ಹುಬ್ಬಳ್ಳಿ ಜನರ ಫೆವೇರೆಟ್‌ ಲಿಸ್ಟ್‌ ಸೇರಿದ ವಂದೇ ಭಾರತ್ ಎಕ್ಸ್‌ಪ್ರೆಸ್... ಬೆಂಗಳೂರಿಗೆ ತೆರಳಲು ಇದೇ ಮೊದಲ ಆದ್ಯತೆ!!

Vande Bharat Express: ವಿಶೇಷವಾಗಿ ಹುಬ್ಬಳ್ಳಿ-ಧಾರವಾಡದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ಜನಪ್ರಿಯತೆಯನ್ನು ಗಳಿಸಿದೆ. ಈ ಅವಳಿ ನಗರಗಳ ಪ್ರಯಾಣಿಕರ ಸಂಖ್ಯೆ ಕಳೆದ ವರ್ಷದಲ್ಲಿ ಸ್ಥಿರವಾಗಿ ಹೆಚ್ಚಿದೆ.

Written by - Chetana Devarmani | Last Updated : Aug 10, 2024, 02:40 PM IST
  • ಬೆಂಗಳೂರು - ಧಾರವಾಡ - ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್
  • ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ
  • ಇದು ಪ್ರಸ್ತುತ 85% ರಷ್ಟು ಬುಕಿಂಗ್ ಪಡೆಯುತ್ತಿದೆ.
ಹುಬ್ಬಳ್ಳಿ ಜನರ ಫೆವೇರೆಟ್‌ ಲಿಸ್ಟ್‌ ಸೇರಿದ ವಂದೇ ಭಾರತ್ ಎಕ್ಸ್‌ಪ್ರೆಸ್... ಬೆಂಗಳೂರಿಗೆ ತೆರಳಲು ಇದೇ ಮೊದಲ ಆದ್ಯತೆ!! title=

ಹುಬ್ಬಳ್ಳಿ: ಬೆಂಗಳೂರು - ಧಾರವಾಡ - ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ವಿಶೇಷವಾಗಿ ಹುಬ್ಬಳ್ಳಿ-ಧಾರವಾಡದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ಜನಪ್ರಿಯತೆಯನ್ನು ಗಳಿಸಿದೆ. ಈ ಅವಳಿ ನಗರಗಳ ಪ್ರಯಾಣಿಕರ ಸಂಖ್ಯೆ ಕಳೆದ ವರ್ಷದಲ್ಲಿ ಸ್ಥಿರವಾಗಿ ಹೆಚ್ಚಿದೆ. ಇದು ಪ್ರಸ್ತುತದ 85% ರಷ್ಟು ಬುಕಿಂಗ್ ಪಡೆಯುತ್ತಿದೆ.

ಪ್ರಯಾಣಿಕರಿಂದ ಈ ರೈಲು ಪ್ರಶಂಸೆಗೆ ಒಳಗಾಗಿದೆ. ಆರಾಮದಾಯಕ ಮತ್ತು ಸುರಕ್ಷಿತ ಪ್ರಯಾಣಕ್ಕೆ ಆದ್ಯತೆಯ ಆಯ್ಕೆಯಾಗಿದೆ ಎಂದು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (CPRO) ಡಾ ಮಂಜುನಾಥ್ ಕನಮಡಿ ತಿಳಿಸಿದ್ದಾರೆ.

ಇದನ್ನೂ ಓದಿ: ಮನುವಾದಿಗಳು ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸಲ್ಲ: ಸಿಎಂ ಆಕ್ರೋಶ

ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ದಾವಣಗೆರೆಯಿಂದ 15.01% ಸೀಟುಗಳು ಮಾತ್ರ ಬುಕಿಂಗ್‌ ಆಗುತ್ತಿವೆ. ಆದರೆ 84.97% ಹುಬ್ಬಳ್ಳಿ ಮತ್ತು ಧಾರವಾಡದಿಂದ ಬುಕ್ ಮಾಡಲಾಗಿತ್ತಿದೆ. ಹೆಚ್ಚಿನ ಪ್ರಯಾಣಿಕರು ಹುಬ್ಬಳ್ಳಿ ಮತ್ತು ಧಾರವಾಡದಿಂದ ಬೆಂಗಳೂರಿಗೆ ಪ್ರಯಾಣಿಸುವವರಾಗಿದ್ದಾರೆ. 

ವಂದೇ ಭಾರತ್ ಎಕ್ಸ್‌ಪ್ರೆಸ್ (20661) ಬೆಂಗಳೂರಿನಿಂದ ಧಾರವಾಡಕ್ಕೆ ಆಗಮಿಸುತ್ತದೆ. ಮಂಗಳವಾರ ಹೊರತುಪಡಿಸಿ, ಬೆಳಿಗ್ಗೆ 5.45 ಕ್ಕೆ ಹೊರಟು ಮಧ್ಯಾಹ್ನ 12.10 ಕ್ಕೆ ತಲುಪುತ್ತದೆ. ವಂದೇ ಭಾರತ್ ಎಕ್ಸ್‌ಪ್ರೆಸ್ (20662) ಧಾರವಾಡದಿಂದ ಮಧ್ಯಾಹ್ನ 1.15 ಕ್ಕೆ ಹೊರಟು ರಾತ್ರಿ 7.45 ಕ್ಕೆ ಬೆಂಗಳೂರನ್ನು ತಲುಪುತ್ತದೆ. ಯಶವಂತಪುರ, ದಾವಣಗೆರೆ ಮತ್ತು ಹುಬ್ಬಳ್ಳಿಯಲ್ಲಿ ನಿಲ್ಲುತ್ತದೆ.  

ಇದನ್ನೂ ಓದಿ: ಎಚ್ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ ಮಂಜೂರಾತಿಗೆ ರಾಜ್ಯಪಾಲರಿಗೆ ಲೋಕಾಯುಕ್ತ  ಮನವಿ

ಫೆಬ್ರವರಿ 15, 2019 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿ ಮತ್ತು ವಾರಣಾಸಿ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಉದ್ಘಾಟಿಸಿದರು. ನವದೆಹಲಿ ರೈಲು ನಿಲ್ದಾಣದಲ್ಲಿ ಪ್ರಾರಂಭಿಸಿದರು. ಸರಾಸರಿ 95 ಕಿಮೀ/ಗಂ ವೇಗದಲ್ಲಿ, ರೈಲು 8 ಗಂಟೆಗಳಲ್ಲಿ 759 ಕಿಮೀ ಪ್ರಯಾಣಿಸಿತು. ಈ ಮಾರ್ಗದಲ್ಲಿ ಪ್ರಸ್ತುತ ಪ್ರಯಾಣದ ಸಮಯವನ್ನು 15% ರಷ್ಟು ಕಡಿತಗೊಳಿಸಿತು. ನವದೆಹಲಿ ಮತ್ತು ಕತ್ರಾ ನಡುವೆ ಸಾಗುವ ಎರಡನೇ ಮಾರ್ಗವು ಅಕ್ಟೋಬರ್ 2019 ರಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸಿತು. ವಂದೇ ಭಾರತ್ ರೈಲುಗಳು ಶತಾಬ್ದಿ ಎಕ್ಸ್‌ಪ್ರೆಸ್‌ನಂತೆ ಕಡಿಮೆ ಸಮಯದಲ್ಲಿ ತ್ವರಿತ ಸೇವೆಯನ್ನು ನೀಡುತ್ತವೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News