ಕಾವೇರಿ ವಿಚಾರದಲ್ಲಿ ಬಿಜೆಪಿ ಜೆಡಿಎಸ್ ರಾಜಕಾರಣ ಮಾಡುತ್ತಿದೆ-ಜನರ ಹಿತದೃಷ್ಟಿಯಿಂದ ಅಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯಸರ್ಕಾರ ಪರಿಹಾರ ಸೂತ್ರ ಕೋರಿ ಬರೆದಿರುವ ಪತ್ರಕ್ಕೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಬಿಜೆಪಿಯವರ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ, ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು ಎಂದರು.

Written by - Yashaswini V | Last Updated : Sep 26, 2023, 02:18 PM IST
  • ಕಾವೇರಿ ನೀರು ನಿಯಂತ್ರಣ ಮಂಡಳಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಮುಂದೆ ಸಂಕಷ್ಟ ಸೂತ್ರ ರೂಪಿಸಲು ನಾವು ಒತ್ತಡ ಹೇರುತ್ತಿದ್ದೇವೆ.
  • ಏಕೆಂದರೆ ಮಳೆ ಕೈಕೊಟ್ಟ ಸಂದರ್ಭದಲ್ಲಿ ಎರಡೂ ಕಡೆ ಸಂಕಷ್ಟ ಶುರುವಾಗುತ್ತದೆ.
  • ಅಂಥ ಸಂದರ್ಭದಲ್ಲಿ ನಾವು ಸಂಕಷ್ಟ ಹಂಚಿಕೊಳ್ಳಬೇಕು ಎಂದು ಸಿಎಂ ತಿಳಿಸಿದರು.
ಕಾವೇರಿ ವಿಚಾರದಲ್ಲಿ ಬಿಜೆಪಿ ಜೆಡಿಎಸ್ ರಾಜಕಾರಣ ಮಾಡುತ್ತಿದೆ-ಜನರ ಹಿತದೃಷ್ಟಿಯಿಂದ ಅಲ್ಲ: ಸಿಎಂ ಸಿದ್ದರಾಮಯ್ಯ title=

Cauvery Water Dispute: ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯ ಗೊಳಿಸುತ್ತಿರುವುದು ರಾಜಕಾರಣಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. 

ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಂದ್ ಮಾಡಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅವಕಾಶವಿದೆ. ಆದರೆ ನ್ಯಾಯಾಲಯ ಯಾವುದೇ ಸಭೆ, ಮೆರವಣಿಗೆಯನ್ನು ನಡೆಸಬಾರದು, ಪ್ರತಿಭಟನೆ ಮಾಡಬಾರದು ಎಂದು ಹೇಳಿದೆ. ನಾವು ನಮ್ಮ ಮೂಲಭೂತ  ಹಕ್ಕುಗಳನ್ನು ಚಲಾಯಿಸುವಾಗ ಇತರರ ಮೂಲಭೂತ ಹಕ್ಕುಗಳನ್ನು ಕೂಡ ಗಮನದಲ್ಲಿರಿಸಿಕೊಳ್ಳಬೇಕು ಎಂದರು. 

144 ಸೆಕ್ಷನ್ ಜಾರಿ: 
ಜನರು ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು, ಜನರಿಗೆ ತೊಂದರೆಯಾಗಬಾರದೆಂದು 144 ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯದ ಹಾಗೂ ಜನತೆಯ ಹಿತದೃಷ್ಟಿಯಿಂದ ಈ ಆದೇಶ ಮಾಡಲಾಗಿದೆ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು. 

ಬಿಜೆಪಿ ವತಿಯಿಂದ ಚಡ್ಡಿ ಮೆರವಣಿಗೆ: 
ಬಿಜೆಪಿ ಯವರನ್ನು ಮೊದಲು ಚಡ್ಡಿಗಳು ಎಂದೇ ಕರೆಯಲಾಗುತ್ತಿತ್ತು. ಪ್ರತಿಭಟನೆಗೆ ನಮ್ಮ ತಕರಾರಿಲ್ಲ. ಆದರೆ ರಾಜಕೀಯ ಲಾಭಕ್ಕಾಗಿ ವಿಷಯವನ್ನು ರಾಜಕಾರಣ ಮಾಡಬಾರದು ಎಂದರು. 

ಇದನ್ನೂ ಓದಿ- ಕಾವೇರಿ ಕಿಚ್ಚು: ಇಂದು ಬೆಂಗಳೂರು ಬಂದ್- ಏನಿರುತ್ತೆ? ಏನಿರಲ್ಲ?

