ರಾಜ್ಯದ ಎಲ್ಲೆಡೆ ಮತದಾನಕ್ಕೆ ಸಕಲ ಸಿದ್ಧತೆ: ಬಿಗಿ ಬಂದೋಬಸ್ತ್ ವ್ಯವಸ್ಥೆ

Karnataka Assembly Elections: ಇನ್ನು ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕಾಗಿ ಒಟ್ಟು 58, 282 ಮತಗಟ್ಟೆಗಳ ನಿರ್ಮಾಣ ಮಾಡಲಾಗಿದ್ದು, ಇದರಲ್ಲಿ 11,617 ಸೂಕ್ಷ್ಮ ಮತಗಟ್ಟೆಗಳ ನಿರ್ಮಾಣ ಮಾಡಲಾಗಿದೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಸಿಎಪಿಎಫ್ ಹಾಗೂ ಪೊಲೀಸರಿಂದ ಭದ್ರತೆ ನಿಯೋಜನೆ ಮಾಡಲಾಗಿದೆ. 

Written by - Yashaswini V | Last Updated : May 9, 2023, 09:12 PM IST
  • ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದ ಗಡಿ ಭಾಗಗಳಲ್ಲೂ ಹದ್ದಿನ ಕಣ್ಣಿಟ್ಟಿರುವ ರಾಜ್ಯ ಪೊಲೀಸರು

    ಈಗಾಗಲೇ ನೆರೆ ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿರುವ ರಾಜ್ಯ ಪೊಲೀಸ್ ಅಧಿಕಾರಿಗಳು
  • ಗಡಿ ಮೂಲಕ ರಾಜ್ಯಕ್ಕೆ ಪ್ರವೇಶಿಸುವ ಪ್ರತಿ ವಾಹನವನ್ನೂ ತಪಾಸಣೆ ಮಾಡಿಯೇ ಒಳ ಬಿಡುವಂತೆ ಕಟ್ಟುನಿಟ್ಟಿನ ಸೂಚನೆ
ರಾಜ್ಯದ ಎಲ್ಲೆಡೆ ಮತದಾನಕ್ಕೆ ಸಕಲ ಸಿದ್ಧತೆ: ಬಿಗಿ ಬಂದೋಬಸ್ತ್ ವ್ಯವಸ್ಥೆ title=

Karnataka Assembly Elections 2023: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಇನ್ನೊಂದು ದಿನ ಮಾತ್ರ ಬಾಕಿ ಉಳಿದಿದೆ. ಈ ಹಿನ್ನಲೆಯಲ್ಲಿ ನಾಳಿನ ಮತದಾನಕ್ಕೆ ಈಗಾಗಲೇ ರಾಜ್ಯಾದ್ಯಂತ ಸಕಲ ಸಿದ್ಧತೆ ಭರದಿಂದ ಸಾಗಿದೆ. ಇನ್ನು ಮತದಾನದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು ಇದಕ್ಕಾಗಿ ಬಿಗಿ ಬಂದೋಬಸ್ತ್ ವ್ಯವಸ್ಥೆಯನ್ನೂ ಕೈಗೊಳ್ಳಲಾಗಿದೆ. 

ಬಂದೋಬಸ್ತ್ ಗಾಗಿ ಬರೋಬ್ಬರಿ 1.56 ಲಕ್ಷ ಪೊಲೀಸರ ನಿಯೋಜನೆ: 
ಲಭ್ಯವಿರುವ ಮಾಹಿತಿಗಳ ಪ್ರಕಾರ, ವಿಧಾನಸಭಾ ಚುನಾವಣಾ ಬಂದೋಬಸ್ತ್ ಗಾಗಿ ಬರೋಬ್ಬರಿ 1.56 ಲಕ್ಷ ಪೊಲೀಸರ ನಿಯೋಜನೆ ಮಾಡಲಾಗಿದೆ. ರಾಜ್ಯದ 84,119 ಸಾವಿರ ಪೊಲೀಸರು, 304 ಡಿವೈಎಸ್​​ಪಿ, 991 ಇನ್ಸ್‌ಪೆಕ್ಟರ್, 20610 ಪಿಎಸ್ಐ ಹಾಗೂ ಹೊರರಾಜ್ಯದಿಂದ 8,500 ಪೊಲೀಸರು, 650 ಸಿಎಪಿಎಫ್ ತುಕಡಿಗಳನ್ನು ಚುನಾವಣಾ ಕಾರ್ಯಕ್ಕಾಗಿ ನಿಯೋಜನೆ ಮಾಡಲಾಗಿದೆ. 

