ಜ. 16ರಿಂದ 2 ದಿನ ರಾಜ್ಯ ಪ್ರವಾಸ ಕೈಗೊಳ್ಳಲಿರುವ Amit Shah

ಅಮಿತ್ ಶಾ ಕರ್ನಾಟಕ ಭೇಟಿ ವೇಳೆ ವಿಧಾನಸೌಧದಲ್ಲಿ ಇಆರ್ ಎಸ್ ಎಸ್ ವಾಹನಗಳಿಗೆ ಹಸಿರು ನಿಶಾನೆ ತೋರುವರು. ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಪ್ರತ್ಯೇಕವಾಗಿ ಸಭೆ ನಡೆಸುವರು.  

Written by - Yashaswini V | Last Updated : Jan 13, 2021, 10:20 AM IST
  • ಜ. 14ರಂದು ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚೆನ್ನೈಗೆ ಭೇಟಿ
  • ಬೆಂಗಳೂರು, ಭದ್ರಾವತಿ ಹಾಗೂ ಬೆಳಗಾವಿಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
  • ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪದಾಧಿಕಾರಿಗಳ ಸಭೆ
ಜ. 16ರಿಂದ 2 ದಿನ ರಾಜ್ಯ ಪ್ರವಾಸ ಕೈಗೊಳ್ಳಲಿರುವ Amit Shah title=
Amit Shah two days karnataka visit

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇದೇ ಜನವರಿ 16 ಮತ್ತು 17ರಂದು ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು ಅವರು ಬೆಂಗಳೂರು, ಭದ್ರಾವತಿ ಹಾಗೂ ಬೆಳಗಾವಿಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ (Tamilnadu Assembly Election) ಹಿನ್ನೆಲೆಯಲ್ಲಿ ನಾಳೆ (ಜನವರಿ 14) ಚೆನ್ನೈ (Chennai)ಗೆ ಭೇಟಿ  ನೀಡಲಿರುವ ಅಮಿತ್ ಶಾ ನಂತರ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಜನವರಿ 16ರಂದು ಬೆಳಗ್ಗೆ 9 ಗಂಟೆಗೆ ನವದೆಹಲಿಯಿಂದ ಹೊರಟು ಬೆಳಿಗ್ಗೆ 11.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಭದ್ರಾವತಿಗೆ ಆಗಮಿಸಿ ಅಲ್ಲಿ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ಸೆಂಟರ್ (Rapid Action Force Center)ಗೆ ಶಂಕುಸ್ಥಾಪನೆ ನೆರವೇರಿಸಿ ಬಳಿಕ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಇದನ್ನೂ ಓದಿ - Cabinet Crisis : ಸಮಯ ನಿಗದಿಯಾದರೂ ನಿವಾರಣೆಯಾಗದ ಸಮಸ್ಯೆ

ಅಲ್ಲಿಂದ ಬೆಂಗಳೂರಿಗೆ ಆಗಮಿಸಿ ವಿಧಾನಸೌಧದಲ್ಲಿ ಇಆರ್ ಎಸ್ ಎಸ್ (ERSS) ವಾಹನಗಳಿಗೆ ಹಸಿರು ನಿಶಾನೆ ತೋರುವರು. ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಪ್ರತ್ಯೇಕವಾಗಿ ಸಭೆ ನಡೆಸುವರು.

ರಾತ್ರಿ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಲಿರುವ ಅಮಿತ್ ಶಾ, ಜ. 17ರಂದು ಬೆಳಗ್ಗೆ 9.30ಕ್ಕೆ ವಿಶೇಷ ವಿಮಾನದ ಮೂಲಕ ಹೊರಟು 10.30ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬೆಳಗಾವಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಗೆ ತೆರಳಿ ಅಲ್ಲಿ ಮುರುಗೇಶ ನಿರಾಣಿ ಅವರ ಎಂಆರ್ ಎನ್ ಲಿಮಿಟೆಡ್ (MRN Limited) ಸಕ್ಕರೆ ಕಾರ್ಖಾನೆಯಲ್ಲಿ ಎಥೆನಾಲ್ ಪ್ರೊಜೆಕ್ಟ್ ಗೆ ಚಾಲನೆ ನೀಡುವರು.

ಇದನ್ನೂ ಓದಿ - Amit shah: ಬೆಳಗಾವಿ ಲೋಕಸಭೆ ಬೈ ಎಲೆಕ್ಷನ್: ಅಮಿತ್ ಶಾ ಭೇಟಿ ನಂತ್ರ ಅಭ್ಯರ್ಥಿ ಫೈನಲ್..!

ಅಲ್ಲಿಂದ ಹೆಲಿಕಾಪ್ಟರ್ ಮೂಲಕ 1.15ಕ್ಕೆ ಬೆಳಗಾವಿಗೆ ಆಗಮಿಸಿ ಪ್ರವಾಸಿ ಮಂದಿರದಲ್ಲಿ ವಿಶ್ರಾಂತಿ ಪಡೆದು 3 ಗಂಟೆಗೆ ಕೆಎಲ್ ಇ ಆಸ್ಪತ್ರೆಗೆ (KEL Hospital) ಭೇಟಿ ನೀಡುವರು ನಂತರ 4.10ರಿಂದ 5.30ರ ವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜನಪ್ರತಿನಿಧಿಗಳ ಸಮಾವೇಶದಲ್ಲಿ ಪಾಲ್ಗೊಳ್ಳುವರು.

ಇದಾದ ಮೇಲೆ ಇತ್ತೀಚಿಗೆ ನಿಧನರಾದ ಸುರೇಶ್ ಅಂಗಡಿ (Suresh Angadi) ಅವರ ನಿವಾಸಕ್ಕೆ ತೆರಳಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುವರು. ಬಳಿಕ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪದಾಧಿಕಾರಿಗಳ ಸಭೆ ನಡೆಸಿ ರಾತ್ರಿ 7.30ಕ್ಕೆ ಬೆಳಗಾವಿಯಿಂದ ನವದೆಹಲಿಗೆ ತೆರಳುವರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News