Karnataka Cabinet Expansion: ನಾಳೆಯೇ 20 ಕ್ಕೂ ಹೆಚ್ಚು ಸಚಿವರ ಪ್ರಮಾಣ ವಚನ ಸ್ವೀಕಾರ!?

Karnataka Cabinet Expansion: ನಾಳೆಯೇ ಸುಮಾರು 20 ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಶುಕ್ರವಾರ ಕಾಂಗ್ರೆಸ್ ವರಿಷ್ಠರು ಅನುಮೋದನೆ ನೀಡುವ ಸಾಧ್ಯತೆಯಿದೆ.  

Written by - Chetana Devarmani | Last Updated : May 26, 2023, 12:22 PM IST
  • ರಾಜ್ಯ ಸಚಿವ ಸಂಪುಟ ವಿಸ್ತರಣೆ
  • ನಾಳೆಯೇ 20 ಕ್ಕೂ ಹೆಚ್ಚು ಸಚಿವರ ಪ್ರಮಾಣ ವಚನ!?
  • ಶುಕ್ರವಾರ ಕಾಂಗ್ರೆಸ್ ವರಿಷ್ಠರು ಅನುಮೋದನೆ ನೀಡುವ ಸಾಧ್ಯತೆ
Karnataka Cabinet Expansion: ನಾಳೆಯೇ 20 ಕ್ಕೂ ಹೆಚ್ಚು ಸಚಿವರ ಪ್ರಮಾಣ ವಚನ ಸ್ವೀಕಾರ!?  title=

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಗುರುವಾರ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರೊಂದಿಗೆ ಚರ್ಚಿಸಿದ ನಂತರ ಕಾಂಗ್ರೆಸ್ ವರಿಷ್ಠರು ಶುಕ್ರವಾರ ಸುಮಾರು 20 ಸಚಿವರ ಪ್ರಮಾಣ ವಚನವನ್ನು ಅನುಮೋದಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿದ ಸಚಿವರಿಗೆ ಖಾತೆ ಹಂಚಿಕೆ ವಿಳಂಬವಾಗುತ್ತಿರುವ ಮಧ್ಯೆ, ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರ್ನಾಟಕದ ಉಸ್ತುವಾರಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಪ್ರತ್ಯೇಕವಾಗಿ ಭೇಟಿ ಮಾಡಿದರು. 

ಇದನ್ನೂ ಓದಿ: ಎರಡು ದಿನ ಪವರ್ ಕಟ್ ! ಬೆಂಗಳೂರಿನ ಈ ಏರಿಯಾಗಳಲ್ಲಿ ಇರುವುದಿಲ್ಲ ವಿದ್ಯುತ್ ಸರಬರಾಜು

ಗುರುವಾರ ಕೊನೆಯ ಸಭೆಯು ಪಕ್ಷದ ಗುರುದ್ವಾರ ರಾಕಬ್‌ಗಂಜ್ ರಸ್ತೆಯ ಹಳೆಯ ಕಚೇರಿಯಲ್ಲಿ ನಡೆಯಿತು. ಅಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರು ಸುರ್ಜೇವಾಲಾ ಸಚಿವ ಸಂಪುಟದಲ್ಲಿ ಸೇರಿಸಬಹುದಾದ ಹೆಸರುಗಳ ಬಗ್ಗೆ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ. ಕರ್ನಾಟಕ ಸಚಿವ ಸಂಪುಟಕ್ಕೆ ಇನ್ನೂ 20 ಮಂದಿ ಸಚಿವರು ಸೇರ್ಪಡೆಯಾಗುವ ಸಾಧ್ಯತೆ ಇದೆ. ರಾಜ್ಯ ಸಚಿವ ಸಂಪುಟ ಅಂತಿಮಗೊಳ್ಳುವ ಮುನ್ನ ಶುಕ್ರವಾರ ಮತ್ತೊಂದು ಸುತ್ತಿನ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಡಿ.ಕೆ.ಶಿವಕುಮಾರ್ ಬುಧವಾರ ಸಂಜೆಯಿಂದ ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದು, ರಾತ್ರಿ ಸಿದ್ದರಾಮಯ್ಯ ಆಗಮಿಸಿದ್ದರು. ಸಭೆಗಳಲ್ಲಿ, ಅವರು ಎಲ್ಲಾ ವಿಭಾಗಗಳು, ಗುಂಪುಗಳು, ಸಮುದಾಯಗಳು ಮತ್ತು ಪ್ರದೇಶಗಳ ನಡುವೆ ಸಮತೋಲನವನ್ನು ತರುವ ಬಗ್ಗೆ ಚರ್ಚೆ ಮಾಡಿದರು. ಮೇ 20 ರಂದು ಎಂಟು ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಕ್ರಮವಾಗಿ ಕರ್ನಾಟಕದ ಸಿಎಂ ಮತ್ತು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಂದಿನಿಂದ ಸಚಿವ ಸಂಪುಟ ವಿಸ್ತರಣೆಯ ಮಾತುಕತೆಗಳು ಗರಿಗೆದರಿವೆ. 

ಇದನ್ನೂ ಓದಿ: ಟ್ರ್ಯಾಕ್ಟರ್ ಟಿಲ್ಲರ್ ಸಮೇತ ಪಲ್ಟಿ! ಮೂವರು ಪ್ರಾಣಾಯದಿಂದ ಪಾರು

ಸಚಿವರಿಗೆ ಇನ್ನೂ ಖಾತೆ ಹಂಚಿಕೆಯಾಗದಿದ್ದರೂ, ಪ್ರಮುಖ ಸಚಿವ ಸ್ಥಾನಗಳಿಗೆ ವರಿಷ್ಠರು ಪೈಪೋಟಿ ನಡೆಸುತ್ತಿರುವುದರಿಂದ ಖಾತೆಗಾಗಿ ಲಾಬಿ ಕೂಡ ಜೋರಾಗಿದೆ. ಕರ್ನಾಟಕದಲ್ಲಿ ಗರಿಷ್ಠ 34 ಮಂದಿ ಸಚಿವರಾಗಬಹುದಾಗಿದ್ದು, ಎಲ್ಲ ಆಕಾಂಕ್ಷಿಗಳಿಗೆ ಅವಕಾಶ ಕಲ್ಪಿಸುವುದು ಕಾಂಗ್ರೆಸ್ ಗೆ ಕಷ್ಟವಾಗಲಿದೆ.

ಎಲ್ಲ ವಿಭಾಗಗಳನ್ನು ಪ್ರತಿನಿಧಿಸುವ ಮತ್ತು ಹಿರಿಯರಾಗಿರುವ ಶಾಸಕರ ಹೆಸರನ್ನು ಮಾತ್ರ ತೆರವುಗೊಳಿಸಲಾಗಿದೆ ಮತ್ತು ಆಯ್ಕೆಯ ಬಗ್ಗೆ ಯಾವುದೇ ಕಡೆಯಿಂದ ಯಾವುದೇ ಆಕ್ಷೇಪಣೆಗಳಿಲ್ಲ ಎಂದು ಮೂಲಗಳು ತಿಳಿಸಿವೆ. ಸಂಭಾವ್ಯ ಸಚಿವರ ಹೆಸರುಗಳ ಬಗ್ಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯಗಳು ಹೊರಹೊಮ್ಮುತ್ತಿದೆ ಎಂದು ಸಹ ಹೇಳಲಾಗ್ತಿದೆ.

ಇದನ್ನೂ ಓದಿ : Karnataka cabinet expansion: ಶನಿವಾರದಂದು 24 ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News