ಇದನ್ನೂ ಓದಿ- ಜಿಲ್ಲಾ ಚುನಾವಣಾಧಿಕಾರಿ, ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ- ಪರಿಶೀಲನೆ

ಒಟ್ಟು ಮತಗಟ್ಟೆಗಳು:
ಇನ್ನು ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕಾಗಿ ಒಟ್ಟು 58, 282 ಮತಗಟ್ಟೆಗಳ ನಿರ್ಮಾಣ ಮಾಡಲಾಗಿದ್ದು, ಇದರಲ್ಲಿ 11,617 ಸೂಕ್ಷ್ಮ ಮತಗಟ್ಟೆಗಳ ನಿರ್ಮಾಣ ಮಾಡಲಾಗಿದೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಸಿಎಪಿಎಫ್ ಹಾಗೂ ಪೊಲೀಸರಿಂದ ಭದ್ರತೆ ನಿಯೋಜನೆ ಮಾಡಲಾಗಿದೆ. 

2,930 ಪೊಲೀಸ್ ಮೊಬೈಲ್ ಸೆಕ್ಟರ್ ಗಳ ಕಾರ್ಯಾಚರಣೆ ಮಾಡಲಾಗಿದೆ. ಒಂದು ಮೊಬೈಲ್ ಸೆಕ್ಟರ್ 20 ಮತಗಟ್ಟೆಗಳನ್ನು ಕವರ್ ಮಾಡಬೇಕು. ಮೊಬೈಲ್ ಸೆಕ್ಟರ್ ಗಳ ಮೇಲ್ವಿಚಾರಣೆಗೆ 749 ಸೂಪರ್‌ ವೈಸರ್ ಗಳು ನಿಯೋಜನೆ ಮಾಡಲಾಗಿದೆ. 700 ಫೈಯಿಂಗ್ ಸ್ಕ್ವಾಡ್, 700 ಚೆಕ್ ಪೋಸ್ಟ್ ಗಳ ನಿರ್ಮಾಣ ಮಾಡಲಾಗಿದೆ. 

ಇದನ್ನೂ ಓದಿ- ನಿಮ್ಮ ನೆಚ್ಚಿನ ಸ್ಟಾರ್ ನಟ ನಟಿಯರು ಯಾವ ಕ್ಷೇತ್ರಗಳಲ್ಲಿ ಮತಚಲಾಯಿಸಲಿದ್ದಾರೆ ಗೊತ್ತಾ?

ಮತದಾನ ಹಿನ್ನೆಲೆ ರಾಜ್ಯದ ಗಡಿಗಳಲ್ಲಿ ವಾಹನಗಳ ತಪಾಸಣೆಯ ಸೂಚನೆ :
ಇನ್ನು ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದ ಗಡಿ ಭಾಗಗಳಲ್ಲೂ ಹದ್ದಿನ ಕಣ್ಣಿಟ್ಟಿರುವ ರಾಜ್ಯ ಪೊಲೀಸರು ಈಗಾಗಲೇ ನೆರೆ ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಗಡಿ ಮೂಲಕ ರಾಜ್ಯಕ್ಕೆ ಪ್ರವೇಶಿಸುವ ಪ್ರತಿ ವಾಹನವನ್ನೂ ತಪಾಸಣೆ ಮಾಡಿಯೇ ಒಳ ಬಿಡುವಂತೆ ಕಟ್ಟುನಿಟ್ಟಿನ ಸೂಚನೆಯನ್ನೂ ನೀಡಲಾಗಿದೆ.  ಈ ಕುರಿತಂತೆ ನೆರೆ ರಾಜ್ಯಗಳಾದ ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ, ಕೇರಳ ಅಧಿಕಾರಿಗಳ ಜೊತೆ ರಾಜ್ಯದ ಪೊಲೀಸರು ಚರ್ಚೆ ನಡೆಸಲಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News