ಚಾಮರಾಜನಗರದಲ್ಲಿ ಹಣ್ಣು ಮಾರಾಟ ಮಾಡಿ ವಾಟಾಳ್ ಮತ ಬೇಟೆ!!

Karnataka assembly Election: ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಮಾಜಿ ಶಾಸಕ ವಾಟಾಳ್ ನಾಗರಾಜ್, ಚಾಮರಾಜನಗರದ ಮಾರಿಗುಡಿ ಬೀದಿಯಲ್ಲಿನ ಹಣ್ಣು ಮಾರಾಟಗಳ ಗಾಡಿಗಳಲ್ಲಿ ಕುಳಿತು ಮಾವು, ಸೇಬು, ಬಾಳೆ ಮಾರಾಟ ಮಾಡಿ ಮತಬೇಟೆ ನಡೆಸಿದರು.

Written by - Yashaswini V | Last Updated : May 1, 2023, 03:04 PM IST
  • ಚಾಮರಾಜನಗರ ಜಿಲ್ಲೆ ಮಾಡಿದ್ದು ನಾನು- ರಾಹುಲ್ ಗಾಂಧಿ ಅಲ್ಲ.
  • ರಸ್ತೆ ನಿರ್ಮಿಸಿದ್ದು ನಾನು, ಕುಡಿಯುವ ನೀರು ಕೊಟ್ಟಿದ್ದು ನಾನು, ಬಿಜೆಪಿ ಇಲ್ಲವೇ ಕಾಂಗ್ರೆಸ್ ನವರಲ್ಲ.
  • ನೀರು ಕುಡಿಯುವ ಋಣಕ್ಕಾದರೂ ಜನರು ನನಗೊಂದು ಮತ ಕೊಡಬೇಕು.
ಚಾಮರಾಜನಗರದಲ್ಲಿ ಹಣ್ಣು ಮಾರಾಟ ಮಾಡಿ ವಾಟಾಳ್ ಮತ ಬೇಟೆ!! title=

Karnataka assembly Election 2023: ಕರ್ನಾಟಕದಲ್ಲಿ ವಿಭಿನ್ನ ಚಳವಳಿಗಳ ಮೂಲಕವೇ ಮನೆ ಮಾತಾಗಿರುವ, ತಮ್ಮ ವಿಭಿನ್ನ ನಡೆ ಮೂಲಕ ಗಮನ ಸೆಳೆಯುವ ವಾಟಾಳ್ ನಾಗರಾಜ್ ಮತಯಾಚನೆಯನ್ನೂ ಡಿಫರೆಂಟ್ ಆಗಿ ಮಾಡುತ್ತಿದ್ದಾರೆ. 

ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಮಾಜಿ ಶಾಸಕ ವಾಟಾಳ್ ನಾಗರಾಜ್, ಚಾಮರಾಜನಗರದ ಮಾರಿಗುಡಿ ಬೀದಿಯಲ್ಲಿನ ಹಣ್ಣು ಮಾರಾಟಗಳ ಗಾಡಿಗಳಲ್ಲಿ ಕುಳಿತು ಮಾವು, ಸೇಬು, ಬಾಳೆ ಮಾರಾಟ ಮಾಡಿ ಮತಬೇಟೆ ನಡೆಸಿದರು.

