Rape Case: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ

 Imprisonment for Crime in Karnataka: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ತಲ್ಲೂರು ತಾಂಡಾದ ವಿಜಯಕುಮಾರ ಪೂಜಾರ ಎಂಬ ವ್ಯಕ್ತಿಯ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೋ) ನ್ಯಾಯಾಧೀಶರಾದ ಕುಮಾರ ಡಿ.ಕೆ ಅವರು ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 25,000 ಗಳ ದಂಡವನ್ನು ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

Written by - Manjunath N | Last Updated : Feb 22, 2024, 04:24 PM IST
  • ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 25,000 ಗಳ ದಂಡವನ್ನು ವಿಧಿಸಿ ತೀರ್ಪು ನೀಡಿದೆ.
  • ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ(ಪೋಕ್ಸೋ) ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು
 Rape Case: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ title=
file photo

ಕೊಪ್ಪಳ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ತಲ್ಲೂರು ತಾಂಡಾದ ವಿಜಯಕುಮಾರ ಪೂಜಾರ ಎಂಬ ವ್ಯಕ್ತಿಯ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೋ) ನ್ಯಾಯಾಧೀಶರಾದ ಕುಮಾರ ಡಿ.ಕೆ ಅವರು ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 25,000 ಗಳ ದಂಡವನ್ನು ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಇದನ್ನೂ ಓದಿ- ಬಿಜೆಪಿ ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು: ಸಿಎಂ ಸಿದ್ದರಾಮಯ್ಯ

ಕೊಪ್ಪಳ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ ತಲ್ಲೂರು ತಾಂಡಾದ ನಿವಾಸಿ ವಿಜಯಕುಮಾರ ಪೂಜಾರ ಇತನು ಅಪ್ರಾಪ್ತ ಬಾಲಕಿಯನ್ನು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ಪುಸಲಾಯಿಸಿ ದಿ. 12-04-2021 ರಂದು ಇರಕಲಗಡದಿಂದ ಉಡುಪಿ ತಾಲ್ಲೂಕಿನ ಕುಕ್ಕೆಹಳ್ಳಿ ಗ್ರಾಮದ ಒಂದು ತೋಟದ ಮನೆಯಲ್ಲಿ ಬಾಲಕಿಗೆ ಅಕ್ರಮ ಬಂಧನದಲ್ಲಿಟ್ಟು ಬಲವಂತವಾಗಿ ಅತ್ಯಾಚಾರ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದೂರು ಸ್ವೀಕರಿದ್ದು, ಪಿ.ಎಸ್.ಐ ಯಲ್ಲಪ್ಪ ಹಾಗೂ ಪಿ.ಐ ಮೌನೇಶ್ವರ ಮಾಲಿಪಾಟೀಲ್ ಅವರು ಈ ಪ್ರಕರಣದ ತನಿಖೆಯನ್ನು ನಡೆಸಿ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಇದನ್ನೂ ಓದಿ- SSLC PUC Exam 2024: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ

ಈ ಪ್ರಕರಣವು ಸ್ಪೇ.ಎಸ್.ಸಿ (ಪೋಕ್ಸೋ) ಸಂ: 12/2021 ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಆರೋಪಿ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 25,000 ಗಳ ದಂಡವನ್ನು ವಿಧಿಸಿ ತೀರ್ಪು ನೀಡಿದೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ(ಪೋಕ್ಸೋ) ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು ಎಂದು ನ್ಯಾಯಾಲಯದ ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News