ಅಂಬೇಡ್ಕರ್ ಅವಹೇಳನ ಆರೋಪ: ತನಿಖೆಗೆ ಸಮಿತಿ ರಚಿಸಿದ ಸರ್ಕಾರ

ರಾಷ್ಟ್ರ ನಾಯಕರನ್ನು ಅವಹೇಳನ ಮಾಡಿ ಜನರ ಮನಸ್ಸಿಗೆ ನೋವುಂಟು ಮಾಡಿದ್ದಾರೆ, ಈಗಾಗಲೇ ಸಂಜೀವ್ ವಿರುದ್ಧ ಸಾಕಷ್ಟು ಭ್ರಷ್ಟಾಚಾರ ಆರೋಪವೂ ಕೇಳಿಬಂದಿದ್ದು ಸರ್ಕಾರಕ್ಕೆ ಮುಜುಗುರ ಉಂಟಾಗುವ ಸನ್ನಿವೇಶ ಸೃಷ್ಟಿಸಿದ್ದು ಕೂಡಲೇ ಅವರನ್ನು ಸಿಮ್ಸ್ ಡೀನ್ ಹುದ್ದೆಯಿಂದ ಬಿಡುಗಡೆ ಮಾಡಬೇಕೆಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

Written by - Yashaswini V | Last Updated : May 25, 2023, 10:48 AM IST
  • ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್
  • ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ.ಸಂಜೀವ್ ವಿರುದ್ದ ಶಾಸಕ ಸಿ. ಪುಟ್ಟರಂಗಶೆಟ್ಟಿ ಸಿಎಂಗೆ ಪತ್ರ
  • ಶಾಸಕರು ಪತ್ರ ಬರೆಯುತ್ತಿದ್ದಂತೆ ಸೂಕ್ತ ತನಿಖೆಗೆ ದ್ವಿಸದಸ್ಯ ತಂಡ ರಚಿಸಿದ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್
ಅಂಬೇಡ್ಕರ್ ಅವಹೇಳನ ಆರೋಪ: ತನಿಖೆಗೆ ಸಮಿತಿ ರಚಿಸಿದ ಸರ್ಕಾರ title=

ಚಾಮರಾಜನಗರ: ಬಾಕಿ ವೇತನ ಕೇಳಲು ಹೋದ ವೇಳೆ  ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ.ಸಂಜೀವ್ ವಿರುದ್ದ ಶಾಸಕ ಸಿ. ಪುಟ್ಟರಂಗಶೆಟ್ಟಿ ಸಿಎಂಗೆ ಪತ್ರ ಬರೆದಿದ್ದಾರೆ.

ರಾಷ್ಟ್ರ ನಾಯಕರನ್ನು ಅವಹೇಳನ ಮಾಡಿ ಜನರ ಮನಸ್ಸಿಗೆ ನೋವುಂಟು ಮಾಡಿದ್ದಾರೆ, ಈಗಾಗಲೇ ಸಂಜೀವ್ ವಿರುದ್ಧ ಸಾಕಷ್ಟು ಭ್ರಷ್ಟಾಚಾರ ಆರೋಪವೂ ಕೇಳಿಬಂದಿದ್ದು ಸರ್ಕಾರಕ್ಕೆ ಮುಜುಗುರ ಉಂಟಾಗುವ ಸನ್ನಿವೇಶ ಸೃಷ್ಟಿಸಿದ್ದು ಕೂಡಲೇ ಅವರನ್ನು ಸಿಮ್ಸ್ ಡೀನ್ ಹುದ್ದೆಯಿಂದ ಬಿಡುಗಡೆ ಮಾಡಬೇಕೆಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ- ದಿ ಕೇರಳ ಸ್ಟೋರಿ ಸಿನಿಮಾ ವೀಕ್ಷಣೆಗಾಗಿ ಕ್ಲಾಸ್ ಸಮಯ ಬದಲಾವಣೆ ಮಾಡಿ ಆದೇಶಿಸಿದ್ದ ಪ್ರಿನ್ಸಿಪಾಲ್..!

ಶಾಸಕರು ಪತ್ರ ಬರೆಯುತ್ತಿದ್ದಂತೆ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಸೂಕ್ತ ತನಿಖೆಯ ದ್ವಿಸದಸ್ಯ ತಂಡ ರಚಿಸಿ ಕೂಡಲೇ ವರದಿ ಕೊಡುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ- Photo Gallery: ರಾಜ್ಯದ ಗಮನ ಸೆಳೆದ ಮಾವು ಮೇಳ-2023

ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಡಾ.ಕೆ.ರವಿ ಹಾಗೂ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಆಡಳಿತಾಧಿಕಾರಿ ಕೆ.ಎ.ಉಮಾ ಅವರ ಸಮಿತಿ ರಚನೆ ಮಾಡಲಾಗಿದ್ದು ಕೂಡಲೇ ಚಾಮರಾಜನಗರ ಮೆಡಿಕಲ್ ಕಾಲೇಜಿಗೆ ಚಾಮರಾಜನಗರ ಡಿಸಿ ಹಾಗೂ ಎಸ್ಪಿ ಅವರೊಟ್ಟಿಗೆ ತೆರಳಿ ಪ್ರಕರಣದ ಪರಿಶೀಲನೆ ನಡೆಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ನವೀನ್ ರಾಜ್ ಆದೇಶಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News