Karnataka CM Decision: ಕೊಟ್ಟರೆ ಸಿಎಂ ಸ್ಥಾನ ಕೊಡಿ ಇಲ್ಲದಿದ್ದರೆ ಏನು ಬೇಡವೆಂದ ಡಿಕೆಶಿ!

Karnataka CM Decision: AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿ ನಂತರ ಸ್ಪಷ್ಟ ಚಿತ್ರಣ ಸಾಧ್ಯತೆಯಿದೆ. ವರಿಷ್ಟರ ಮಾತಿಗೆ ಡಿಕೆಶಿ ಒಪ್ಪುತ್ತಾರಾ ಅಥವಾ ವರಿಷ್ಟರನ್ನೇ ಮನ ಒಲಿಸುತ್ತಾರೆ ಅನ್ನೋ ಪ್ರಶ್ನೆ ಮೂಡಿದೆ.

Written by - Zee Kannada News Desk | Last Updated : May 17, 2023, 03:39 PM IST
  • ಕೊಟ್ಟರೆ ಸಿಎಂ ಸ್ಥಾನ ಕೊಡಿ ಇಲ್ಲದಿದ್ದರೆ ಏನು ಬೇಡವೆಂದ ಡಿ.ಕೆ.ಶಿವಕುಮಾರ್
  • ಕಾಂಗ್ರೆಸ್ ಹೈಕಮಾಂಡ್‍ಗೆ ಮತ್ತೆ ದೊಡ್ಡ ತಲೆನೋವಾದ ಸಿಎಂ ಆಯ್ಕೆ ವಿಚಾರ
  • AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿ ನಂತರ ಸ್ಪಷ್ಟ ಚಿತ್ರಣ ಸಾಧ್ಯತೆ
Karnataka CM Decision: ಕೊಟ್ಟರೆ ಸಿಎಂ ಸ್ಥಾನ ಕೊಡಿ ಇಲ್ಲದಿದ್ದರೆ ಏನು ಬೇಡವೆಂದ ಡಿಕೆಶಿ! title=
ದೊಡ್ಡ ತಲೆನೋವಾದ ಸಿಎಂ ಆಯ್ಕೆ ವಿಚಾರ!

ಬೆಂಗಳೂರು: ಸಿದ್ದರಾಮಯ್ಯರಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿದೆ. ಅದರಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಹೇಳಿದೆ. ಆದರೆ ಡಿಕೆಶಿ ಇದ್ಯಾವುದನ್ನೂ ಒಪ್ಪುತ್ತಿಲ್ಲ. ಹೀಗಾಗಿ ಸಿಎಂ ಆಯ್ಕೆ ವಿಚಾರ ಇನ್ನೂ ಕಗ್ಗಂಟಾಗಿಯೇ ಮುಂದುವರೆದಿದೆ.  

ಕಾಂಗ್ರೆಸ್ ನಾಯಕರ ಸಂಧಾನಕ್ಕೆ ಡಿ.ಕೆ.ಶಿವಕುಮಾರ್ ಒಪ್ಪುತ್ತಿಲ್ಲ. ಕೊಟ್ಟರೆ ಸಿಎಂ ಸ್ಥಾನ ಕೊಡಿ ಇಲ್ಲದಿದ್ದರೆ ಏನು ಬೇಡವೆಂದು ಡಿಕೆಶಿ ಖಂಡತುಂಡವಾಗಿ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರಿಗೆ ಸಿಎಂ ಪಟ್ಟ ಇದೀಗ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಒಬ್ಬರಿಗೆ ಸಿಎಂ ಪಟ್ಟ ಕೊಟ್ಟರೆ ಇನ್ನೊಬ್ಬರಿಗೆ ಮುನಿಸು. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್‍ಗೆ ಸಿಎಂ ಆಯ್ಕೆ ವಿಚಾರ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ಸಿದ್ದು ಹೆಸರು ಘೋಷಣೆ : ಡಿಕೆಶಿ ತವರಲ್ಲಿ ಖಾಕಿ ಹೈ ಅರ್ಲಟ್‌

AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿ ನಂತರ ಸ್ಪಷ್ಟ ಚಿತ್ರಣ ಸಾಧ್ಯತೆಯಿದೆ. ವರಿಷ್ಟರ ಮಾತಿಗೆ ಡಿಕೆಶಿ ಒಪ್ಪುತ್ತಾರಾ ಅಥವಾ ವರಿಷ್ಟರನ್ನೇ ಮನ ಒಲಿಸುತ್ತಾರೆ ಅನ್ನೋ ಪ್ರಶ್ನೆ ಮೂಡಿದೆ. ಬಂಡೆ ಎದುರು ಕಾಂಗ್ರೆಸ್ ನಾಯಕರು ತಂಡಾ ಆಗಿದ್ದಾರೆ. ಒಂದೆಡೆ ಸಿದ್ದರಾಮಯ್ಯಗೆ ಹೆಚ್ಚಿನ ಶಾಸಕರ ಬೆಂಬಲವಿದೆ. ಮತ್ತೊಂದೆಡೆ ಡಿಕೆಶಿಗೆ ಸಮುದಾಯ ಹಾಗೂ ಪಕ್ಷದ ಹಿಡಿತವಿದೆ.

ಇಷ್ಟಪಟ್ಟವರಿಗೆ ವಿರೋಧ ಪಕ್ಷದ ನಾಯಕ ಹಾಗೂ ಸಿಎಂ ಮಾಡಲಾಗಿದೆ. ಕಷ್ಟ ಪಟ್ಟವರಿಗೆ ಏನು ಎಂಬ ಪ್ರಶ್ನೆಗೆ ಡಿಕೆಶಿ ಬಣ ಕೇಳುತ್ತಿರುವ ಕೇಳುತ್ತಿದೆ. ಅಧಿಕಾರ ಹಂಚಿಕೆಯ ಸೂತ್ರಕ್ಕೂ ಡಿಕೆಶಿ ಒಪ್ಪುತ್ತಿಲ್ಲ.  2025ರಲ್ಲಿ ಸಿಎಂ ಆಗಲು ಡಿಕೆಶಿ ಒಪ್ಪಲ್ಲ. ಹೀಗಾಗಿ ಬೇರೆ ಬೇರೆ ಆಯ್ಕೆಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಚರ್ಚೆ ನಡೆಸುತ್ತಿದೆ.

ಇದನ್ನೂ ಓದಿ: ಸಂಪೂರ್ಣ ಬಹುಮತವಿದ್ದರೂ ಕಾಂಗ್ರೆಸ್ ಸರ್ಕಾರ ರಚಿಸುತ್ತಿಲ್ಲ. ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News