BJP: 'ಕಾಂಗ್ರೆಸ್​ಗೆ ತಟ್ಟಿದೆ ಅಂಬೇಡ್ಕರ್​ ಶಾಪ: ಕಂಬ ನಿಲ್ಲಿಸಿದ್ರೂ ಗೆಲ್ಲುತ್ತಿದ್ದ ಪಕ್ಷಕ್ಕೆ ಕ್ಷೇತ್ರವೇ ಇಲ್ಲದಂತಾಗಿದೆ'

 ಬಿಜೆಪಿ ಎಸ್ ಟಿ  ಮೋರ್ಚಾ ರಾಜ್ಯಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿದ ನಳೀನ್ ಕುಮಾರ್ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  

Last Updated : Jan 28, 2021, 05:20 PM IST
  • ಕಾಂಗ್ರೆಸ್​ಗೆ ಮೊದಲು ಕರೆಂಟ್​ ಕಂಬ ನಿಲ್ಲಿಸಿದರೂ ಗೆಲ್ಲುವಂತಹ ಸ್ಥಿತಿಯಿತ್ತು ಆದರೆ ಈಗ ಪಕ್ಷಕ್ಕೆ ಅಂಬೇಡ್ಕರ್​ ಅವರ ಶಾಪ ತಟ್ಟಿದೆ
  • ಬಿಜೆಪಿ ಎಸ್ ಟಿ ಮೋರ್ಚಾ ರಾಜ್ಯಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿದ ನಳೀನ್ ಕುಮಾರ್ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
  • ನಮ್ಮ ಬಿಜೆಪಿ ಈಗ ಕೇವಲ ಬ್ರಾಹ್ಮಣರ ಪಾರ್ಟಿಯಾಗಿ ಉಳಿದಿಲ್ಲ. ಇದು ಕೇವಲ ವಿದ್ಯಾವಂತರ ಪಕ್ಷವಲ್ಲ. ಕೇವಲ ನಗರ ಕೇಂದ್ರೀಕೃತ ಪಕ್ಷವಲ್ಲ. ಬಿಜೆಪಿ ಈಗ ಸರ್ವಸ್ಪರ್ಶಿ ಸರ್ವಗ್ರಾಹಿ ಪಕ್ಷವಾಗಿದೆ.
BJP: 'ಕಾಂಗ್ರೆಸ್​ಗೆ ತಟ್ಟಿದೆ ಅಂಬೇಡ್ಕರ್​ ಶಾಪ: ಕಂಬ ನಿಲ್ಲಿಸಿದ್ರೂ ಗೆಲ್ಲುತ್ತಿದ್ದ ಪಕ್ಷಕ್ಕೆ ಕ್ಷೇತ್ರವೇ ಇಲ್ಲದಂತಾಗಿದೆ' title=

ಚಾಮರಾಜನಗರ: ಕಾಂಗ್ರೆಸ್​ಗೆ ಮೊದಲು ಕರೆಂಟ್​ ಕಂಬ ನಿಲ್ಲಿಸಿದರೂ ಗೆಲ್ಲುವಂತಹ ಸ್ಥಿತಿಯಿತ್ತು ಆದರೆ ಈಗ ಪಕ್ಷಕ್ಕೆ ಅಂಬೇಡ್ಕರ್​ ಅವರ ಶಾಪ ತಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ದೂರಿದ್ದಾರೆ.

ನಗರದಲ್ಲಿ ಬಿಜೆಪಿ ಎಸ್ ಟಿ ಮೋರ್ಚಾ ರಾಜ್ಯಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿದ ನಳೀನ್ ಕುಮಾರ್ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಬಿಜೆಪಿ(BJP) ಈಗ ಕೇವಲ ಬ್ರಾಹ್ಮಣರ ಪಾರ್ಟಿಯಾಗಿ ಉಳಿದಿಲ್ಲ. ಇದು ಕೇವಲ ವಿದ್ಯಾವಂತರ ಪಕ್ಷವಲ್ಲ. ಕೇವಲ ನಗರ ಕೇಂದ್ರೀಕೃತ ಪಕ್ಷವಲ್ಲ. ಬಿಜೆಪಿ ಈಗ ಸರ್ವಸ್ಪರ್ಶಿ ಸರ್ವಗ್ರಾಹಿ ಪಕ್ಷವಾಗಿದೆ. ಎಲ್ಲ ವರ್ಗಗಳ ಪಕ್ಷವಾಗಿ ದೇಶದ ಮೂಲೆಮೂಲೆಗಳಿಗೆ ವ್ಯಾಪಿಸಿದೆ ಎಂದು ಅವರು ಹೇಳಿದರು.

