ಗಂಡು ಹಾವನ್ನು ಕೊಂದಿದ್ದಕ್ಕೆ ಹೆಣ್ಣು ಹಾವಿನ ಸೇಡು! 24 ಗಂಟೆಗಳಲ್ಲಿಯೇ ನಡೆಯಿತು ಯಾರೂ ಊಹಿಸಿರದ ಘಟನೆ! ದೃಶ್ಯ ನೋಡಿ

Snake Temple in Dharwad: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗಳಗಿ ಹುಲಕೊಪ್ಪ ಗ್ರಾಮದ ಹನುಮಂತ ಜಾಧವ ಎಂಬುವವರ ಹಿತ್ತಲಿನಲ್ಲಿ ಒಂದೇ ರಾತ್ರಿಯಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ನಾಗರ ಪಂಚಮಿಯ ಮುನ್ನಾದಿನ ಇವರ ಹಿತ್ತಲಿನ ಇದೇ ಸ್ಥಳದಲ್ಲಿ ದೊಡ್ಡ ನಾಗರಹಾವೊಂದು ಕಂಡಿತ್ತು.

Written by - Bhavishya Shetty | Last Updated : Oct 16, 2024, 08:57 PM IST
    • ಹಾವು ಕಾಣಿಸಿಕೊಂಡಿದೆ ಎಂದು ಆ ಮನೆ ಜನರು ಅದನ್ನು ಹೊಡೆದು ಸಾಯಿಸಿದ್ದರು
    • ಒಂದೇ ರಾತ್ರಿಯಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗಿದೆ.
    • ಬಳಿಕ ಈ ಹಾವು ಹಿಂದೆ ಕೊಂದಿರೋ ನಾಗರ ಹಾವಿನ ಸಂಗಾತಿ
ಗಂಡು ಹಾವನ್ನು ಕೊಂದಿದ್ದಕ್ಕೆ ಹೆಣ್ಣು ಹಾವಿನ ಸೇಡು! 24 ಗಂಟೆಗಳಲ್ಲಿಯೇ ನಡೆಯಿತು ಯಾರೂ ಊಹಿಸಿರದ ಘಟನೆ! ದೃಶ್ಯ ನೋಡಿ title=
File Photo

ಮನೆಯ ಹಿತ್ತಲಿನಲ್ಲಿ ಹಾವು ಕಾಣಿಸಿಕೊಂಡಿದೆ ಎಂದು ಆ ಮನೆ ಜನರು ಅದನ್ನು ಹೊಡೆದು ಸಾಯಿಸಿದ್ದರು. ಈ ಘಟನೆ ಬೆನ್ನಲ್ಲೇ ಮತ್ತೊಂದು ಹಾವು ಕಾಣಿಸಿಕೊಂಡಿದ್ದು, ಅದೇ ಮನೆಯ ಮಕ್ಕಳಿಗೆ ಸೇರಿದಂತೆ ಇತರರಿಗೆ ಕಾಣಿಸಿಕೊಂಡಿದೆ. ಇದರಿಂದ ಊರ ಜನ ಭಯಬಿದ್ದು, ಗಂಡು ಹಾವನ್ನು ಸಾಯಿಸಿದಕ್ಕೆ ಹೆಣ್ಣು ಹಾವು ಈ ರೀತಿ ಕಾಟ ಕೊಡುತ್ತಿದೆ ಎಂದು ಹೇಳಿ, 24 ಗಂಟೆ ಒಳಗಾಗಿ ದೇವಸ್ಥಾನವನ್ನೇ ಕಟ್ಟಿದ್ದಾರೆ.

ಇದನ್ನೂ ಓದಿ: ಗೂಗಲ್‌ನಲ್ಲಿ ಯಾವ ಕಾರಣಕ್ಕೂ ಈ 4 ವಿಷಯಗಳನ್ನು ಸರ್ಚ್ ಮಾಡಲೇಬಾರದು: ಅಪ್ಪಿತಪ್ಪಿ ಮಾಡಿದರಂತೂ ಜೈಲೇ ಗತಿ

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗಳಗಿ ಹುಲಕೊಪ್ಪ ಗ್ರಾಮದ ಹನುಮಂತ ಜಾಧವ ಎಂಬುವವರ ಹಿತ್ತಲಿನಲ್ಲಿ ಒಂದೇ ರಾತ್ರಿಯಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ನಾಗರ ಪಂಚಮಿಯ ಮುನ್ನಾದಿನ ಇವರ ಹಿತ್ತಲಿನ ಇದೇ ಸ್ಥಳದಲ್ಲಿ ದೊಡ್ಡ ನಾಗರಹಾವೊಂದು ಕಂಡಿತ್ತು. ತುಂಬಾ ದಿನಗಳಿಂದ ಓಡಾಡಿಕೊಂಡಿದ್ದ ಈ ಹಾವು ಕಂಡ ತಕ್ಷಣವೇ ಅದನ್ನು ಹೊಡೆದು ಕೊಂದಿದ್ದರು. ಅದಾದ ಒಂದು ವಾರದಲ್ಲಿ ಈ ಮನೆಯ 11 ವರ್ಷದ ಬಾಲಕಿಗೆ ಇದೇ ಹಿತ್ತಲಿನಲ್ಲಿ ಮತ್ತೊಂದು ನಾಗರ ಹಾವು ಕಾಣಿಸಿಕೊಂಡಿದೆ. ಆಕೆಗೆ ಮಾತ್ರವಲ್ಲ, ಅಕ್ಕಪಕ್ಕದ ಮನೆಗಳ ಮಕ್ಕಳಿಗೆ ಕೂಡ ಆ ಹಾವು ಕಂಡಿತ್ತು.

