Karnataka Elections 2023: RSS ಕಚೇರಿಗೆ ಭೇಟಿ ನೀಡಿದ ಹಂಗಾಮಿ ಸಿಎಂ ಬೊಮ್ಮಾಯಿ

Karnataka election result 2023: ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರ ಸಭೆಯನ್ನು ಕರೆದಿಲ್ಲ. ಶಾಸಕರ  ಸಭೆಯನ್ನು ರಾಜ್ಯಾಧಕ್ಷರು ಕರೆಯಲಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ.

Written by - Zee Kannada News Desk | Last Updated : May 15, 2023, 03:17 PM IST
  • ಆರ್‍ಎಸ್‍ಎಸ್‍ ನಾಯಕರೊಂದಿಗೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿ ಬಸವರಾಜ ಬೊಮ್ಮಾಯಿ‌
  • ಬರುವಂತಹ ದಿನಗಳಲ್ಲಿ ಪಕ್ಷವನ್ನು ಮುಂದೆ ಹೇಗೆ ಸಂಘಟಿಸಬೇಕು ಎಂಬುದರ ಬಗ್ಗೆ ಚರ್ಚೆ ಆಗಿದೆ
  • ಶಾಸಕರ ಸಭೆಯನ್ನು ರಾಜ್ಯಾಧಕ್ಷರು ಕರೆಯಲಿದ್ದಾರೆ ಎಂದ ಬಸವರಾಜ ಬೊಮ್ಮಾಯಿ
Karnataka Elections 2023: RSS ಕಚೇರಿಗೆ ಭೇಟಿ ನೀಡಿದ ಹಂಗಾಮಿ ಸಿಎಂ ಬೊಮ್ಮಾಯಿ   title=
ಪಕ್ಷ ಸಂಘಟನೆ ಬಗ್ಗೆ ಬೊಮ್ಮಾಯಿ ಚರ್ಚೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಆರ್‍ಎಸ್‍ಎಸ್‍ ನಾಯಕರೊಂದಿಗೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಶವ ಕೃಪಕ್ಕೆ ಸೋಮವಾರ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಂದು RSS ಮುಖಂಡರೊಂದಿಗೆ ಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆ ಮಾಡಿದ್ದೇವೆ. ಬರುವಂತಹ ದಿನಗಳಲ್ಲಿ ಪಕ್ಷವನ್ನು ಮುಂದೆ ಹೇಗೆ ಸಂಘಟಿಸಬೇಕು ಎಂಬುದರ ಬಗ್ಗೆ ಚರ್ಚೆ ಆಗಿದೆ’ ಎಂದು ಹೇಳಿದರು.

ಇದನ್ನೂ ಓದಿ: Puttur Assembly Constituency : ಬಿಜೆಪಿ ನಾಯಕರ ಫೋಟೋಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಪೋಸ್ಟರ್‌ ವೈರಲ್‌ !

ಬಿಜೆಪಿ ರಾಜ್ಯಾಧಕ್ಷರು, ವರಿಷ್ಠರ ಜೊತೆಗೆ ಹಲವಾರು ಬಾರಿ ಚರ್ಚಿಸಿ ಭಾರತೀಯ ಜನತಾ ಪಕ್ಷವನ್ನು ಹೇಗೆ ಸಂಘಟನೆ ಮಾಡಬೇಕು ಎನ್ನುವ ತೀರ್ಮಾನ ಮಾಡುತ್ತೇವೆ ಎಂದರು.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರ ಸಭೆಯನ್ನು ಕರೆದಿಲ್ಲ. ಶಾಸಕರ  ಸಭೆಯನ್ನು ರಾಜ್ಯಾಧಕ್ಷರು ಕರೆಯಲಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ಮೇ 18ಕ್ಕೆ ಮುಖ್ಯಮಂತ್ರಿ ಪ್ರಮಾಣ ವಚನ : ಸಂಜೆ ಶಾಸಕಾಂಗ ನಾಯಕರ ಹೆಸರು ಘೋಷಣೆ! ಡಿಕೆಶಿ ಆಯ್ಕೆ ಬಹುತೇಕ ಖಚಿತ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News