮಯ್ಯ ಹೇಳಿದರು.

Written by - Puttaraj K Alur | Last Updated : May 13, 2023, 07:40 PM IST
  • ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತದಿಂದ ಬೇಸತ್ತು ಜನರು ಕಾಂಗ್ರೆಸ್‍ಗೆ ಬಹುಮತ ನೀಡಿದ್ದಾರೆ
  • ನನ್ನನ್ನು ಬಿಜೆಪಿಯವರು ಲಿಂಗಾಯತ ವಿರೋಧಿ ಅಂತಾ ಬಿಂಬಿಸಲು ಹೊರಟಿದ್ದರು
  • ನಾನು ಮಾನವತವಾದಿ, ನಾನು ಯಾವುದೇ ಜಾತಿ ವಿರೋಧಿ ಅಲ್ಲವೆಂದ ಸಿದ್ದರಾಮಯ್ಯ
Karnataka Assembly Election Result 2023: ಸಿಎಂ ಆಯ್ಕೆ ಬಗ್ಗೆ ಸಿದ್ದರಾಯ್ಯ ಹೇಳಿದ್ದೇನು..? title=
ಸಿಎಂ ಆಯ್ಕೆ ಬಗ್ಗೆ ಸಿದ್ದರಾಯ್ಯ ಹೇಳಿದ್ದೇನು..?

ಮೈಸೂರು: ಬಿಜೆಪಿಯ ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ಬೇಸತ್ತಿದ್ದ ಜನರು ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ಕ್ಷೇತ್ರದ ಮತ ಎಣಿಕೆ ಕೇಂದ್ರದ ಬಳಿ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ರಾಜ್ಯದ ಜನರು ಬೇಸತ್ತಿದ್ದರು. ಕಾಂಗ್ರೆಸ್ ಪಕ್ಷದ ಪರವಾಗಿ ಮತ ಹಾಕಿದ ಎಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ’ ಎಂದು ಹೇಳಿದರು.

‘ನಾನು ಮಾನವತವಾದಿ. ನಾನು ಯಾವುದೇ ಜಾತಿ ವಿರೋಧಿ ಅಲ್ಲ. ನನ್ನನ್ನು ಬಿಜೆಪಿಯವರು ಲಿಂಗಾಯತ ವಿರೋಧಿ ಅಂತಾ ಬಿಂಬಿಸಲು ಹೊರಟಿದ್ದರು. ಆದರೆ ಬಿಜೆಪಿಯವರ ಆಟ ಚುನಾವಣೆಯಲ್ಲಿ ನಡೆಯಲಿಲ್ಲ. ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ 100 ಬಾರಿ ರಾಜ್ಯಕ್ಕೆ ಬಂದರೂ ಏನೂ ನಡೆಯಲ್ಲ ಅಂತಾ ನಾನು ಹೇಳಿದ್ದೆ. ಇದೀಗ ಫಲಿತಾಂಶ ನಿಮ್ಮ ಕಣ್ಣ ಮುಂದೆ ಇದೆ’ ಎಂದು ಹೇಳಿದರು.

ಇದನ್ನೂ ಓದಿ: ಕೋಲಾರದ 6 ವಿಧಾಸಭಾ ಕ್ಷೇತ್ರಗಳಲ್ಲಿ 4 ಕಾಂಗ್ರೆಸ್‌, 2 ಜೆಡಿಎಸ್‌ ವಶಕ್ಕೆ..! ಬಿಜೆಪಿ ನಾಪತ್ತೆ..

ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ನಾವು ಕೊಟ್ಟ ಎಲ್ಲಾ ಭರವಸೆಯನ್ನು ಈಡೇರಿಸುತ್ತೇವೆ. ರಾಜ್ಯದ ಜನರ ಹಿತದೃಷ್ಟಿ ಮತ್ತು ಅಭಿವೃದ್ಧಿ ದೃಷ್ಟಿಯಿಂದ ನಾವು ಆಡಳಿತ ನಡೆಸುತ್ತೇವೆ. ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟು ಮತ ನೀಡಿದ ರಾಜ್ಯದ ಎಲ್ಲಾ ಮತದಾರರಿಗೂ ನಾನು ಧನ್ಯವಾದ ಸಲ್ಲಿಸುತ್ತೇನೆಂದು ಸಿದ್ದರಾಮಯ್ಯ ಹೇಳಿದರು.

ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್ ತಿರ್ಮಾನ ಮಾಡ್ತಾರೆ ಎಂದ ಸಿದ್ದರಾಮಯ್ಯ, ನೀವು ಸಿಎಂ ಅಭ್ಯರ್ಥಿನಾ ಎಂದಿದ್ದಕ್ಕೆ ಮಾತನಾಡದೆ ಹೊರಟು ಹೋದರು. ಕಾಂಗ್ರೆಸ್‍ ಪಕ್ಷಕ್ಕೆ ಸ್ಪಷ್ಟ ಬಹುಮತದ ಸರ್ಕಾರ ಬಂದಿರುವ ಕಾರಣ ಇದೀಗ ಸಿಎಂ ಯಾರಾಗುತ್ತಾರೆ ಅನ್ನೋದು ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸಿಎಂ ರೇಸ್‍ನಲ್ಲಿದ್ದಾರೆ. ಬಹುತೇಕ ಸಿದ್ದರಾಮಯ್ಯನವರೇ ಮತ್ತೆ ಸಿಎಂ ಆಗಲಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ: Chamrajnagar Assembly Election Result 2023: ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಮೂರರಲ್ಲಿ ಕಾಂಗ್ರೆಸ್ ಕೈ ಹಿಡಿದ ಮತದಾರರು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News