ಬಳಿಕ ಈ ಹಾವು ಹಿಂದೆ ಕೊಂದಿರೋ ನಾಗರ ಹಾವಿನ ಸಂಗಾತಿ... ಗಂಡು ಹಾವನ್ನು ಕೊಂದಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಬಂದಿದೆ. ನೀವು ದೇವಸ್ಥಾನ ಕಟ್ಟಿ ಎಂದು ಜನ ಹೇಳೋಕೆ ಶುರು ಮಾಡಿದ್ದರು. ಮಕ್ಕಳು ಕೂಡ ಇದನ್ನೇ ಹೇಳುತ್ತಿದ್ದರಂತೆ. ಹೀಗಾಗಿ ಮಕ್ಕಳ ಮೂಲಕವೇ ನಾಗದೇವತೆ ಈ ಮಾತನ್ನು ಹೇಳಿಸಿದ್ದಾಳೆಂದು ಒಂದೇ ರಾತ್ರಿಯಲ್ಲಿ ದೇವಸ್ಥಾನ ಕಟ್ಟಲಾಗಿದೆ.

ಸುಟ್ಟರೂ ಸುಡದ ಹಾವು...
ಇನ್ನು ಇಲ್ಲಿ ಅಚ್ಚರಿ ಎಂದರೆ ಸತ್ತ ಹಾವನ್ನು ದಹನ ಮಾಡಿದರೆ ಅದು ಸುಡಲೇ ಇಲ್ಲವಂತೆ. ಆಗಲೇ ಜನರಿಗೆ ಆತಂಕ ಶುರುವಾಗಿತ್ತು. ಅಲ್ಲದೇ ಮಕ್ಕಳಿಗೆ ಕಂಡ ಹಾವು ನಾಗದೇವತೆ ಅಂತಾನೇ ಇಲ್ಲಿನ ಜನ ನಂಬಿದ್ದಾರೆ. ಅಷ್ಟೇ ಅಲ್ಲ, ಹಾವು ನೋಡಿದ ಮಕ್ಕಳೊಂದಿಗೆ ಎಲ್ಲರೂ ಕುಕ್ಕೆ ಸುಬ್ರಹ್ಮಣ್ಯಕ್ಕೂ ಹೋಗಿ ಬಂದಿದ್ದಾರೆ. ಅಲ್ಲಿಯೂ ದೋಷ ಪರಿಹಾರಕ್ಕೆ ದೇವಸ್ಥಾನ ನಿರ್ಮಾಣದ ಸೂತ್ರವನ್ನೇ ಅರ್ಚಕರು ಹೇಳಿದ್ದಾರೆ. ಅಲ್ಲಿಂದ ಬಂದ ದಿನ ರಾತ್ರಿಯೇ ಗ್ರಾಮಸ್ಥರೆಲ್ಲ ಸೇರಿ, ದೇವಸ್ಥಾನ ಕಟ್ಟಿ, ಜೋಡಿ ನಾಗರ ಕಲ್ಲಿನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಇದು ದೇವರ ಸ್ವರೂಪ ಅಂತಾ ಹೇಳುತ್ತಿದ್ದು, ಸದ್ಯ ಜನ ತಂಡೋಪತಂಡವಾಗಿ ನೋಡೋಕೆ ಬರುತ್ತಿದ್ದಾರೆ.

ಇದನ್ನೂ ಓದಿ: ಆಯುಷ್ಮಾನ್ ವಿಮಾ ಯೋಜನೆಯಡಿ ಹೆಚ್ಚಿನ ಫಲಾನುಭವಿಗಳಿಗೆ ಅನುದಾನ ಒದಗಿಸಿ : ಸಚಿವ ದಿನೇಶ್‌ ಗುಂಡೂರಾವ್

ಇನ್ನು ಮಕ್ಕಳಿಗೆ ಕಂಡ ಹಾವು ಇದುವರೆಗೂ ದೊಡ್ಡವರಿಗೆ ಮಾತ್ರ ಕಂಡಿಲ್ಲ. ಹೀಗಾಗಿ ಇದು ದೇವರ ಪವಾಡ ಅಂತಾ ನಂಬಿರುವ ಸ್ಥಳೀಯರು ಈಗ ನಿರ್ಮಾಣವಾಗಿರೋ ದೇವಸ್ಥಾನಕ್ಕೆ ಕಳಸ ಸಹಿತ ಇನ್ನಿತರ ಅಭಿವೃದ್ಧಿ ಮಾಡೋಕೆ ಮುಂದಾಗಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News