ಇದನ್ನೂ ಓದಿ- Karnataka Assembly Election: ಬಿಜೆಪಿ ಪ್ರಜಾ ಪ್ರಣಾಳಿಕೆಯ ಮುಖ್ಯಾಂಶಗಳು

ಅರ್ಧ ಕೆಜಿ ಸೇಬಿಗೆ 100 ರೂ‌. ವಾಟಾಳ್ ನಾಗರಾಜ್ ಗೆ ಒಂದು ಓಟ್, ಅರ್ಧ ಕೆಜಿ ಮಾವಿನ ಹಣ್ಣಿಗೆ 60 ರೂಪಾಯಿ. ನಿಮ್ಮ ವಾಟಾಳ್ ಗೆ ಒಂದು ಮತ ಎಂದು ಹಣ್ಣುಗಳನ್ನು ಮಾರಾಟ ಮಾಡುವ ಜೊತೆ ಜೊತೆಗೆ ತನಗೊಂದು ಮತ ಕೊಡುವಂತೆ ಮನವಿ ಮಾಡಿದರು‌. ಗಲ್ಲಾದ ಮೇಲೆ ವಾಟಾಳ್ ನಾಗರಾಜ್ ಕುಳಿತಿದ್ದರಿಂದ ಜನರು ಭರ್ಜರಿಯಾಗಿಯೇ ವ್ಯಾಪಾರವನ್ನು ಮಾಡಿದರು. ಇದೇ ವೇಳೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತ ಹಾಕುವ ಭರವಸೆಯನ್ನು ಸಹ ನೀಡಿದರು. 

ಜಿಲ್ಲೆ ಮಾಡಿದ್ದು ನಾನು, ರಾಹುಲ್ ಗಾಂಧಿ ಅಲ್ಲ: 
ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಗೆ ಇಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ಕುರಿತು ವಾಟಾಳ್ ನಾಗರಾಜ್ ಮಾತನಾಡಿ, ಚಾಮರಾಜನಗರ ಜಿಲ್ಲೆ ಮಾಡಿದ್ದು ನಾನು- ರಾಹುಲ್ ಗಾಂಧಿ ಅಲ್ಲ. ರಸ್ತೆ ನಿರ್ಮಿಸಿದ್ದು ನಾನು, ಕುಡಿಯುವ ನೀರು ಕೊಟ್ಟಿದ್ದು ನಾನು, ಬಿಜೆಪಿ ಇಲ್ಲವೇ ಕಾಂಗ್ರೆಸ್ ನವರಲ್ಲ. ನೀರು ಕುಡಿಯುವ ಋಣಕ್ಕಾದರೂ ಜನರು ನನಗೊಂದು ಮತ ಕೊಡಬೇಕು,  ನನ್ನನ್ನು ಸೋಲಿಸಿದರೇ ನನ್ನ ಹಾಗೂ ಚಾಮರಾಜನಗರ ಬಾಂಧವ್ಯ ಕೊನೆಯಾಗಲಿದೆ ಎಂದು ಭಾವನಾತ್ಮಕವಾಗಿ ನುಡಿದರು. 

ಇದನ್ನೂ ಓದಿ- ಕರ್ನಾಟಕವನ್ನು ಶಕ್ತಿ ಶಾಲಿ ರಾಜ್ಯವಾಗಿಸುವ ಗುರಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮತ ಎಂಬುದು ಖರೀದಿ ಮಾಡಲು ಹಣ್ಣು, ತರಕಾರಿ ಅಲ್ಲ. ಜನರು ತಮ್ಮ ಮತವನ್ನು ಹಣಕ್ಕೆ, ಜಾತಿಗೆ ಮಾರಿಕೊಳ್ಳಬಾರದು. ಚಾಮರಾಜನಗರದಲ್ಲಿ ಬಿಜೆಪಿ, ಕಾಂಗ್ರೆಸ್ ಸೋಲಬೇಕು, ವಾಟಾಳ್ ನಾಗರಾಜ್ ಗೆಲ್ಲಬೇಕು, ಕಳೆದ 15 ವರ್ಷಗಳಿಂದ ಆಯ್ಕೆಯಾಗುತ್ತಿರುವ ಕೈ ಶಾಸಕ ಶಾಸನಸಭೆಯಲ್ಲಿ ಏನು ಮಾತನಾಡಿದ್ದಾರೆಂದು ಕಿಡಿಕಾರಿದರು.

ಇದನ್ನೂ ಓದಿ- Karnataka assembly Electionಹು-ಧಾ ಸೆಂಟ್ರಲ್ ಕ್ಷೇತ್ರದಲ್ಲಿ ನನ್ನ ವರ್ಚಸ್ಸು ಕಡಿಮೆ ಆಗಿಲ್ಲ; ಮಾಜಿ ಸಿಎಂ ಶೆಟ್ಟರ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News