ಪ್ರಧಾನಿ ಮೋದಿ ಟೀಕಿಸಿದ್ದ ಸಿಎಂ ಸಿದ್ದರಾಮಯ್ಯಗೆ ಬಸವರಾಜ್ ಬೊಮ್ಮಾಯಿ ತಿರುಗೇಟು!

ಅಪ್ಪಟ ದೇಶಭಕ್ತ  ಪ್ರಧಾನಿ ಮೋದಿ ಭಾರತದ ಇತಿಹಾಸದಲ್ಲಿ ದಾಖಲೆಯ ಅಭಿವೃದ್ಧಿಯನ್ನು ಮಾಡಿದ್ದು, ಅವರ ಬಗ್ಗೆ ಗಾಢ ನಿದ್ರೆ ಎಂದು ಮಾತನಾಡುವ ಸಿದ್ದರಾಮಯ್ಯನವರು ತಮ್ಮ ಗಾಢ ನಿದ್ರೆಯಿಂದ ಈಗ ಎಚ್ಚೆತ್ತುಕೊಂಡಂತೆ ಕಾಣಿಸುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಟೀಕಿಸಿದ್ದಾರೆ.

Written by - Puttaraj K Alur | Last Updated : Jan 17, 2024, 04:21 PM IST
  • ಅಪ್ಪಟ ದೇಶಭಕ್ತ ಪ್ರಧಾನಿ ಮೋದಿ ಭಾರತದ ಇತಿಹಾಸದಲ್ಲಿ ದಾಖಲೆಯ ಅಭಿವೃದ್ಧಿ ಮಾಡಿದ್ದಾರೆ
  • ಸಿದ್ದರಾಮಯ್ಯನವರು ತಮ್ಮ ಗಾಢ ನಿದ್ರೆಯಿಂದ ಈಗ ಎಚ್ಚೆತ್ತುಕೊಂಡಂತೆ ಕಾಣಿಸುತ್ತದೆ
  • ಪ್ರಧಾನಿ ಮೋದಿ ವಿರುದ್ಧ ಟೀಕಿಸಿದ್ದ ಸಿಎಂ ಸಿದ್ದರಾಮಯ್ಯಗೆ ಬಸವರಾಜ್ ಬೊಮ್ಮಾಯಿ ತಿರುಗೇಟು
ಪ್ರಧಾನಿ ಮೋದಿ ಟೀಕಿಸಿದ್ದ ಸಿಎಂ ಸಿದ್ದರಾಮಯ್ಯಗೆ ಬಸವರಾಜ್ ಬೊಮ್ಮಾಯಿ ತಿರುಗೇಟು! title=
ಸಿದ್ದರಾಮಯ್ಯಗೆ ಬೊಮ್ಮಾಯಿ ತಿರುಗೇಟು!

ಬೆಂಗಳೂರು: ಬರ ಪರಿಹಾರ ಮತ್ತು GST ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಟೀಕಿಸಿದ್ದ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ದಿನಕ್ಕೆ 18 ಗಂಟೆ ದೇಶಕ್ಕಾಗಿ ಕೆಲಸ‌ ಮಾಡುವ ಒಂಭತ್ತುವರೆ ವರ್ಷದಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೆ ಕಠಿಣ ಪರಿಶ್ರಮಿ, ಅಪ್ಪಟ ದೇಶಭಕ್ತ ನಮ್ಮ ಪ್ರಧಾನಿ ಮೋದಿಯವರು ಭಾರತದ ಇತಿಹಾಸದಲ್ಲಿ ದಾಖಲೆಯ ಅಭಿವೃದ್ಧಿಯನ್ನು ಮಾಡಿದ್ದು, ಅವರ ಬಗ್ಗೆ ಗಾಢ ನಿದ್ರೆ ಎಂದು ಮಾತನಾಡುವ ಸಿದ್ದರಾಮಯ್ಯನವರು ತಮ್ಮ ಗಾಢ ನಿದ್ರೆಯಿಂದ ಈಗ ಎಚ್ಚೆತ್ತುಕೊಂಡಂತೆ ಕಾಣಿಸುತ್ತದೆ ಎಂದು ಟೀಕಿಸಿದ್ದಾರೆ.

1) ಯುಪಿಎ 2004-2014ರ 10 ವರ್ಷದ ಆಡಳಿತದಲ್ಲಿ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ 81,795.19 ಕೋಟಿ ರೂ. ಹಾಗೂ ಅನುದಾನ ಹಂಚಿಕೆ  ರೂಪದಲ್ಲಿ 60779.84 ಕೋಟಿ ರೂ. ಹಣ ಬಂದರೆ. ಪ್ರಧಾನಿ ಮೋದಿ ಅವಧಿಯಲ್ಲಿ 2014-2023 ಡಿಸೆಂಬರ್‍ವರೆಗೆ ತೆರಿಗೆ ಹಂಚಿಕೆಯಲ್ಲಿ 2,82,791 ಕೋಟಿ ರೂ. ಬಂದರೆ, ಅನುದಾನ ಹಂಚಿಕೆಯಲ್ಲಿ 2,08,882.02 ಕೋಟಿ ರೂ. ಬಂದಂತಹ ಹಣ ಇವರ ಕಣ್ಣಿಗೆ ಕಾಣುತ್ತಿಲ್ಲ.

