ನಮ್ಮ ಅವಧಿಯ ಕೆಲಸಗಳನ್ನು ತಮ್ಮ ಸಾಧನೆ ಎಂದು ಹೇಳಿಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ

ರಾಜ್ಯಪಾಲರ ಭಾಷಣದಲ್ಲಿ ಸರ್ಕಾರ ಯಾವುದೇ ವಿಚಾರದಲ್ಲಿ ಸಾಧನೆ ಮಾಡಿರುವುದು ಕಾಣಿಸುವುದಿಲ್ಲ. ನಾವು ಮಾಡಿರುವ ಯೋಜನೆಗಳನ್ನು ತಮ್ಮ ಸಾಧನೆ ಎಂದು ಹೇಳಿಕೊಂಡಿದ್ದಾರೆ. ಜಲಜೀವನ್ ಮಿಷನ್, ಬಡವರಿಗೆ ಮನೆ‌ ನಿರ್ಮಾಣ ಎಲ್ಲವೂ ನಮ್ಮ ಯೋಜನೆಗಳು- ಮಾಜಿ ಸಿಎಂ ಬಸವರಾಜ ಬೊಮ್ಮಾಯಿ 

Written by - Prashobh Devanahalli | Last Updated : Feb 12, 2024, 03:02 PM IST
  • ನೀರಾವರಿ ಯೋಜನೆಗಳಿಗೆ ಎಂಟು ತಿಂಗಳಲ್ಲಿ 10 ಸಾವಿರ ಕೋಟಿ ಖರ್ಚು ಮಾಡಿದ್ದೇವೆ ಎಂದು ಹೇಳಿದ್ದಾರೆ.
  • ಯಾವ ಯೋಜನೆಗೆ ಎಷ್ಟು ಖರ್ಚು ಮಾಡಿದ್ದಾರೆ ಎಂದು ದಾಖಲೆ ನೀಡಲಿ.
  • ತಮ್ಮ ಬೆನ್ನು ತಾವೆ ತಟ್ಟಿಕೊಳ್ಳುವ ಕೆಲಸ ಮಾಡಿದ್ದಾರೆ.
ನಮ್ಮ ಅವಧಿಯ ಕೆಲಸಗಳನ್ನು ತಮ್ಮ ಸಾಧನೆ ಎಂದು ಹೇಳಿಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ title=

ಬೆಂಗಳೂರು: ನಮ್ಮ ಕಾಲದಲ್ಲಿ‌‌ ಜಾರಿಗೆ ತಂದ ಯೋಜನೆಗಳನ್ನು ತಮ್ಮ ಸಾಧನೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ಆರಂಭವಾದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು, ಇಂತಹ ಸಪ್ಪೆ, ನಿರಾಸೆಯ ಭಾಷಣ ಯಾವತ್ತೂ ಕೇಳಿರಲಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿರುವ ಜನವಿರೊಧಿ ಸರ್ಕಾರ ಇರುವುದನ್ನು ತೋರಿಸುತ್ತದೆ. ಎಂದರು. 

ರಾಜ್ಯಪಾಲರ ಭಾಷಣದಲ್ಲಿ ಸರ್ಕಾರ ಯಾವುದೇ ವಿಚಾರದಲ್ಲಿ ಸಾಧನೆ ಮಾಡಿರುವುದು ಕಾಣಿಸುವುದಿಲ್ಲ. ನಾವು ಮಾಡಿರುವ ಯೋಜನೆಗಳನ್ನು ತಮ್ಮ ಸಾಧನೆ ಎಂದು ಹೇಳಿಕೊಂಡಿದ್ದಾರೆ. ಜಲಜೀವನ್ ಮಿಷನ್, ಬಡವರಿಗೆ ಮನೆ‌ ನಿರ್ಮಾಣ ಎಲ್ಲವೂ ನಮ್ಮ ಯೋಜನೆಗಳು. ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆ ನಮ್ಮ ಅವಧಿಯಲ್ಲಿ ಆರಂಭಿಸಿಧ್ದೇವೆ ಅದನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಂಡಿದ್ದಾರೆ‌ ಎಂದು ಹೇಳಿದರು. 

