ಸಿದ್ದರಾಮಯ್ಯ ಸರ್ಕಾರಕ್ಕೆ 100 ದಿನ: ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಿದ ಬಿಜೆಪಿ

Congress Guarantee Schemes: ಈ 3 ತಿಂಗಳಲ್ಲಿ ಸರ್ಕಾರದ ಬಗ್ಗೆ ನೂರು ರೀತಿಯ ಅಸಮಾಧಾನ ವ್ಯಕ್ತವಾಗಿದೆ. ಸರ್ಕಾರವೊಂದು ಆಡಳಿತಕ್ಕೆ ಬಂದು 3 ತಿಂಗಳೊಳಗೆ ರಾಜ್ಯಾದ್ಯಂತ ಭಾರೀ ಪ್ರಮಾಣದಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು ಎಂದು ಬಿಜೆಪಿ ಕುಟುಕಿದೆ.

Written by - Puttaraj K Alur | Last Updated : Aug 29, 2023, 03:03 PM IST
  • ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದಿಗೆ 100 ದಿನಗಳನ್ನು ಪೂರೈಸಿದೆ
  • ಈ 3 ತಿಂಗಳಲ್ಲಿ ಸರ್ಕಾರದ ಬಗ್ಗೆ ನೂರು ರೀತಿಯ ಅಸಮಾಧಾನ ವ್ಯಕ್ತವಾಗಿದೆ
  • ಸರ್ಕಾರದ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ
ಸಿದ್ದರಾಮಯ್ಯ ಸರ್ಕಾರಕ್ಕೆ 100 ದಿನ: ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಿದ ಬಿಜೆಪಿ title=
ಸಿದ್ದರಾಮಯ್ಯ ಸರ್ಕಾರಕ್ಕೆ 100 ದಿನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದಿಗೆ 100 ದಿನಗಳನ್ನು ಪೂರೈಸಿದೆ. ಈ ಹಿನ್ನೆಲೆ ಸರ್ಕಾರದ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡುವ ಮೂಲಕ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಸರ್ಕಾರದ 100 ದಿನಗಳ ರಿಪೋರ್ಟ್ ಕಾರ್ಡ್‍ನಲ್ಲಿ ಅಭಿವೃದ್ಧಿ ಬದಲು ಬರೀ ಭ್ರಷ್ಟಾಚಾರದ ವಾಸನೆಯೇ ಹೆಚ್ಚಾಗಿದೆ ಎಂದು ಕುಟುಕಿದೆ. ‘ವರ್ಗಾವಣೆ ದಂಧೆ, ಕಲುಷಿತ ನೀರು ಸೇವನೆಯಿಂದ ರಾಜ್ಯದಲ್ಲಿ ಅಪಾರ ಸಾವು-ನೋವು, ಪ್ರಧಾನಿ ಮೋದಿ ಸರ್ಕಾರ ಉಚಿತವಾಗಿ ನೀಡುತ್ತಿದ್ದ 5 ಕೆಜಿ ಅಕ್ಕಿಗೂ ಕನ್ನ, ಜನತೆಗೆ ನಂಬಿಕೆ ದ್ರೋಹ, ರಾಜ್ಯದ ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಚಾಲಕ, ನಿರ್ವಾಹಕರಿಗೆ ನಿರುದ್ಯೋಗ ಭಾಗ್ಯ’ ನೀಡಿದೆ ಎಂದು ಟೀಕಿಸಿದೆ.

ಇದನ್ನೂ ಓದಿ: ಶಕ್ತಿ ಯೋಜನೆ ಜಾರಿಯಿಂದ ಕುಟುಂಬದ ಆದಾಯಕ್ಕೆ ಕಲ್ಲು

‘ನೂರು ದಿನಗಳಲ್ಲಿ ನೂರಕ್ಕೂ ಹೆಚ್ಚು ರೈತರು ಆತ್ಮಹತ್ಯೆ, ರಾಜ್ಯದಲ್ಲಿ ಕಂಡು ಕೇಳರಿಯದಂತಹ ಭೀಕರ ಬರ, ಉಗ್ರರಿಗೆ, ಸಮಾಜಘಾತುಕ ಶಕ್ತಿಗಳಿಗೆ ರಾಜ್ಯ ಈಗ ಸುರಕ್ಷಿತ ಸ್ಥಳ, ಮರಳು ಮಾಫಿಯಾಕ್ಕೆ ಪೊಲೀಸರನ್ನು ಬಲಿಕೊಟ್ಟ ದುರ್ಬಲ ಆಡಳಿತ, ಗರ್ಭಿಣಿ, ಬಾಣಂತಿಯರಿಗೆ ಕಳಪೆ ಮೊಟ್ಟೆ ವಿತರಣೆ, ಅವೈಜ್ಞಾನಿಕವಾಗಿ ವಿದ್ಯುತ್ ದರ ಏರಿಸಿ, ರಾಜ್ಯದ ಸಣ್ಣ ಕೈಗಾರಿಕೆಗಳಿಗೆ ಹೊರ ರಾಜ್ಯಗಳಿಗೆ ಶಿಫ್ಟ್ ಆಗುವ ಭಾಗ್ಯ’ ನೀಡಿದೆ ಎಂದು ಬಿಜೆಪಿ ಕಿಡಿಕಾರಿದೆ.

‘ಶಾಸಕರ ಮನೆಗೆ ಹಾಗೂ ಪೊಲೀಸ್ ಸ್ಟೇಶನ್‌ಗೆ ಬೆಂಕಿಯಿಟ್ಟ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಬ್ರದರ್ಸ್‌ಗೆ ಬಿಡುಗಡೆಯ ಭಾಗ್ಯ, ಸರ್ಕಾರಿ ಅಧಿಕಾರಿಗಳಿಗೆ ಹಣ ನೀಡುವಂತೆ ಕಿರುಕುಳ/ ಆತ್ಮಹತ್ಯೆ ಭಾಗ್ಯ, ಸಚಿವರ ಲಂಚಗುಳಿತನ ವಿರೋಧಿಸಿ, ಕಾಂಗ್ರೆಸ್ ಶಾಸಕರಿಂದಲೇ ದೂರು-ದುಮ್ಮಾನ, ಕರ್ನಾಟಕದ ಜನತೆಯ ಕಿವಿ ಮೇಲೆ ಹೂವು’ ಇವೇ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಎಂದು ಬಿಜೆಪಿ ಟೀಕಿಸಿದೆ.

ಇದನ್ನೂ ಓದಿ: ಶಕ್ತಿ ಯೋಜನೆ ಎಫೆಕ್ಟ್‌-ವಿದ್ಯಾರ್ಥಿಗಳಿಗೆ ತೀವ್ರ ಸಂಕಷ್ಟ

‘ಈ 3 ತಿಂಗಳಲ್ಲಿ ಸರ್ಕಾರದ ಬಗ್ಗೆ ನೂರು ರೀತಿಯ ಅಸಮಾಧಾನ ವ್ಯಕ್ತವಾಗಿದೆ. ಸರ್ಕಾರವೊಂದು ಆಡಳಿತಕ್ಕೆ ಬಂದು 3 ತಿಂಗಳೊಳಗೆ ರಾಜ್ಯಾದ್ಯಂತ ಭಾರೀ ಪ್ರಮಾಣದಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು’ ಎಂದು ಬಿಜೆಪಿ ಕುಟುಕಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News