ನ್ಯಾಯಾಲಯದ ಆದೇಶಕ್ಕೆ ಕಾಯದೆ ಕೂಡಲೇ ರಾಜೀನಾಮೆ ಕೊಟ್ಟರೆ ಒಳಿತು; ಮುಖ್ಯಮಂತ್ರಿ ರಾಜೀನಾಮೆಗೆ ಕ್ಷಣಗಣನೆ: ಬಿ.ವೈ ವಿಜಯೇಂದ್ರ

ದೆಹಲಿಯಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರಿಗೆ ವಿಶ್ವಾಸ ಇಲ್ಲ; ವಿಧಾನಸೌಧಕ್ಕೂ ಸಚಿವರು ಹೋಗುತ್ತಿಲ್ಲ. ಯಾವಾಗ ಮುಖ್ಯಮಂತ್ರಿ ರಾಜೀನಾಮೆ ಕೊಡುತ್ತಾರೋ, ಯಾವಾಗ ಸಿದ್ದರಾಮಯ್ಯರ ಪರವಾಗಿ ಬ್ಯಾಟಿಂಗ್ ಮಾಡಲು ದೆಹಲಿಗೆ ಹೋಗಬೇಕೋ ಎಂಬ ಆತಂಕ ಅವರಲ್ಲಿದೆ ಎಂದು ವಿಶ್ಲೇಷಿಸಿದರು

Written by - Prashobh Devanahalli | Last Updated : Aug 27, 2024, 02:15 PM IST
    • ಕರ್ನಾಟಕದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ.
    • ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು
    • ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ತಿಳಿಸಿದರು
ನ್ಯಾಯಾಲಯದ ಆದೇಶಕ್ಕೆ ಕಾಯದೆ ಕೂಡಲೇ ರಾಜೀನಾಮೆ ಕೊಟ್ಟರೆ ಒಳಿತು; ಮುಖ್ಯಮಂತ್ರಿ ರಾಜೀನಾಮೆಗೆ ಕ್ಷಣಗಣನೆ: ಬಿ.ವೈ ವಿಜಯೇಂದ್ರ  title=
File Photo

ಬೆಂಗಳೂರು: ಕಳೆದ ಎರಡು ತಿಂಗಳಿಂದ ಕರ್ನಾಟಕದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಿದ್ದರಾಮಯ್ಯನವರು ಯಾವುದೇ ಕ್ಷಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ತಿಳಿಸಿದರು.

ಇದನ್ನೂ ಓದಿ: ಓದಿದ್ದು 8ನೇ ಕ್ಲಾಸ್‌, ಆಗಿದ್ದು ಟೀಂ ಇಂಡಿಯಾದ ಸ್ಟಾರ್‌ ಬೌಲರ್...‌ 200 ರೂಗೆ ಕ್ರಿಕೆಟ್‌ ಆಡಿದ್ದ ಈತ ಇಂದು ಕೋಟಿ ಕೋಟಿ ಆಸ್ತಿ ಮಾಲೀಕ: ಯಾರೆಂದು ಗೆಸ್‌ ಮಾಡಿ

ದೆಹಲಿಯಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರಿಗೆ ವಿಶ್ವಾಸ ಇಲ್ಲ; ವಿಧಾನಸೌಧಕ್ಕೂ ಸಚಿವರು ಹೋಗುತ್ತಿಲ್ಲ. ಯಾವಾಗ ಮುಖ್ಯಮಂತ್ರಿ ರಾಜೀನಾಮೆ ಕೊಡುತ್ತಾರೋ, ಯಾವಾಗ ಸಿದ್ದರಾಮಯ್ಯರ ಪರವಾಗಿ ಬ್ಯಾಟಿಂಗ್ ಮಾಡಲು ದೆಹಲಿಗೆ ಹೋಗಬೇಕೋ ಎಂಬ ಆತಂಕ ಅವರಲ್ಲಿದೆ ಎಂದು ವಿಶ್ಲೇಷಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವೈಷ್ಣೋದೇವಿಗೆ ಹೋಗಿ ಬಂದಿದ್ದಾರೆ. ತಾಯಿಯಲ್ಲಿ ಆಶೀರ್ವಾದ ಬೇಡಿಕೊಂಡು ಬಂದಂತಿದೆ; ಅದು ಬೇರೆ ವಿಚಾರ ಎಂದು ನಗುತ್ತ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದ ಕ್ಷಣಗಣನೆ ಆರಂಭವಾಗಿದೆ. ಯಾವುದೇ ಕ್ಷಣದಲ್ಲಿ ರಾಜೀನಾಮೆ ಕೊಡಬಹುದು ಎಂದು ನುಡಿದರು.

ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ಸಾವಿರಾರು ಜನರು ಉತ್ಸಾಹದಿಂದ ಭಾಗವಹಿಸಿದ್ದರು. ಪಾಪ; ಕಾಂಗ್ರೆಸ್ಸಿಗರು ಗಾಬರಿಯಿಂದ ನಮ್ಮ ಪಾದಯಾತ್ರೆ ತಲುಪುವ ಮುನ್ನ ಜನಾಂದೋಲನ ಮಾಡಿದ್ದರು. ಮತ್ತೊಂದೆಡೆ ಸ್ವತಃ ಸಿದ್ದರಾಮಯ್ಯನವರು ಮೈಸೂರಿನಲ್ಲಿದ್ದು, ಜನಾಂದೋಲನಕ್ಕೆ ಸಿದ್ಧತೆ ಮಾಡಿದ್ದರು. ಮುಖ್ಯಮಂತ್ರಿಗಳು ರಾಜ್ಯದ ಜನರ ವಿಶ್ವಾಸ ಕಳಕೊಂಡಿದ್ದಾರೆ. ಅವರ ಕುರಿತು ಕಾಂಗ್ರೆಸ್ಸಿನ ಶಾಸಕರೂ ವಿಶ್ವಾಸ ಕಳಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಅಭಿವೃದ್ಧಿ ಕೆಲಸಗಳು ಶುರುವೇ ಆಗಿಲ್ಲ..
ಇವತ್ತಲ್ಲ ನಾಳೆ ಸಿಎಂ ರಾಜೀನಾಮೆ ಕೊಡಲೇಬೇಕು. ಹೈಕೋರ್ಟಿನ ತೀರ್ಪು ಬಂದ ಬಳಿಕವಾದರೂ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ಬಿ.ವೈ ವಿಜಯೇಂದ್ರ ಹೇಳಿದರು.

ಇವತ್ತಲ್ಲ ನಾಳೆ ಆ 14 ನಿವೇಶನಗಳು ಮುಡಾ ಪಾಲಾಗಿ ಬಡವರಿಗೆ ಸಿಗಲಿದೆ. ಈ ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದ ಬಳಿಕ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಭಿವೃದ್ಧಿ ಕೆಲಸಗಳು ಶುರುವೇ ಆಗಿಲ್ಲ. ಯಾವುದೇ ಹೊಸ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಅನುಷ್ಠಾನ ಮಾಡುತ್ತಿಲ್ಲ ಎಂದು ಟೀಕಿಸಿದರು.

ಸರಕಾರದ ಗ್ಯಾರಂಟಿ ಪರಿಣಾಮವಾಗಿ ಕೆಎಸ್‍ಆರ್‍ಟಿಸಿಗೆ 4,500 ಕೋಟಿ ರೂ. ಕೊಡಬೇಕಿದೆ. ಇನ್ನೂ ಮೂರ್ನಾಲ್ಕು ತಿಂಗಳು ಹೀಗೇ ಮುಂದುವರೆದರೆ ಕೆಎಸ್‍ಆರ್‍ಟಿಸಿ ಬಾಗಿಲು ಮುಚ್ಚಲಿದೆ. ಸಂಬಳ ಕೊಡಲೂ ದುಡ್ಡಿಲ್ಲ. ಮತ್ತೊಂದು ಕಡೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವುದಾಗಿ ತಿಳಿಸಿದ್ದರು. ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಕುಗ್ಗಿ ಹೋಗಿದ್ದು, 14 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿಗಳಿದ್ದರೂ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವುದು ಇರಲಿ; ಅವರ ಗೌರವಧನವನ್ನು 3 ತಿಂಗಳಿಂದ ಪಾವತಿಸಿಲ್ಲ ಎಂದು ಆಕ್ಷೇಪಿಸಿದರು. ಕರ್ನಾಟಕದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾನೂನು- ಸುವ್ಯವಸ್ಥೆ ಹಾಳಾಗಿದೆ ಎಂದು ಗುಡುಗಿದರು.

ಸರಕಾರ ಕಾಲಹರಣ ಮಾಡುತ್ತಿದೆ. ವಾಲ್ಮೀಕಿ ನಿಗಮದಲ್ಲಿ 87 ಕೋಟಿ ಹಗರಣ ನಡೆದ ಕುರಿತು ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ. ಅದೇ ಮಾದರಿಯಲ್ಲಿ ಮುಡಾದ ತಪ್ಪನ್ನೂ ಒಪ್ಪಿಕೊಂಡು, ನ್ಯಾಯಾಲಯದ ಆದೇಶಕ್ಕೆ ಕಾಯದೆ ಕೂಡಲೇ ರಾಜೀನಾಮೆ ಕೊಟ್ಟರೆ ಒಳಿತು ಎಂದು ಕಿವಿಮಾತು ಹೇಳಿದರು.

ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಪಾದಯಾತ್ರೆಯ ಯಶಸ್ಸಿನ ವಿಷಯದಲ್ಲಿ ಮಾಹಿತಿ ಹಂಚಿಕೊಂಡಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರು ಪಾದಯಾತ್ರೆ ಯಶಸ್ಸಿನ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಕಳೆದ ಬಾರಿ 1.05 ಕೋಟಿ ಸದಸ್ಯತ್ವವನ್ನು ನಾವು ನೋಂದಣಿ ಮಾಡಿಸಿದ್ದೆವು. ಈ ಬಾರಿ ಇನ್ನೂ ಹೆಚ್ಚು ಸದಸ್ಯತ್ವ ದಾಖಲಿಸುವ ಕುರಿತು ಕೂಡ ಗಮನ ಸೆಳೆದುದಾಗಿ ಹೇಳಿದರು.

ಅಹಿಂದ ಸಮುದಾಯಗಳಿಗೆ ಅನ್ಯಾಯ:
ವಾಲ್ಮೀಕಿ ನಿಗಮದ ಹಗರಣ ಸಂಬಂಧ ಎಸ್‍ಐಟಿ ರಚಿಸಿ ಕ್ಲೀನ್ ಚಿಟ್ ಕೊಡಿಸುವ ಅಗತ್ಯ ಏನಿತ್ತು? ಸರಕಾರದ ದಲಿತರ ಕಾಳಜಿ ಅಂದರೆ ಇದೇನಾ ಎಂದು ವಿಜಯೇಂದ್ರ ಅವರು ಪ್ರಶ್ನಿಸಿದರು. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಗರಣಕ್ಕೆ ಸಂಬಂಧಿಸಿ ಸಿಬಿಐ, ಇ.ಡಿ. ತನಿಖೆ ನಡೆಯುತ್ತಿವೆ. ಇದೊಂದು ಗಂಭೀರ ಪ್ರಕರಣ. ಲೆಕ್ಕಾಧಿಕಾರಿ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಶಾಸಕರನ್ನು ದೂರವಿಟ್ಟು ಯಾರಿಗೆ ದ್ರೋಹ ಮಾಡುತ್ತಿದ್ದೀರಿ? ಅಹಿಂದ ಸಮುದಾಯಗಳಿಗೆ ಸಿದ್ದರಾಮಯ್ಯನವರು ಅನ್ಯಾಯ ಮಾಡುತ್ತಿದ್ದಾರೆ ಎಂದು ಅವರು ಆಕ್ಷೇಪಿಸಿದರು.

ಹಿಂದೆ ಇದೇ ಸಿದ್ದರಾಮಯ್ಯನವರು ಎಸಿಬಿ ಮೂಲಕ ಕ್ಲೀನ್ ಚಿಟ್ ಪಡೆದುಕೊಂಡ ಇತಿಹಾಸ ಇದೆ ಎಂದ ಅವರು, ರಾಷ್ಟ್ರಮಟ್ಟದಲ್ಲಿ ಸಿದ್ದರಾಮಯ್ಯನವರ ವಿಚಾರದಲ್ಲಿ ಹೋರಾಟ ಮಾಡುವ ಕುರಿತು ರಾಜ್ಯದ ನಾಯಕರ ಕೆಲವು ಸಲಹೆಗಳಿದ್ದು, ಅದರ ಬಗ್ಗೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಪಕ್ಷದ ವರಿಷ್ಠರು ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ. ಯತ್ನಾಳ್ ಅಥವಾ ಇನ್ಯಾರದೋ ವಿರುದ್ಧ ದೆಹಲಿಯಲ್ಲಿ ದೂರು ಕೊಡಲು ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿಲ್ಲ; ಸಂಘಟನೆ ಬಲಪಡಿಸಲು, ಬಿಜೆಪಿ ಸ್ಪಷ್ಟ ಬಹುಮತ ಪಡೆಯಲು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ. ಯತ್ನಾಳ್ ಅವರ ಕುರಿತು ಇಲ್ಲಿ ನಾನು ಪ್ರಸ್ತಾಪಿಸಿಲ್ಲ; ಅದರ ಅವಶ್ಯಕತೆಯೂ ನನಗಿಲ್ಲ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಇದನ್ನೂ ಓದಿ: ಮಧುಮೇಹಿಗಳು ಖಾಲಿ ಹೊಟ್ಟೆಗೆ ಒಂದು ಸ್ಪೂನ್‌ ಇದನ್ನು ತಿನ್ನಿ.. ದಿನವಿಡೀ ಬ್ಲಡ್‌ ಶುಗರ್ ನಿಯಂತ್ರಣದಲ್ಲಿರುತ್ತೆ!‌

ಪಕ್ಷದ ಬೆಳವಣಿಗೆಗೆ ಪೂರಕ ಇದ್ದರೆ, ರಾಷ್ಟ್ರೀಯ ನಾಯಕರ ಒಪ್ಪಿಗೆ ಇದ್ದರೆ ಇನ್ನೊಂದು ಪಾದಯಾತ್ರೆ ಮಾಡಬಹುದು ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷಕ್ಕೆ ಬಲ ತುಂಬಲಿದ್ದೇನೆ ಎಂದು ಅವರು ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News