ಸರ್ಕಾರ ವಿಫಲವಾಗಿದೆ ಎನ್ನುವುದು ರಾಜಕಾರಣ!
ರಾಜ್ಯ ಕಾಂಗ್ರೆಸ್ ಡಿಎಂಕೆ ಬಿ ಟೀಮ್ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಡಿಎಂಕೆ ತಮಿಳುನಾಡಿನವರು. ಬಿಜೆಪಿ ಎಐಎಡಿಎಂಕೆ ಜೊತೆಗಿತ್ತು. ಅವರನ್ನು ಏನೆಂದು ಹೇಳಬೇಕು ಎಂದು ಪ್ರಶ್ನಿಸಿದರು. ರಾಜಕಾರಣಕ್ಕೆ ಏನೇನೋ ಹೇಳಬಾರದು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿಗಳಿಗೆ ಪತ್ರ ಬರೆದಿರುವುದು ಸಂತೋಷದ  ವಿಷಯ. ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ರಾಜಕಾರಣ ಎಂದರು. 

ರಾಜ್ಯದ ರೈತರ ಹಾಗೂ ರಾಜ್ಯದ ಹಿತರಕ್ಷಣೆಗೆ ಯಾವತ್ತೂ ಹಿಂದೆ ಬಿದ್ದಿಲ್ಲ:
ರಾಜ್ಯ ಸರ್ಕಾರ ಈ ರಾಜ್ಯದ ರೈತರ ಹಾಗೂ ರಾಜ್ಯದ ಹಿತರಕ್ಷಣೆಗೆ ಯಾವತ್ತೂ ಹಿಂದೆ ಬಿದ್ದಿಲ್ಲ, ಬೀಳುವುದೂ ಇಲ್ಲ. ನಮಗೆ ಅಧಿಕಾರ ಮುಖ್ಯವಲ್ಲ. ರಾಜ್ಯದ ಜನರ ಹಿತ ಮುಖ್ಯ. ಇದರಲ್ಲಿ ನಾವು ಬಲವಾದ ನಂಬಿಕೆ ಇಟ್ಟುಕೊಂಡಿರುವವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಬಿಜೆಪಿ ವಿರುದ್ಧ ಧ್ರುವೀಕರಣವಾಗಿಟ್ಟಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ದೇಶದಲ್ಲಿ ಬಿಜೆಪಿ ವಿರುದ್ಧ ವಾದ ಶಕ್ತಿಗಳು ಒಂದುಗೂಡುತ್ತಿವೆ. ಎಐಎಡಿಎಂಕೆ ಹೊರಗೆ ಬರುತ್ತಿದ್ದಾರೆ, ಮತ್ತೊಂದೆಡೆ ಜಿಡಿಎಸ್ ನಿಂದ ಮುಸ್ಲಿಂ ರು ಹೊರಗೆ ಬರುತ್ತಿದ್ದು,  ಇಡೀ ದೇಶದಲ್ಲಿ ಬಿಜೆಪಿ ವಿರುದ್ಧ ವಾದ ಶಕ್ತಿಗಳು ಒಂದುಗೂಡುವ ಕೆಲಸವಾಗುತ್ತಿದೆ. ಏಕೆಂದರೆ ಬಿಜೆಪಿ ಕಳೆದ 9 ವರ್ಷಗಳಲ್ಲಿ ನುಡಿದಂತೆ ನಡೆದಿಲ್ಲ. ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದಾರೆ. ಅದಕ್ಕಾಗಿ ಈ ಸತ್ಯ ಗೊತ್ತಾದ ಮೇಲೆ ಅನೇಕ ಶಕ್ತಿಗಳು ಒಂದಾಗಿ ಬಿಜೆಪಿಯೇತರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ ಎಂದರು. 

ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಬಗ್ಗೆ ಮಾತನಾಡಿ, ಯಾವ ಬಂದ್ ಬೇಕಾದರೂ ಮಾಡಲಿ ಆದರೆ ಬಂದ್, ಮೆರವಣಿಗೆ, ಪ್ರತಿಭಟನೆ ಮಾಡಬಾರದು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶ ಮಾಡಿದೆ. ನಾವೇನು ಅಡ್ಡಿಪಡಿಸಲು ಹೋಗುವುದಿಲ್ಲ ಎಂದು ಹೇಳಿದರು. 

