Mandya BJP : ಬಿಜೆಪಿ ನಾಯಕರ ದಿಢೀರ್ ಸಭೆ : ಕಮಲ ಸೇರ್ತಾರಾ ಸಂಸದೆ ಸುಮಲತಾ?

ಅಂದು ನಡೆಯುವ ಸಭೆಯಲ್ಲಿ ನಾಯಕರ ದಂಡೊಂದು ಬಿಜೆಪಿ ಸೇರಲಿದೆ. ಅಂದು ಬೃಹತ್ ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ

Written by - Zee Kannada News Desk | Last Updated : Apr 27, 2022, 05:55 PM IST
  • ಸಕ್ಕರೆ ನಾಡು ಮಂಡ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ
  • ಸಚಿವ ಕೆ. ಗೋಪಾಲಯ್ಯ, ಸಚಿವ ನಾರಾಯಣಗೌಡ ಅಧ್ಯಕ್ಷತೆಯಲ್ಲಿ ಕಚೇರಿಯಲ್ಲಿ ಗೌಪ್ಯ ಸಭೆ
  • ಬೃಹತ್ ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಾರೆ
Mandya BJP : ಬಿಜೆಪಿ ನಾಯಕರ ದಿಢೀರ್ ಸಭೆ : ಕಮಲ ಸೇರ್ತಾರಾ ಸಂಸದೆ ಸುಮಲತಾ? title=

ಮಂಡ್ಯ : ಸಕ್ಕರೆ ನಾಡು ಮಂಡ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ, ಸಚಿವ ನಾರಾಯಣಗೌಡ ಅಧ್ಯಕ್ಷತೆಯಲ್ಲಿ ಕಚೇರಿಯಲ್ಲಿ ಗೌಪ್ಯ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಸಿಪಿ ಯೋಗೇಶ್ವರ್ ಸೇರಿದಂತೆ ಜಿಲ್ಲೆಯ ಪ್ರಮುಖ ನಾಯಕರು ಭಾಗಿಯಾಗಿದ್ದಾರೆ. ಮೇ 15ರ ಬಳಿಕ ಮಂಡ್ಯದಲ್ಲಿ ಬಿಜೆಪಿ ಬೃಹತ್ ಸಮಾವೇಶ ಮಾಡುವ ನಿಟ್ಟಿನಲ್ಲಿ ಸಭೆ ಕರೆಯಲಾಗಿದೆ ಎಂದು ಹೇಳಲಾಗುತ್ತಿದೆ. 

ಅಂದು ನಡೆಯುವ ಸಭೆಯಲ್ಲಿ ನಾಯಕರ ದಂಡೊಂದು ಬಿಜೆಪಿ ಸೇರಲಿದೆ. ಅಂದು ಬೃಹತ್ ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಸಂಸದೆ ಸುಮಲತಾ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 

ಇದನ್ನೂ ಓದಿ : Siddaramaiah : ಬಿಜೆಪಿದು ದೌರ್ಭಾಗ್ಯದ ಸರ್ಕಾರ : ಸಿದ್ದರಾಮಯ್ಯ

ಮದ್ದೂರು ವಿಧಾನಸಭಾ ಕ್ಷೇತ್ರದಿಂದ ತಮ್ಮ ಮಗ ಅಭಿಷೇಕ್ ಗೆ ಬಿಜೆಪಿ ಟಿಕೆಟ್ ಕೊಡಿಸಲು ಸಂಸದೆ ಸುಮಲತಾ ಅಂಬರೀಶ್ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಮಗನಿಗೆ ಮದ್ದೂರಿನಲ್ಲಿ ಟಿಕೆಟ್ ಕೊಡಿ ಎಂಬ ಬೇಡಿಕೆ ಇಟ್ಟು ಬಿಜೆಪಿ ಸೇರಲು ಸಂಸದೆ ಸುಮಲತಾ ಮುಂದಾಗಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News