ಮಂಗಳೂರಿನಲ್ಲಿ ಶಾಲಾ ಬಸ್ ಮೇಲೆ ಬಿದ್ದ ಮರ, ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು

ನಗರದ ನಂತೂರು ವೃತ್ತದ ಬಳಿ 17 ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಶಾಲಾ ವಾಹನದ ಮೇಲೆ ಮಳೆಯಿಂದಾಗಿ ಮರ ಬಿದ್ದಿರುವ ಘಟನೆ ನಡೆದಿದೆ.

Last Updated : Aug 14, 2019, 01:09 PM IST
ಮಂಗಳೂರಿನಲ್ಲಿ ಶಾಲಾ ಬಸ್ ಮೇಲೆ ಬಿದ್ದ ಮರ, ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು    title=
Photo:Twitter

ಮಂಗಳೂರು: ನಗರದ ನಂತೂರು ವೃತ್ತದ ಬಳಿ 17 ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಶಾಲಾ ವಾಹನದ ಮೇಲೆ ಮಳೆಯಿಂದಾಗಿ ಮರ ಬಿದ್ದಿರುವ ಘಟನೆ ನಡೆದಿದೆ.

ಆದರೆ ಅದೃಷ್ಟವಶಾತ್ ವಾಹನದಲ್ಲಿ ಇದ್ದಂತಹ ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಯಾರಿಗೂ ಸಹ ಗಂಭೀರ ಗಾಯಗಳಾಗಿಲ್ಲ ಎನ್ನಲಾಗಿದೆ. 

ಮಂಗಳೂರು ನಗರದ ಪೋಲಿಸ್ ವರಿಷ್ಠಾಧಿಕಾರಿ ಹರ್ಷ್ ಟ್ವೀಟ್ ಮಾಡಿ ' ಸಂಬಂಧಪಟ್ಟ ಪ್ರಿನ್ಸಿಪಾಲರೊಂದಿಗೆ ಈಗ ಮಾತನಾಡಿದ್ದು ಎಲ್ಲ 17 ಮಕ್ಕಳು ಸುರಕ್ಷಿತರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ ಎನ್ನಲಾಗಿದೆ.
 

Trending News