ಪತ್ರಕರ್ತ ರವಿ ಬೆಳಗೆರೆಗೆ 14 ದಿನಗಳ ನ್ಯಾಯಾಂಗ ಬಂಧನ

ಈ ಹಿಂದೆ ರವಿ ಬೆಳಗೆರೆ ಅವರ ಪೋಲೀಸ್ ಕಸ್ಟಡಿ ಇಂದಿಗೆ ಮುಕ್ತಾಯವಾಗಿತ್ತು.

Last Updated : Dec 11, 2017, 03:13 PM IST
  • 'ಹಾಯ್ ಬೆಂಗಳೂರು' ಸಂಸ್ಥಾಪಕ ಹಾಗೂ ಪತ್ರಕರ್ತ ರವಿ ಬೆಳಗೆರೆ ಡಿ.23 ರವರೆಗೆ ನ್ಯಾಯಾಂಗ ಬಂಧನಕ್ಕೆ.
  • ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ರವಿ ಬೆಳಗೆರೆ ಬಂಧನ.
ಪತ್ರಕರ್ತ ರವಿ ಬೆಳಗೆರೆಗೆ 14 ದಿನಗಳ ನ್ಯಾಯಾಂಗ ಬಂಧನ title=
Pic: Youtube

ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ರವಿ ಬೆಳಗೆರೆಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಸೋಮವಾರ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. 

ಶುಕ್ರವಾರ ಬಂಧಿನಕ್ಕೆ ಒಳಗಾಗಿದ್ದ 'ಹಾಯ್ ಬೆಂಗಳೂರು' ಸಂಸ್ಥಾಪಕ ಹಾಗೂ ಪತ್ರಕರ್ತ ರವಿ ಬೆಳಗೆರೆ ಅವರ ಪೋಲೀಸ್ ಕಸ್ಟಡಿ ಇಂದಿಗೆ ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ರವಿ ಬೆಳಗೆರೆ ಅವರನ್ನು ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ರವಿ ಬೆಳಗೆರೆ ಅವರನ್ನು ಡಿ.23 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ಹೊರಡಿಸಿದ್ದಾರೆ. 

Trending News