ಭಜರಂಗದಳ ನಿಷೇಧ: ಕಾಂಗ್ರೆಸ್‍ಗೆ ತಕ್ಕ ಪಾಠ ಕಲಿಸುತ್ತೇವೆಂದ ಶ್ರೀರಾಮಸೇನೆ  

Karnataka Assembly Election 2023: ಭಜರಂಗದಳ ನಿಷೇಧ ಮಾಡುತ್ತೇವೆಂಬ ಕಾಂಗ್ರೆಸ್ ಹೇಳಿಕೆ ಹಿನ್ನೆಲೆ ಧಾರವಾಡದಲ್ಲಿ ಬಿಜೆಪಿಗೆ ಬೆಂಬಲ ನೀಡಲು ಶ್ರೀರಾಮಸೇನೆ ನಿರ್ಧಾರ ಮಾಡಿದೆ ಎಂದು ಶ್ರೀರಾಮಸೇನೆ ತಾಲೂಕು ಅಧ್ಯಕ್ಷ ಮೈಲಾರ್ ಗುಡ್ಡಪ್ಪನವರ ಹೇಳಿದ್ದಾರೆ.

Written by - Zee Kannada News Desk | Last Updated : May 3, 2023, 03:11 PM IST
  • ಭಜರಂಗದಳ ನಿಷೇಧ ವಿಚಾರ ಹಿನ್ನೆಲೆ ಶ್ರೀರಾಮಸೇನೆ ಆಕ್ರೋಶ ವ್ಯಕ್ತಪಡಿಸಿದೆ
  • ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಾವು ತಕ್ಕ ಪಾಠವನ್ನು ಕಲಿಸುತ್ತೇವೆ
  • ಧಾರವಾಡದಲ್ಲಿ ತಟಸ್ಥವಾಗಿದ್ದ ಶ್ರೀರಾಮಸೇನೆಯಿಂದ ಬಿಜೆಪಿಗೆ ಬೆಂಬಲ
ಭಜರಂಗದಳ ನಿಷೇಧ: ಕಾಂಗ್ರೆಸ್‍ಗೆ ತಕ್ಕ ಪಾಠ ಕಲಿಸುತ್ತೇವೆಂದ ಶ್ರೀರಾಮಸೇನೆ   title=
‘ಕಾಂಗ್ರೆಸ್‍ಗೆ ತಕ್ಕ ಪಾಠ ಕಲಿಸುತ್ತೇವೆ’

ಧಾರವಾಡ: ಭಜರಂಗದಳ ನಿಷೇಧ ವಿಚಾರ ಹಿನ್ನೆಲೆ ಶ್ರೀರಾಮಸೇನೆ ಆಕ್ರೋಶ ವ್ಯಕ್ತಪಡಿಸಿದೆ. ಧಾರವಾಡದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮಸೇನೆ ಕಾರ್ಯಕರ್ತರು ಕಿಡಿಕಾರಿದ್ದಾರೆ.

ಧಾರವಾಡದಲ್ಲಿ ತಟಸ್ಥವಾಗಿ ಉಳಿದಿದ್ದ ಶ್ರೀರಾಮಸೇನೆಯು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದೆ. ಕಾರ್ಕಳದಲ್ಲಿ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸ್ಪರ್ಧೆ ಹಿನ್ನೆಲೆ ಶ್ರೀರಾಮಸೇನೆ ಕಾರ್ಯಕರ್ತರು ತಟಸ್ಥವಾಗಿ ಉಳಿದಿದ್ದರು.

ಇದನ್ನೂ ಓದಿ: Karnataka Assembly Election: ಬಿಜೆಪಿಯವರನ ನೋಡಿದ್ರೆ ಯಾರು ವೋಟ್ ಹಾಕಲ್ಲ ಅದ್ಕೆ ಪದೇ ಪದೇ ಮೋದಿ & ಅಮಿತ್ ಶಾ ಅವ್ರನ್ನ ಕರೆಸುತ್ತಿದ್ದಾರೆ: ಸಿದ್ದರಾಮಯ್ಯ

ಭಜರಂಗದಳ ನಿಷೇಧ ಮಾಡುತ್ತೇವೆಂಬ ಕಾಂಗ್ರೆಸ್ ಹೇಳಿಕೆ ಹಿನ್ನೆಲೆ ಧಾರವಾಡದಲ್ಲಿ ಬಿಜೆಪಿಗೆ ಬೆಂಬಲ ನೀಡಲು ಶ್ರೀರಾಮಸೇನೆ ನಿರ್ಧಾರ ಮಾಡಿದೆ ಎಂದು ಶ್ರೀರಾಮಸೇನೆ ತಾಲೂಕು ಅಧ್ಯಕ್ಷ ಮೈಲಾರ್ ಗುಡ್ಡಪ್ಪನವರ ಹೇಳಿದ್ದಾರೆ.

ಪ್ರಮೋದ್ ಮುತಾಲಿಕ್ ಗೆಲುವಿಗಾಗಿ ನಾವು ವಿಶೇಷ ಪೂಜೆ ಮಾಡುತ್ತಿದ್ದೇವೆ. ಹುಬ್ಬಳ್ಳಿ-ಧಾರವಾಡ ಪಶ್ಚಿಮ ಹಾಗೂ ಧಾರವಾಡ ಗ್ರಾಮೀಣ ಭಾಗದಲ್ಲಿ ವಿಶೇಷ ಪೂಜೆ ಮಾಡಿ ಗೆಲುವಿಗಾಗಿ ಪ್ರಾರ್ಥಿಸುತ್ತಿದ್ದೇವೆ. ಹಿಂದುತ್ವದ ಉಳಿವಿಗಾಗಿ ಮುತಾಲಿಕ್‍ ಅವರಿಗೆ ಗೆಲುವು ಸಿಗಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮನೆಯಿಂದ ಮತದಾನ ಮಾಡಿದ ಶತಾಯುಷಿ: ಫೋನ್ ಕಾಲ್ ಮೂಲಕ ಅಭಿನಂದನೆ ಸಲ್ಲಿಸಿದ ಮುಖ್ಯ ಚುನಾವಣಾ ಆಯುಕ್ತರು

ನಾವು ಇಷ್ಟು ದಿನ ತಟಸ್ಥವಾಗಿ ಉಳಿದಿದ್ವಿ, ಆದರೆ ಈಗ ಬಿಜೆಪಿಗೆ ಬೆಂಬಲ ನೀಡುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು ನಿಷೇಧ ಮಾಡ್ತೆವಿ ಎಂದು ಹೇಳಿದ್ದಾರೆ. ಗ್ರಾಮ ಘಟಕದ ಕಾರ್ಯಕರ್ತರಿಗೆ ಬಿಜೆಪಿ ಬೆಂಬಲಿಸುವಂತೆ ಹೇಳಿದ್ದೇವೆ. ನಾವು ಯಾವತ್ತೂ ಭಜರಂಗದಳ, ಶ್ರೀರಾಮಸೇನೆ ಅಂತ ನೋಡಿಲ್ಲ. ಹಿಂದುತ್ವ ಉಳಿವಿಗಾಗಿ ಹೋರಾಟ ಮಾಡುವ ಎಲ್ಲಾ ಸಂಘಟನೆ ನಮ್ಮದೇ. ಈ ಚುನಾವಣೆಯಲ್ಲಿ ನಾವು ಕಾಂಗ್ರೆಸ್ ಗೆ ತಕ್ಕ ಪಾಠವನ್ನು ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News