ಇದನ್ನೂ ಓದಿ- ದೆಹಲಿಯಲ್ಲಿ ಪ್ರತಿಭಟನೆಗಾಗಿ ತೆರಳುತ್ತಿದ್ದ ರೈತರನ್ನು ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಖಂಡನೀಯ: ಸಿಎಂ ಸಿದ್ದರಾಮಯ್ಯ

ನೀರಾವರಿ ಯೋಜನೆಗಳಿಗೆ ಎಂಟು ತಿಂಗಳಲ್ಲಿ 10 ಸಾವಿರ ಕೋಟಿ ಖರ್ಚು ಮಾಡಿದ್ದೇವೆ ಎಂದು ಹೇಳಿದ್ದಾರೆ. ಯಾವ ಯೋಜನೆಗೆ ಎಷ್ಟು ಖರ್ಚು ಮಾಡಿದ್ದಾರೆ ಎಂದು ದಾಖಲೆ ನೀಡಲಿ. ತಮ್ಮ ಬೆನ್ನು ತಾವೆ ತಟ್ಟಿಕೊಳ್ಳುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರು ಕ್ಷೇತ್ರದಲ್ಲಿ ತಿರುಗಾಡದಂತಹ ಪರಿಸ್ಥಿತಿ ಇದೆ. ಅವರನ್ನು ಕೆಳಿದರೆ ಸರ್ಕಾರ ಸಾಧನೆ ಏನು ಅಂತ ಗೊತ್ತಾಗುತ್ತದೆ. ಬರ ಪರಿಹಾರಕ್ಕೆ ಹಣ ಬಿಡುಗಡೆ ಮಾಡಿಲ್ಲ. ಡಿಸಿ ಅಕೌಂಟ್ ನಲ್ಲಿ ಹಣ ಇದೆ ಎಂದು ಹೇಳುತ್ತಾರೆ. ಅವರು ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ. ರಾಜ್ಯಪಾಲರಿಂದ ಸುಳ್ಳು ಹೇಳುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಿಎಂ ಆರೋಪಿಸಿದರು. 

ಇದನ್ನೂ ಓದಿ- ಅಯೋಧ್ಯೆಯಲ್ಲಿ ಸುತ್ತೂರು ಮಠ ಶಾಖೆ ತೆರೆಯಲು ನಿರ್ಧಾರ: ಅಮಿತ್ ಶಾ ಸಂತಸ

ಕೇಂದ್ರದ ಅನುದಾನ ಬಂದಿಲ್ಲ ಎಂದು ಮಾಡಿರುವ ಆರೋಪದ  ಕುರಿತು ಸದನದಲ್ಲಿ ಚರ್ಚೆ ಮಾಡುತ್ತೇವೆ. ಯುಪಿಎ ಅವಧಿಯಲ್ಲಿ ಎಷ್ಟು ಬಂದಿದೆ. ಎನ್ ಡಿಎ ಅವಧಿಯಲ್ಲಿ ಎಷ್ಟು ಅನುದಾನ ಬಂದಿದೆ ಎನ್ನುವುದು ದಾಖಲೆ ಇದೆ. ಕೇಂದ್ರದ ಆಯುಷ್ಮಾನ್ ಭಾರತ, ಜಲ ಜೀವನ್ ಮಿಷನ್ ಸೇರಿದಂತೆ ಅನೇಕ ಯೊಜನೆಗಳು ಜಾರಿಯಲ್ಲಿವೆ. ಧರ್ಮದ ವಿಚಾರದಲ್ಲಿ ಸಂವಿಧಾನದಲ್ಲಿ ಎಲ್ಲ ಧರ್ಮಗಳನ್ನು ಸಮಾನವಾಗಿ ಕಾಣುವಂತೆ ಹೇಳಿದೆ. ಆದರೆ, ಇವರು ಒಂದೇ ಧರ್ಮವನ್ನು ತುಷ್ಟೀಕರಣ ಮಾಡುವ ಕೆಲಸ ಮಾಡುತ್ತಾರೆ ಎಂದು ಆರೋಪಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News