ವಿದ್ವತ್ ಆರೋಗ್ಯ ವಿಚಾರಿಸಿದ ನಟ ಪುನೀತ್ ರಾಜಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್'ಕುಮಾರ್ ಇಂದು ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ ವಿದ್ವತ್ ಆರೋಗ್ಯ ವಿಚಾರಿಸಿದರು.

Last Updated : Feb 20, 2018, 05:19 PM IST
ವಿದ್ವತ್ ಆರೋಗ್ಯ ವಿಚಾರಿಸಿದ ನಟ ಪುನೀತ್ ರಾಜಕುಮಾರ್ title=

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್'ಕುಮಾರ್ ಇಂದು ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಹ್ಯಾರಿಸ್ ನಿಂದ ಹಲ್ಲೆಗೊಳಗಾಗಿದ್ದ ಉದ್ಯಮಿ ಪುತ್ರ ವಿದ್ವತ್ ಆರೋಗ್ಯ ವಿಚಾರನೇ ನಡೆಸಿದರು. 

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದ್ವತ್ ತಮ್ಮ ಕುಟುಂಬದ ಸ್ನೇಹಿತ. ನಾವು ಅವನನ್ನು ಚಿಕ್ಕಂದಿನಿಂದಲೂ ನೋಡಿದ್ದೇವೆ. ಈಗ ಆತನ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಲಿದೆ ಎಂದು ಪುನೀತ್ ಹೇಳಿದ್ದಾರೆ.

ಇದನ್ನೂ ಓದಿ : ಹಲ್ಲೆ ಪ್ರಕರಣ; ಹ್ಯಾರಿಸ್ ಪುತ್ರ ಸೇರಿ 7 ಆರೋಪಿಗಳು ಸಿಸಿಬಿ ವಶಕ್ಕೆ

ಯುಬಿ ಸಿಟಿಯಲ್ಲಿರುವ ಫೆಗ್ರಿ ಕಫೆ ರೆಸ್ಟೋರೆಂಟ್ ನಲ್ಲಿ ಫೆ.17 ರಂದು ರಾತ್ರಿ ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ವಿದ್ವತ್ ಎಂಬ ಯುವಕನಿಗೆ ಮನಬಂದಂತೆ ಥಳಿಸಿದ್ದರು. ಈ ಸಂಬಂಧ ನಲಪಾಡ್ ಸೇರಿದಂತೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತನಿಖೆ ಆರಂಭಿಸಿದ್ದಾರೆ. 

Trending News