ಬಂಗಾಳದ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅ**ಚಾರ

assault on a graduate student: ಸಂತ್ರಸ್ತೆ, ಕೋರಮಂಗಲದ ಪಬ್ ಒಂದರಲ್ಲಿ ಸ್ನೇಹಿತರ ಜೊತೆ ಪಾರ್ಟಿ ಮಾಡಿದ್ದಾಳೆ. ತನ್ನ ವೋಕ್ಸ್‌ ವ್ಯಾಗನ್‌ ಕಾರಿನಲ್ಲಿ ತೆರಳುವಾಗ ಕೋರಮಂಗಲದ ಎಂಪೈರ್ ಸರ್ಕಲ್ ಬಳಿ ಆಟೋವೊಂದಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಫೋರಂ ಮಾಲ್ ಬಳಿ ಇದೆ ವಿಚಾರಕ್ಕೆ ಗಲಾಟೆ ಸಹ ಆಗಿದೆ.

Written by - VISHWANATH HARIHARA | Edited by - Bhavishya Shetty | Last Updated : Aug 18, 2024, 02:23 PM IST
    • ವಿದ್ಯಾರ್ಥಿನಿ ಮೇಲೆ ಅ**ಚಾರವೆಸಗಿರುವ ಘಟನೆ ಹೆಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
    • ತೀವ್ರ ಅಸ್ವಸ್ಥಗೊಂಡಿರುವ ಸಂತ್ರಸ್ಥೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
    • ಸಂತ್ರಸ್ತೆ, ಕೋರಮಂಗಲದ ಪಬ್ ಒಂದರಲ್ಲಿ ಸ್ನೇಹಿತರ ಜೊತೆ ಪಾರ್ಟಿ ಮಾಡಿದ್ದಾಳೆ
ಬಂಗಾಳದ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅ**ಚಾರ title=
File Photo

ಬೆಂಗಳೂರು: ಪದವಿ ವಿದ್ಯಾರ್ಥಿನಿ ಮೇಲೆ ಅ**ಚಾರವೆಸಗಿರುವ ಘಟನೆ ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ದಿನ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ತೀವ್ರ ಅಸ್ವಸ್ಥಗೊಂಡಿರುವ ಸಂತ್ರಸ್ಥೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: "ರಣಬೀರ್‌ʼಗೆ ಒಂದು ಪ್ಯಾಕ್‌ ಕಾಂ***ಮ್‌ ಗಿಫ್ಟ್‌ ಕೊಡ್ತೇನೆ, ಅದನ್ನು ಆತ ಹೆಚ್ಚು ಬಳಸ್ತಾನೆ"- ಖ್ಯಾತ ನಟಿ ದೀಪಿಕಾ ಪಡುಕೋಣೆ ಸೆನ್ಸೇಷನಲ್‌ ಹೇಳಿಕೆ ವೈರಲ್‌

ಸಂತ್ರಸ್ತೆ, ಕೋರಮಂಗಲದ ಪಬ್ ಒಂದರಲ್ಲಿ ಸ್ನೇಹಿತರ ಜೊತೆ ಪಾರ್ಟಿ ಮಾಡಿದ್ದಾಳೆ. ತನ್ನ ವೋಕ್ಸ್‌ ವ್ಯಾಗನ್‌ ಕಾರಿನಲ್ಲಿ ತೆರಳುವಾಗ ಕೋರಮಂಗಲದ ಎಂಪೈರ್ ಸರ್ಕಲ್ ಬಳಿ ಆಟೋವೊಂದಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಫೋರಂ ಮಾಲ್ ಬಳಿ ಇದೆ ವಿಚಾರಕ್ಕೆ ಗಲಾಟೆ ಸಹ ಆಗಿದೆ. ಇದರಿಂದ ಯುವತಿ ಸ್ವಲ್ಪ ದೂರ ನಡೆದುಕೊಂಡು ಹೋಗಿದ್ದಾಳೆ. ಸ್ವಲ್ಪ ದೂರ ನಡೆದುಕೊಂಡು ಹೋಗಿ ಬೈಕ್ ಸವಾರನೊಬ್ಬನ ಬಳಿ ಡ್ರಾಪ್ ತೆಗೆದುಕೊಂಡಿದ್ದಾಳೆ. ಆ ಬೈಕ್ ಸವಾರನೇ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅ**ಚಾರವೆಸಗಿ ಹೆಬ್ಬುಗೋಡಿ ಭಾಗದಲ್ಲಿ ಬಿಸಾಡಿರುವ ಆರೋಪ ಕೇಳಿ ಬಂದಿದೆ.

ಇನ್ನೂ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿ ತನ್ನ ಸ್ನೇಹಿತೆಗೆ ಕರೆ ಮಾಡಿದ್ದಾಳೆ. ತಕ್ಷಣ ಸ್ಥಳಕ್ಕೆ ಬಂದ ಆಕೆ ಹೆಬ್ಬಗೋಡಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾಳೆ. ಯುವತಿಯನ್ನು ವೈದ್ಯರು ತಪಾಸಣೆ ನಡೆಸಿದಾಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವಾಗಿರೋದು ಗೊತ್ತಾಗಿದೆ. ಹೀಗಾಗಿ ವೈದ್ಯರು ಹೆಬ್ಬಗೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕ್ರಿಕೆಟ್ ತೊರೆದು ಪೆಟ್ರೋಲ್ ಹಾಕೋಕೆ ನಿಂತ್ರಾ ಪೃಥ್ವಿ ಶಾ? ಶಾಕಿಂಗ್ ಪೋಟೋ ಹಂಚಿಕೊಂಡ ಚಾಹಲ್...

ಆಸ್ಪತ್ರೆಗೆ ತೆರಳಿದ ಹೆಬ್ಬಗೋಡಿ ಪೊಲೀಸರು ಘಟನೆ‌ ಎಲ್ಲಿ ನಡೆದಿದೆ ಎಂಬುದನ್ನು ತಿಳಿದುಕೊಂಡು ಹೆಚ್ ಎಸ್ ಆರ್ ಲೇಔಟ್ ಪೊಲೀಸರಿಗೆ ಮೆಮೋ ಕೊಟ್ಟಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಹೆಚ್ ಎಸ್ ಆರ್ ಲೇಔಟ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News