ಬಿಜೆಪಿಯ ಕೋರ್ ಕಮಿಟಿ ಸಭೆ - ಕೆ.ಎಸ್. ಈಶ್ವರಪ್ಪ ಗೈರು

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ.

Last Updated : Oct 13, 2017, 05:31 PM IST
ಬಿಜೆಪಿಯ ಕೋರ್ ಕಮಿಟಿ ಸಭೆ - ಕೆ.ಎಸ್. ಈಶ್ವರಪ್ಪ ಗೈರು title=

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ಚುನಾವಣೆ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ನೇತೃತ್ವದಲ್ಲಿ ಇಂದು ಬಿಜೆಪಿ ಕೋರ್ ಕಮಿಟಿ ಸಭೆ ಕರೆಯಲಾಗಿತ್ತು. ಆದರೆ ಈ ಸಭೆಗೆ ಕೆ.ಎಸ್.ಈಶ್ವರಪ್ಪ ಗೈರಾಗಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಕೇಂದ್ರ ಸಚಿವರಾದ ಸದಾನಂದಗೌಡ, ಅನಂತ್ ಕುಮಾರ್, ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಆರ್. ಅಶೋಕ್, ಅರವಿಂದ ಲಿಂಬಾವಳಿ, ಗೋವಿಂದ ಕಾರಜೋಳ ಮತ್ತಿತರ ನಾಯಕರು ಭಾಗಿಯಾಗಿದ್ದರು.

ಸಭೆಗೆ ಗೈರಾಗಿರುವ ಕೆ.ಎಸ್.ಈಶ್ವರಪ್ಪ, ಪೂರ್ವ ನಿಯೋಜಿತ ಕಾರ್ಯಕ್ರಮ ಪ್ರಯುಕ್ತ ಶಿವಮೊಗ್ಗಕ್ಕೆ ತೆರೆಳಿದ್ದಾರೆ ಎಂದು ತಿಳಿದು ಬಂದಿದೆ. 

Trending News