ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆ : ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇಗುಲ ಆಡಳಿತ ಮಂಡಳಿಯಿಂದ ವಿಶೇಷ ಸೂಚನೆ

Dharmastala :ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಮಹತ್ವದ ಸೂಚನೆ ನೀಡಲಾಗಿದೆ.  ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಭಕ್ತರ ಅನುಕೂಲಕ್ಕಾಗಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇಗುಲ ಆಡಳಿತ ಮಂಡಳಿ ವಿಶೇಷ ಸೂಚನೆ ಹೊರಡಿಸಿದೆ.

Written by - Zee Kannada News Desk | Last Updated : Feb 27, 2024, 07:45 PM IST
  • ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಮಹತ್ವದ ಸೂಚನೆ ನೀಡಲಾಗಿದೆ.
  • ರಾಜ್ಯದಲ್ಲಿ ಶಕ್ತಿ ಯೋಜನೆ ಆರಂಭವಾದ ದಿನದಿಂದ ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ.
  • ಇದೀಗ ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ.
ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆ : ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇಗುಲ ಆಡಳಿತ ಮಂಡಳಿಯಿಂದ ವಿಶೇಷ ಸೂಚನೆ  title=

Dharmastala shri manjunatheshwara temple : ಇದೀಗ ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ರಾಜ್ಯದಲ್ಲಿ ಶಕ್ತಿ ಯೋಜನೆ ಆರಂಭವಾದ ದಿನದಿಂದ ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. 

ಈ ವೇಳೆ ತಂಗಲು ದೇವಾಲಯ ಆಡಳಿತ ಮಂಡಳಿಗೆ ಒಳಪಟ್ಟ ವಿವಿಧ ವಸತಿಗೃಹಗಳ ವೆಬ್‌ಸೈಟ್‌ ಮೂಲಕ ಭಕ್ತರು ಮುಂಗಡ ಕಾಯ್ದಿರಿಸುತ್ತಾರೆ. ಈ ವೇಳೆ ಎಚ್ಚರ ವಹಿಸುವಂತೆ ಆಡಳಿತ ಮಂಡಳಿ ಎಚ್ಚರಿಕೆ ನೀಡಿದೆ.

ಇದನ್ನು ಓದಿ : Vijayanagar : ಶ್ರೀ ಕೊಟ್ಟೂರೇಶ್ವರ ಜಾತ್ರೆ ಹಿನ್ನೆಲೆ ವಿಶೇಷ ರೈಲು ವ್ಯವಸ್ಥೆ

ಧರ್ಮಸ್ಥಳ ಭಕ್ತಾಧಿಗಳ ಗಮನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವಸತಿ ಗೃಹಗಳನ್ನು ಕ್ಷೇತ್ರದ ಅಧೀಕೃತ ವೆಬ್‌ಸೈಟ್‌ www.shridharmastala.org ಮೂಲಕ ಮಾತ್ರ ಆನ್‌ಲೈನ್‌ ಬುಕ್ಕಿಂಗ್‌ ಮಾಡುವ ಸೌಲಭ್ಯ ನೀಡಲಾಗಿದೆ. ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇಗುಲದ ಅಧೀಕೃತ ಫೇಸ್‌ಬುಕ್‌ ಖಾತೆ ಮುಖ್ಯವಾದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.

 ಅನಧೀಕೃತ ಬುಕ್ಕಿಂಗ್‌ಗೆ ಶ್ರೀ ಕ್ಷೇತ್ರ ಹೊಣೆಯಾಗುವುದಿಲ್ಲ. ಇದನ್ನು ಹೊರತು ಪಡಿಸಿ ಇನ್ನು ಯಾವುದೇ ವೆಬ್‌ಸೈಟ್‌ ಮತ್ತು ಫೋನ್‌ ಮೂಲಕ ಬುಕ್ಕಿಂಗ್‌ ವ್ಯವಸ್ಥೆ ಇರುವುದಿಲ್ಲ. ಈ ಬಗ್ಗೆ ಭಕ್ತಾಧಿಗಳು ಎಚ್ಚರ ವಹಿಸಬೇಕಾಗಿ ವಿನಂತಿ ಎಂದು ಮನವಿ ಮಾಡಿದ್ದಾರೆ.

ಇದನ್ನು ಓದಿ :  7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾತ್ರಿಯ ಸಂದರ್ಭದಲ್ಲಿ ಸಾವಿರಾರು ಜನರು ಪಾದಯಾತ್ರೆಯ ಮೂಲಕ ಬರುತ್ತಾರೆ. ಅರಣ್ಯ ಮಾರ್ಗದಲ್ಲಿ ಬರುವಾಗ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ತಟ್ಟೆ, ಲೋಟ, ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುತ್ತಾರೆ. ಈ ಬಾರಿ ಧರ್ಮಸ್ಥಳದ ಶಿವರಾತ್ರಿ ಪಾದಯಾತ್ರೆ ಪ್ಲಾಸ್ಟಿಕ್ ಮುಕ್ತ ಈ ಬಾರಿ ಧರ್ಮಸ್ಥಳದ ಶಿವರಾತ್ರಿ ಪಾದಯಾತ್ರೆ ಪ್ಲಾಸ್ಟಿಕ್ ಮುಕ್ತವಾಗಿ ನಡೆಯಬೇಕು ಎಂದು ಈ ಹಿಂದೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ.ಬಿ ಖಂಡ್ರೆ ಭಕ್ತಾಧಿಗಳಲ್ಲಿ ಮನವಿ ಮಾಡಿದ್ದಾರೆ. 

ಇದನ್ನು ವನ್ಯಜೀವಿಗಳು ತಿಂದು ಸಾವಿಗೀಡಾಗುತ್ತವೆ. ಹೀಗಾಗಿ ಈ ಬಾರಿ ಪಾದಯಾತ್ರೆಯಲ್ಲಿ ಬರುವ ಭಕ್ತರು ಅರಣ್ಯ ಪ್ರವೇಶಿಸುವ ಮುನ್ನ ತಪಾಸಣೆ ಮಾಡಿ ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ 
ಮಾಡಿ.

Trending News