ಇದನ್ನೂ ಓದಿ- ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ : ʼಕಾವೇರಿʼ ಬಂದ್‌ ಹಿನ್ನೆಲೆ ‌ಹೈಅಲರ್ಟ್ ಘೋಷಣೆ

ಸಂಕಷ್ಟ ಪರಿಹಾರ  ಸೂತ್ರ ರೂಪಿಸಲು  ಒತ್ತಡ!
ಕಾವೇರಿ ನೀರು ನಿಯಂತ್ರಣ ಮಂಡಳಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಮುಂದೆ ಸಂಕಷ್ಟ ಸೂತ್ರ ರೂಪಿಸಲು ನಾವು ಒತ್ತಡ ಹೇರುತ್ತಿದ್ದೇವೆ. ಏಕೆಂದರೆ ಮಳೆ ಕೈಕೊಟ್ಟ ಸಂದರ್ಭದಲ್ಲಿ ಎರಡೂ ಕಡೆ ಸಂಕಷ್ಟ ಶುರುವಾಗುತ್ತದೆ. ಅಂಥ ಸಂದರ್ಭದಲ್ಲಿ ನಾವು ಸಂಕಷ್ಟ ಹಂಚಿಕೊಳ್ಳಬೇಕು ಎಂದು ಸಿಎಂ ತಿಳಿಸಿದರು. 

ಮೇಕೆದಾಟು ಜಲಾಶಯದಿಂದ ಪರಿಹಾರ :
ಇಂತಹ ಸನ್ನಿವೇಶದಲ್ಲಿ ನೀರು ಹಂಚಿಕೆಯ ವಿಚಾರದಲ್ಲಿ ಸಂಕಷ್ಟ ಸೂತ್ರವಿರಬೇಕು. ಮತ್ತೊಂದು ಪರಿಹಾರವೆಂದರೆ, ಮೇಕೆದಾಟು ಜಲಾಶಯವಿದ್ದಿದ್ದರೆ  67 ಟಿಎಂಸಿ ನೀರು ಇರುತ್ತಿದ್ದು, ಅಲ್ಲಿ ನೀರಿದ್ದರೆ ತಮಿಳುನಾಡಿಗೆ ನೀರು ಬಿಡಲು ಅನುಕೂಲವಾಗುತ್ತಿತ್ತು. ಈ ಜಲಾಶಯದಿಂದ ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೆ ಅನುಕೂಲವಾಗುತ್ತಿತ್ತು ಎಂದು ಅಭಿಪ್ರಾಯಪಟ್ಟರು.

ಬರಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ :
ಕೇಂದ್ರದಿಂದ ಬರಪರಿಹಾರದ ಬಗ್ಗೆ ಪ್ರತಿಕ್ರಿಯೆ ನೀಡಿ, ಬರಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಸಚಿವರುಗಳನ್ನು ರಾಜ್ಯದ ಸಚಿವರು ಭೇಟಿಯಾಗುತ್ತಲಿದ್ದು, ಇದರ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ರಾಜ್ಯದ ಸಂಸದರು ಕಾವೇರಿ ವಿವಾದ ಪರಿಹಾರಕ್ಕೆ ಪ್ರಯತ್ನಿಸಬೇಕು :
ಕೇಂದ್ರದ ತಜ್ಞರು ರಾಜ್ಯದಲ್ಲಿ ಕಾವೇರಿ ನೀರಿನ ಲಭ್ಯತೆ ಬಗ್ಗೆ ವಾಸ್ತವವಾಗಿ ಪರಿಶೀಲಿಸುವ ಬಗ್ಗೆ ಸಕಾರಾತ್ಮಕ ಸೂಚನೆ ಬಂದಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ನಾನು ಈ ಬಗ್ಗೆ ಕೇಂದ್ರಕ್ಕೆ ಬರೆಯಲಾಗಿದೆ. ಜನತಾದಳದ ವರಿಷ್ಠರಾದ ಶ್ರೀ ದೇವೇಗೌಡರು, ಈ ಬಗ್ಗೆ ಭೇಟಿಯಾಗಿದ್ದು, ಕೇಂದ್ರದೊಂದಿಗೆ ಅವರ ಈ ಹೊಸ ಸ್ನೇಹದಿಂದ ಪರಿಹಾರ ದೊರೆಯಬಹುದೇ ನೋಡೋಣ. ರಾಜ್ಯಸರ್ಕಾರ ಪರಿಹಾರ ಸೂತ್ರ ಕೋರಿ ಬರೆದಿರುವ ಪತ್ರಕ್ಕೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಬಿಜೆಪಿಯವರ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ, ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು ಎಂದರು.

