ಜ್ಯೋತಿಷಿ ಮಾತು ನಂಬಿ ನಿಧಿ ಆಸೆಗೆ ಮನೆಯಲ್ಲೇ 20 ಅಡಿ ಗುಂಡಿ ತೆಗೆದ ಮಹಿಳೆ!!

ವಿ.ಎಸ್ ದೊಡ್ಡಿ ಗ್ರಾಮದ ಭಾಗ್ಯ ಎಂಬುವರು ಕಳೆದ ನಾಲ್ಕೈದು ವರ್ಷದ ಹಿಂದೆ ವಾಸ್ತು ಸರಿಯಿಲ್ಲ ಎಂದು ತಿಳಿದು ಮನೆಯನ್ನು ತೊರೆದು  ಬೆಂಗಳೂರಿನಲ್ಲಿ ತಳ್ಳುವ ಗಾಡಿಯಲ್ಲಿ ಮಜ್ಜಿಗೆ, ಜ್ಯೂಸ್ ವ್ಯಾಪಾರ ಮಾಡಿಕೊಂಡಿದ್ದರು. 

Written by - Yashaswini V | Last Updated : Aug 22, 2023, 03:55 PM IST
  • ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
  • ವಾಸ್ತು ಸಮಸ್ಯೆಗೆ ಪರಿಹಾರ ಐಶ್ವರ್ಯದ ಆಸೆ ತೋರಿಸಿದ ಜ್ಯೋತಿಷಿ
  • ಮನೆಯೊಳಗೆ 20 ಅಡಿ ಗುಂಡಿ ತೋಡಿದ ಮಹಿಳೆ!
ಜ್ಯೋತಿಷಿ ಮಾತು ನಂಬಿ ನಿಧಿ ಆಸೆಗೆ ಮನೆಯಲ್ಲೇ 20 ಅಡಿ ಗುಂಡಿ ತೆಗೆದ ಮಹಿಳೆ!!  title=

ಚಾಮರಾಜನಗರ:  ಜ್ಯೋತಿಷಿ ತೋರಿದ್ದ ನಿಧಿಯಾಸೆಗೆ ಮಹಿಳೆಯೊಬ್ಬಳು ಕುಟುಂಬದೊಟ್ಟಿಗೆ ಸೇರಿ ಮನೆಯಲ್ಲಿ 20 ಅಡಿ ಗುಂಡಿ ತೆಗೆದ ಘಟನೆ ಹನೂರು ತಾಲೂಕಿನ ವಿ.ಎಸ್. ದೊಡ್ಡಿ ಗ್ರಾಮದಲ್ಲಿ ನಡೆದಿದೆ.

ವಿ.ಎಸ್.ದೊಡ್ಡಿ ಗ್ರಾಮದ ಭಾಗ್ಯ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದ್ದು ನಿಧಿ ಆಸೆಗೆ ಗುಂಡಿ ತೋಡಿದ ಮಾಹಿತಿ ಬೇರೆಯವರಿಗೆ ತಿಳಿಯುತ್ತಿದ್ದಂತೆ ಮನೆಮಂದಿ ನಾಪತ್ತೆಯಾಗಿದ್ದಾರೆ.

ವಿ.ಎಸ್ ದೊಡ್ಡಿ ಗ್ರಾಮದ ಭಾಗ್ಯ ಎಂಬುವರು ಕಳೆದ ನಾಲ್ಕೈದು ವರ್ಷದ ಹಿಂದೆ ವಾಸ್ತು ಸರಿಯಿಲ್ಲ ಎಂದು ತಿಳಿದು ಮನೆಯನ್ನು ತೊರೆದು  ಬೆಂಗಳೂರಿನಲ್ಲಿ ತಳ್ಳುವ ಗಾಡಿಯಲ್ಲಿ ಮಜ್ಜಿಗೆ, ಜ್ಯೂಸ್ ವ್ಯಾಪಾರ ಮಾಡಿಕೊಂಡಿದ್ದರು. 

ಇದನ್ನೂ ಓದಿ- ಬೀದರ್ ಬೆಂಗಳೂರು ನಡುವೆ ಸಂಚರಿಸುವ 'ಸ್ಟಾರ್ ಏರ್', ಈಗ ತಿರುಪತಿ ತಿಮ್ಮಪ್ಪನ ದರ್ಶನಕ್ಕೂ ಲಭ್ಯ!

ಈ ವೇಳೆ ಸಹೋದರಿಯ ಸಂಬಂಧಿಕ ಪರಶಿವ ಎಂಬುವರು ಭಾಗ್ಯಳಿಗೆ ಸ್ಥಳೀಯ ಜೋತಿಷ್ಯರೊಬ್ಬರ ಬಳಿ ಕರೆದುಕೊಂಡು ಹೋಗಿ ಮನೆಯ ಬಗ್ಗೆ ಶಾಸ್ತ್ರ ಕೇಳಿಸಿದ್ದರಂತೆ. 

ಮನೆಯಲ್ಲಿ ನಿಧಿ ಇರುವುದಾಗಿ ಜೋತಿಷಿ ತಿಳಿಸಿದಾಗ ನಿಧಿ ಶೋಧನೆಗಾಗಿ ಭಾಗ್ಯ ಅನುಮತಿ ನೀಡಿದ್ದರು ಎನ್ನಲಾಗಿದೆ. 

ಇದನ್ನೂ ಓದಿ- Video: ಚಿತ್ರದುರ್ಗದಲ್ಲಿ ಪ್ರಯೋಗದ ವೇಳೆ ಡಿಆರ್‌ಡಿಒ ಡ್ರೋನ್ ಪತನ

ಈ ಹಿನ್ನಲೆ ಜೋತಿಷಿ ತನ್ನ ಜತೆಗಾರನೊಂದಿಗೆ ಕಳೆದ ವಾರದ ಹಿಂದೆ ವಿ.ಎಸ್ ದೊಡ್ಡಿಗೆ ಆಗಮಿಸಿ ಭಾಗ್ಯ ಅವರ ಸಮ್ಮುಖದಲ್ಲೇ ರಾತ್ರಿ ವೇಳೆ ಮನೆಯಲ್ಲಿ ಕಳಸವಿಟ್ಟು ವಿಶೇಷ ಪೂಜೆಯನ್ನು ನೆರವೇರಿಸಿ ಯಾರಿಗೂ ತಿಳಿಯದಂತೆ ನಿಧಿಗಾಗಿ ಗುಂಡಿ ತೆಗೆಯುವ ಕಾರ್ಯವನ್ನು ಆರಂಭಿಸಿದ್ದರು. 3 ಅಡಿ ಅಗಲ ಹಾಗೂ 20 ಅಡಿ ಆಳವನ್ನು ತೆಗೆದಿದ್ದು, ಶೋಧ ಕಾರ್ಯ ಮುಂದುವರಿದಿತ್ತು. ಈ ಬಗ್ಗೆ ಸ್ಥಳೀಯರಿಗೆ ವಿಷಯ ಗೊತ್ತಾಗಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಪೊಲೀಸರಿಗೆ ಮಾಹಿತಿ ತಿಳಿದಿರುವುದು ಗೊತ್ತಾಗುತ್ತಿದ್ದಂತೆ ಭಾಗ್ಯ ಸೇರಿದಂತೆ ಜ್ಯೋತಿಷಿ ಹಾಗೂ ಇನ್ನಿತರರು ಕಣ್ಮರೆಯಾಗಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News