ಇದನ್ನೂ ಓದಿ: ಪ್ರಮಾಣಪತ್ರ ಸಲ್ಲಿಸುವಾಗ ಕ್ರಿಮಿನಲ್‌ ಕೇಸ್‌ಗಳ ಮಾಹಿತಿ ನೀಡಬೇಕು: ಹೈಕೋರ್ಟ್

ಮೇ ತಿಂಗಳಲ್ಲಿ 360 ಕೋಟಿ ರೂ. ಬಿಡುಗಡೆಯಾಗಿದ್ದು, ಈಗ ಮತ್ತೆ 348 ಕೋಟಿ ರೂ. ಬಿಡುಗಡೆಗೆ ತೀರ್ಮಾನಿಸಿದೆ. ಇಷ್ಟಾದರೂ ಕೂಡ ರೈತರಿಗೆ ಬಿಡಿಗಾಸು ಕೊಡಲು ಸಾಧ್ಯವಾಗಿಲ್ಲ. ಪೂರ್ಣ ಪ್ರಮಾಣದಲ್ಲಿ ಪರಿಹಾರ ಕೊಡಲು ನಿಮ್ಮ ಬೊಕ್ಕಸ ಖಾಲಿಯಾಗಿದೆಯೇ? ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ.

2) ಕೃಷ್ಣಾ ಮೆಲ್ದಂಡೆ ಹಾಗೂ ಮಹಾದಾಯಿ ಎರಡೂ ಸುಪ್ರೀಂಕೋರ್ಟ್‍ನಲ್ಲಿ ವ್ಯಾಜ್ಯ ಇರುವುದು ಗೊತ್ತಿದ್ದರೂ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂಡಿಸುವ ರಾಜಕಾರಣ ಏಕೆ? ಈ ವರ್ಷ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೊಟಿ ರೂ. ಕೇಂದ್ರದ ಬಜೆಟ್‍ನಲ್ಲಿದ್ದು ಅದನ್ನು ಪಡೆದುಕೊಳ್ಳಲಾಗದೇ ಗಾಢ ನಿದ್ರೆಯಲ್ಲಿದ್ದವರಾರು? ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ.

3) ಕಳೆದ 5 ವರ್ಷದಲ್ಲಿ 30 ಸಾವಿರ ಕೋಟಿ ರೂ. ರಾಷ್ಟ್ರೀಯ ಹೆದ್ದಾರಿಗೆ ಪ್ರಧಾನಿ ಮೋದಿ ಸರ್ಕಾರ ಹಣ ಒದಗಿಸಿದೆ. ನೀವು ಓಡಾಡುವ ಬೆಂಗಳೂರು ಮೈಸೂರು ಹೈವೆ ನಿರ್ಮಾಣದ ಸಂಪೂರ್ಣ ವೆಚ್ಚ ಮೋದಿ ಸರ್ಕಾರ ಒದಗಿಸಿರುವುದು ನಿಮ್ಮ ಅನುಭವಕ್ಕೆ ಬಂದಿಲ್ಲವೇ? ಸ್ಮಾರ್ಟ್‍ಸಿಟಿ ಯೋಜನೆ ಅಡಿಯಲ್ಲಿ 1327.43 ಕೋಟಿ ರೂ. ಬಿಡುಗಡೆಯಾಗಿದೆ. ಇದೇ ರೀತಿ ರೈಲ್ವೆ, ಬಂದರು, ಅಭಿವೃದ್ಧಿಗೆ ಮೋದಿಯ ಪಾಲು ನಿಮಗೆ ಕಾಣುತ್ತಿಲ್ಲವೇ? ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಕಲಿ ಮೈಸೂರ್ ಸ್ಯಾಂಡಲ್ ಸೋಪ್ ತಯಾರಿಕರ ಜತೆ ಬಿಜೆಪಿ ನಂಟು: ಪ್ರಿಯಾಂಕ್ ಖರ್ಗೆ ಆರೋಪ

ಕಿಸಾನ್ ಸಮ್ಮಾನ್ ಯೋಜನೆಯಲ್ಲಿ 10,990 ಕೋಟಿ ರೂ., ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ 62 ಲಕ್ಷ  ಜನರಿಗೆ ಆರೋಗ್ಯದ ಚಿಕಿತ್ಸೆ ಕೊಟ್ಟಿರುವ ಮೋದಿಯವರ ನಿರಂತರ ಪರಿಶ್ರಮ ಹಾಗೂ ಕ್ರಿಯಾಶೀಲತೆಗೆ ಸಾಕ್ಷಿ. ಕೊರೊನಾ ಸಂದರ್ಭದಲ್ಲಿ ರಾಜ್ಯದಲ್ಲಿ 10 ಕೋಟಿ ರೂ. ಡೋಸ್ ಲಸಿಕೆ ಹಾಕಿಸಿದ್ದು ನಿದ್ರೆಯಲ್ಲಿರುವ ನಿಮಗೆಲ್ಲಿ ಕಾಣಿಸುತ್ತದೆ. ಕರ್ನಾಟಕವನ್ನು ಅಭಿವೃದ್ಧಿ ಶೂನ್ಯ ಮಾಡಿ ಅಧೊಗತಿಗೆ ತೆಗೆದುಕೊಂಡು ಹೋಗಿರುವ ನೀವು ನಿದ್ರೆಯಿಂದ ಇನ್ನೂ ಎಚ್ಚೆತ್ತುಕೊಳ್ಳದಿರುವುದೇ ಕರ್ನಾಟಕ ಜನರ ದೌರ್ಭಾಗ್ಯವೆಂದು ಬೊಮ್ಮಾಯಿ ಕಿಡಿಕಾರಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News