ಇದನ್ನೂ ಓದಿ- ಕಾವೇರಿ ವಿವಾದ: ಕೇಂದ್ರ ಸರಕಾರ ಪರಿಣತರ ತಂಡ ಕಳಿಸಲಿ: ಸಚಿವ ಎಂ.ಬಿ. ಪಾಟೀಲ

ಕಾವೇರಿ ವಿವಾದದ ಇತ್ಯರ್ಥಕ್ಕೆ ಪ್ರಧಾನಮಂತ್ರಿಗಳ ಮಧ್ಯಸ್ಥಿಕೆ ಅಗತ್ಯ :
ಕಾವೇರಿ ವಿವಾದದ ವಿಷಯವಾಗಿ ನ್ಯಾಯಾಲಯದ ಹೊರಗೆ ಇತ್ಯರ್ಥಗೊಳಿಸಿಕೊಳ್ಳಲು ಸಿದ್ಧವಿದೆಯೆ ಎಂಬುದಕ್ಕೆ ಉತ್ತರಿಸಿ, ಸಾಮಾನ್ಯ ವರ್ಷಗಳಲ್ಲಿ ತಮಿಳುನಾಡಿಗೆ ನೀರು ಬಿಡಬೇಕಾದ ಪ್ರಮಾಣದ ಬಗ್ಗೆ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಆದರೆ ಸಂಕಷ್ಟದ ಸಮಯದಲ್ಲಿ ಆ ರಾಜ್ಯಕ್ಕೆ ನೀರು ಬಿಡುವ ಪ್ರಮಾಣ ತಿಳಿಸುವ ಸಂಕಷ್ಟ ಸೂತ್ರ ಇನ್ನೂ ನಿರ್ಧಾರವಾಗಿಲ್ಲ. ಇಂತಹ ಸಂದರ್ಭದಲ್ಲಿ ಒಂದು ಸೌಹಾರ್ಧ ಇತ್ಯರ್ಥಕ್ಕೆ ಬರುವುದೇ ಉತ್ತಮ. ಆದ್ದರಿಂದ ಕಾವೇರಿ ವಿವಾದಕ್ಕೆ ಇತ್ಯರ್ಥಕ್ಕೆ ಪ್ರಧಾನಮಂತ್ರಿಗಳು ಮಧ್ಯಸ್ಥಿಕೆ ವಹಿಸಬೇಕು ಎಂದರು.

ರಾಜ್ಯದಿಂದ ಸಮರ್ಥ ವಾದ ಮಂಡನೆ :
ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು, ರಾಜ್ಯ ಸರ್ಕಾರ ಕಾವೇರಿ ಬಗ್ಗೆ ವಾದವನ್ನು ಸಮರ್ಥವಾಗಿ ಮಂಡಿಸಿಲ್ಲ ಎಂಬ ಟೀಕೆಗೆ ಉತ್ತರಿಸುತ್ತಾ, ಕಾವೇರಿ ವಿಷಯದ ವಾದಮಂಡನೆಗೆ ಮೊದಲಿನಿಂದಲೂ ಇರುವ ಕಾನೂನೂ ತಂಡವೇ ಈಗಲೂ ಇದ್ದು, ಎಲ್ಲ ಪಕ್ಷದ ಸರ್ಕಾರದ ಅವಧಿಯಲ್ಲಿ ಇದ್ದ ತಂಡವೇ ಆಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ  ವಾಸ್ತವ ಪರಿಸ್ಥಿತಿಯ ಬಗ್ಗೆ ಸಮರ್ಥವಾಗಿ ವಾದ ಮಂಡಿಸಿದರೂ ಕೂಡ 5000 ಕ್ಯೂಸೆಕ್ಸ್ ನೀರು ಬಿಡಲು ಸೂಚಿಸಿದ್ದಾರೆ. ಇಂದು ಪುನ: ಕಾವೇರಿ ವಿವಾದದ ವಿಚಾರಣೆ ಇದ್ದು, ರಾಜ್ಯ ಸರ್ಕಾರ ಸಮರ್ಥ ವಾದಮಂಡನೆ ಮಾಡಲಿದೆ ಎಂದು ಹೇಳಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=q9auZ2eqeZo

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News