Karnataka Politics ಸದನ ಕದನಕ್ಕೆ ವೇದಿಕೆ ಸಜ್ಜು, ಇಂದಿನಿಂದ ವಿಧಾನಮಂಡಲ ಅಧಿವೇಶನ

ಮೊದಲು ಒಂದು ಕಾಲವಿತ್ತು. ಆಗ ಕಾಂಗ್ರೆಸ್​ನಿಂದ ಒಂದು ವಿದ್ಯುತ್ ಕಂಬ ನಿಲ್ಲಿಸಿದರು ಗೆಲುವು ನಿಶ್ಚಿತ ಎನ್ನುವಂತಿತ್ತು. ಅದರೆ ಇಂದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ನಿಲ್ಲಲು ಕ್ಷೇತ್ರ ಹುಡುಕುವಂತಾಗಿದೆ. ಸಿದ್ದರಾಮಯ್ಯ ಅವರನ್ನು ಜನರು ವರುಣಾ ಕ್ಷೇತ್ರದಿಂದ ಗುಡಿಸಿ ಹೊರ ಹಾಕಿದರು. ಇದೆಲ್ಲ ಅಂಬೇಡ್ಕರ್​ ಶಾಪದ ಪ್ರತಿಫಲ ಎಂದು ಅವರು ಹೇಳಿದರು.

BJP: ಸಭಾಪತಿ-ಉಪಸಭಾಪತಿ ಆಯ್ಕೆ: ಜೆಡಿಎಸ್ ಗೆ ಸಭಾಪತಿ ಸ್ಥಾನ ಬಿಟ್ಟುಕೊಟ್ಟ ಬಿಜೆಪಿ!

ಅಂಬೇಡ್ಕರ್​ಗೆ ಅತಿ ಹೆಚ್ಚ ದ್ರೋಹ ಮಾಡಿದ್ದು ಕಾಂಗ್ರೆಸ್. ಕಾಂಗ್ರೆಸ್​ಗೆ ಅಂಬೇಡ್ಕರ್ ಭಾವಚಿತ್ರ ಹಾಗೂ ಅವರ ಮತ ಬ್ಯಾಂಕ್ ಬೇಕಿತ್ತು ಆದರೆ ಅಂಬೇಡ್ಕರ್ ಬೇಡವಾಗಿದ್ದರು. ಸರ್ವಶ್ರೇಷ್ಠ ಸಂವಿಧಾನ ಕೊಟ್ಟವರು ಅಂಬೇಡ್ಕರ್. ಚಹಾ ಮಾರುವವರ ಮಗ ದೇಶದ ಪ್ರಧಾನಿ ಆಗಲು ಅಂಬೇಡ್ಕರ್ ಕಾರಣ. ಎಸ್ಸಿಎಸ್ಟಿ ಜನಾಂಗದ ಬಗ್ಗೆ ಕಣ್ಣೀರು ಹಾಕಿದ ಕಾಂಗ್ರೆಸ್ ಅವರನ್ನು ಉದ್ದಾರ ಆಗಲು ಬಿಡಲಿಲ್ಲ. ಶಿಕ್ಷಣ, ಉದ್ಯೋಗ ನೀಡದೆ ಕೇವಲ ಮತಬ್ಯಾಂಕ್ ಮಾಡಿಕೊಂಡಿತು ಎಂದು ನಳಿನ್​ ಕುಮಾರ್​ ವಾಗ್ದಾಳಿ ನಡೆಸಿದ್ದಾರೆ.

D.K.Shivakumar: ವಿನಯ್‌ ಗುರೂಜಿ ಜೊತೆ 20 ನಿಮಿಷ ಮಾತುಕತೆ ನಡೆಸಿದ ಡಿ.ಕೆ.ಶಿವಕುಮಾರ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News