ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಅದನ್ನು ಯಾರು ಸೃಷ್ಟಿಸಿದವರು..? : ಗೃಹ ಸಚಿವರ ಪ್ರಶ್ನೆ

ತಮಿಳುನಾಡು ಸಚಿವ, ನಟ ಉದಯನಿಧಿ ಸ್ಟಾಲಿನ್ ಹೇಳಿಕೆ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಕುರಿತು ಇದೀಗ ಗೃಹ ಸಚಿವೆ ಜಿ. ಪರಮೇಶ್ವರ ಅವರು, ಹಿಂದೂ ಧರ್ಮದ ಮೂಲವನ್ನು ಪ್ರಶ್ನಿಸಿದ್ದಾರೆ.

Written by - Krishna N K | Last Updated : Sep 6, 2023, 01:08 PM IST
  • ‘ಸನಾತನ ಧರ್ಮ’ ಕುರಿತು ಉದಯನಿಧಿ ಹೇಳಿಕೆಗೆ ವಿರೋಧ.
  • "ಹಿಂದೂ ಧರ್ಮ ಯಾವಾಗ ಹುಟ್ಟಿತು, ಅದನ್ನು ಸೃಷ್ಟಿಸಿದವರು ಯಾರು?..
  • ಹಿಂದೂ ಧರ್ಮದ ಮೂಲವನ್ನು ಪ್ರಶ್ನಿಸಿದ ಗೃಹ ಸಚಿವ ಜಿ. ಪರಮೇಶ್ವರ್‌
ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಅದನ್ನು ಯಾರು ಸೃಷ್ಟಿಸಿದವರು..? : ಗೃಹ ಸಚಿವರ ಪ್ರಶ್ನೆ title=

ತುಮಕೂರು : ‘ಸನಾತನ ಧರ್ಮ’ ಕುರಿತು ತಮಿಳುನಾಡು ಮುಖ್ಯಮಂತ್ರಿ ಪುತ್ರ ಹಾಗೂ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ದೇಶಾದ್ಯಂತ ಸಂಚಲನ ಮೂಡಿಸಿದ ಬೆನ್ನಲ್ಲೇ, ಗೃಹ ಸಚಿವ ಜಿ. ಪರಮೇಶ್ವರ ಅವರು ಮಂಗಳವಾರ ಹಿಂದೂ ಧರ್ಮದ ಮೂಲವನ್ನು ಪ್ರಶ್ನಿಸಿದ್ದಾರೆ.  

"ಹಿಂದೂ ಧರ್ಮ ಯಾವಾಗ ಹುಟ್ಟಿತು, ಅದನ್ನು ಸೃಷ್ಟಿಸಿದವರು ಯಾರು?.. ಪ್ರಪಂಚದ ಇತಿಹಾಸದಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಜೈನ ಮತ್ತು ಬೌದ್ಧ ಧರ್ಮಗಳು ಇಲ್ಲಿ ಉಗಮವಾದವು. ಹಿಂದೂ ಧರ್ಮ ಯಾವಾಗ ಹುಟ್ಟಿತು, ಅದನ್ನು ಯಾರು ಪ್ರಾರಂಭಿಸಿದರು ಎಂಬುದು ಇನ್ನೂ ಪ್ರಶ್ನೆಯಾಗಿದೆ" ಎಂದು ಪರಮೇಶ್ವರ ಹೇಳಿದರು. 

ಇದನ್ನೂ ಓದಿ: ಅಧಿಕಾರ ಸ್ವೀಕರಿಸಿದ ದಿನವೇ ಹೃದಯಾಘಾತದಿಂದ ಸಾವು

ತುಮಕೂರು ಜಿಲ್ಲೆಯ ಕೊರಟಗೆರೆಯ ಮಾರುತಿ ಕಲ್ಯಾಣ ಮಂಟಪದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ದೇಶವು ಬೌದ್ಧ ಮತ್ತು ಜೈನ ಧರ್ಮದ ಮೂಲದ ಇತಿಹಾಸವನ್ನು ಹೊಂದಿದೆ. ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮಗಳು ವಿದೇಶದಿಂದ ನಮ್ಮ ದೇಶಕ್ಕೆ ಬಂದವು, ಪ್ರಪಂಚದ ಎಲ್ಲಾ ಧರ್ಮಗಳ ಸಾರಾಂಶವು ಒಂದು ಮನುಕುಲಕ್ಕೆ ಒಳ್ಳೆಯದಾಗಲಿ" ಎಂದು ಹೇಳಿದರು.

ಇನ್ನು ಡಿಎಂಕೆ ನಾಯಕ ಉದಯನಿಧಿ ಅವರು ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆ ರಾಷ್ಟ್ರದಾದ್ಯಂತ ಭಾರೀ ವಿವಾದವನ್ನು ಹುಟ್ಟುಹಾಕಿದೆ. ಬಿಜೆಪಿ ನಾಯಕರು ಮತ್ತು ಹಿಂದೂ ಪುರೋಹಿತರು ಸೇರಿದಂತೆ ಕೆಲವು ಸಂಘಟನೆಗಳೂ ತೀವ್ರವಾಗಿ ಟೀಕಿಸಿದವು.

ಇದನ್ನೂ ಓದಿ: ತುಮಕೂರಲ್ಲಿ ಬೂಸಾ ಕೊಡಲು ತಡಮಾಡಿದ್ದಕ್ಕೆ ಬಿತ್ತು ಗೂಸಾ

ಆದ್ರೆ, ಸಿಎಂ ಎಂಕೆ ಸ್ಟಾಲಿನ್ ಅವರ ಮಗ, ನಾನು ಮತ್ತೆ ಅದೇ ವಿಷಯವನ್ನು ಪುನರಾವರ್ತಿಸುತ್ತೇನೆ ಎಂದು ಹೇಳುವ ಮೂಲಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಟ್ಟೀಟ್‌ ಮಾಡಿರುವ ಅವರು, ನಾನು ಹಿಂದೂ ಧರ್ಮದ ವಿರೋಧಿಯಲ್ಲ, ಆದರೆ ಜಾತಿ ತಾರತಮ್ಯದಂತಹ ಸನಾತನ ಆಚರಣೆಗಳನ್ನು ವಿರೋಧಿಸುತ್ತೇನೆ ಎಂದು ತಿಳಿಸಿದ್ದರು..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News