"ಬಿಜೆಪಿಯವರು ಎಂದಿಗೂ ಸಂವಿಧಾನದ ಪರವಾಗಿ ನಿಂತವರಲ್ಲ"-ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆಯನ್ನು ರೂಪಿಸಿ ಜಾರಿಗೆ ತಂದವರು ನಾವು, ಬಡ್ತಿಯಲ್ಲಿ ಮೀಸಲಾತಿ ಜಾರಿ ಮಾಡಿದವರು ನಾವು, ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲು ಅಳವಡಿಕೆ ಮಾಡಿದವರು ನಾವು. ಸಂವಿಧಾನ ಮತ್ತು ಬಾಬಾ ಸಾಹೇಬರ ಆಶಯಗಳನ್ನೇ ಮಾದರಿಯಾಗಿಟ್ಟುಕೊಂಡು ನಡೆಯುತ್ತಿರುವ ನನಗೆ ಸಂವಿಧಾನ ವಿರೋಧಿಯಾದ ಬಿಜೆಪಿ ಸಾಮಾಜಿಕ ನ್ಯಾಯದ ಪಾಠ ಮಾಡಲು ಬರುತ್ತಿದೆ ಎಂದು ಕಿಡಿ ಕಾರಿದರು.

Written by - Manjunath N | Last Updated : Jul 20, 2024, 04:27 PM IST
  • ರಾಜ್ಯದಲ್ಲಿ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆಯನ್ನು ರೂಪಿಸಿ ಜಾರಿಗೆ ತಂದವರು ನಾವು, ಬಡ್ತಿಯಲ್ಲಿ ಮೀಸಲಾತಿ ಜಾರಿ ಮಾಡಿದವರು ನಾವು,
  • ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲು ಅಳವಡಿಕೆ ಮಾಡಿದವರು ನಾವು.
  • ನನಗೆ ಸಂವಿಧಾನ ವಿರೋಧಿಯಾದ ಬಿಜೆಪಿ ಸಾಮಾಜಿಕ ನ್ಯಾಯದ ಪಾಠ ಮಾಡಲು ಬರುತ್ತಿದೆ ಎಂದು ಕಿಡಿ ಕಾರಿದರು.
"ಬಿಜೆಪಿಯವರು ಎಂದಿಗೂ ಸಂವಿಧಾನದ ಪರವಾಗಿ ನಿಂತವರಲ್ಲ"-ಸಿಎಂ ಸಿದ್ದರಾಮಯ್ಯ title=
file photo

ಬೆಂಗಳೂರು: ಎಂದಿಗೂ ಸಂವಿಧಾನದ ಪರವಾಗಿ ನಿಂತವರಲ್ಲ. ಅವರ ಪಕ್ಷ ಹುಟ್ಟಿನಿಂದಲೇ ಈ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಒಕ್ಕೂಟ ವ್ಯವಸ್ಥೆಯ ವಿರೋಧಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ.

ರಾಜ್ಯದಲ್ಲಿ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆಯನ್ನು ರೂಪಿಸಿ ಜಾರಿಗೆ ತಂದವರು ನಾವು, ಬಡ್ತಿಯಲ್ಲಿ ಮೀಸಲಾತಿ ಜಾರಿ ಮಾಡಿದವರು ನಾವು, ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲು ಅಳವಡಿಕೆ ಮಾಡಿದವರು ನಾವು. ಸಂವಿಧಾನ ಮತ್ತು ಬಾಬಾ ಸಾಹೇಬರ ಆಶಯಗಳನ್ನೇ ಮಾದರಿಯಾಗಿಟ್ಟುಕೊಂಡು ನಡೆಯುತ್ತಿರುವ ನನಗೆ ಸಂವಿಧಾನ ವಿರೋಧಿಯಾದ ಬಿಜೆಪಿ ಸಾಮಾಜಿಕ ನ್ಯಾಯದ ಪಾಠ ಮಾಡಲು ಬರುತ್ತಿದೆ ಎಂದು ಕಿಡಿ ಕಾರಿದರು.

ವರುಣನ ಕೃಪೆಯಿಂದ ಕೋರ್ಟ್ ಆದೇಶ ಪಾಲನೆ, ರೈತರ ಹಿತ ರಕ್ಷಣೆ ಸಾಧ್ಯವಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷ ಸಿಬಿಐ ಹಾಗೂ ಇಡಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು, ರಾಜಕೀಯ ವಿರೋಧಿಗಳನ್ನು ಮುಗಿಸಲು ಹೊರಟಿದೆ. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಹತ್ತಾರು ಹಗರಣಗಳು ನಡೆದಾಗ ಒಂದನ್ನದ್ರೂ ಇಡಿ ಅವರು ಸ್ವಯಂ ಪ್ರೇರಣೆಯಿಂದ ದೂರು ದಾಖಲು ಮಾಡಿಕೊಂಡು ತನಿಖೆ ನಡೆಸಿದ್ದರೇ? ಮತ್ತೆ ಈಗೇಕೆ ಇಡಿ ಅವರು ತನಿಖೆಗೆ ಬಂದಿದ್ದಾರೆ? ಇದರ ಹಿಂದೆ ಯಾರಿದ್ದಾರೆ? ಅವರ ಉದ್ದೇಶವೇನು ಎಂಬುದನ್ನು ಅರ್ಥೈಸಿಕೊಳ್ಳದಷ್ಟು ನಾವು ಮೂರ್ಖರಲ್ಲ ಎಂದು ಅವರು ಕುಟುಕಿದರು.

ಬಿಜೆಪಿಯವರು ದೇಶದ ಪ್ರಜಾಪ್ರಭುತ್ವ, ಸಂವಿಧಾನದ ಆಶಯಗಳನ್ನು ಕೊಲ್ಲುತ್ತಿದ್ದಾರೆ. ಜನರಿಂದ ಆಯ್ಕೆಯಾದ ಸರ್ಕಾರಗಳನ್ನು ಅಸ್ಥಿರಗೊಳಿಸುವ ಬಿಜೆಪಿಯ ಹುನ್ನಾರಕ್ಕೆ ಜನರೇ ತಕ್ಕ ಉತ್ತರ ನೀಡುತ್ತಾರೆ ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News